AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಶಾಲೆಗಳ ಶುಲ್ಕ ನಿಗದಿ: ಹೈಕೋರ್ಟ್​ನಿಂದ ಸರ್ಕಾರದ ಮಧ್ಯಂತರ ಅರ್ಜಿ ವಿಚಾರಣೆ

ರಾಜ್ಯ ಸರ್ಕಾರದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಖಾಸಗಿ ಶಾಲೆಗಳು ಕೋರಿದವು. ಖಾಸಗಿ ಶಾಲೆಗಳ ಮನವಿ ಹಿನ್ನೆಲೆಯಲ್ಲಿ ಹೈಕೋರ್ಟ್​ ಅರ್ಜಿಯ ವಿಚಾರಣೆಯನ್ನು ಜೂನ್ 29ಕ್ಕೆ ಮುಂದೂಡಿತು.

ಖಾಸಗಿ ಶಾಲೆಗಳ ಶುಲ್ಕ ನಿಗದಿ: ಹೈಕೋರ್ಟ್​ನಿಂದ ಸರ್ಕಾರದ ಮಧ್ಯಂತರ ಅರ್ಜಿ ವಿಚಾರಣೆ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Jun 21, 2021 | 4:47 PM

Share

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಶುಲ್ಕ ನಿಗದಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಿಚಾರಣೆ ನಡೆಸಿತು. ರಾಜ್ಯ ಸರ್ಕಾರದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಖಾಸಗಿ ಶಾಲೆಗಳು ಕೋರಿದವು. ಖಾಸಗಿ ಶಾಲೆಗಳ ಮನವಿ ಹಿನ್ನೆಲೆಯಲ್ಲಿ ಹೈಕೋರ್ಟ್​ ಅರ್ಜಿಯ ವಿಚಾರಣೆಯನ್ನು ಜೂನ್ 29ಕ್ಕೆ ಮುಂದೂಡಿತು.

ಖಾಸಗಿ ಶಾಲೆಗಳಿಗೆ ರಾಜ್ಯ ಸರ್ಕಾರವು ಈ ಬಾರಿ ಒಟ್ಟು ನಿಗದಿತ ಶುಲ್ಕದ ಪೈಕಿ ಶೇ 70ರಷ್ಟನ್ನು ಮಾತ್ರ ಪಡೆಯುವಂತೆ ಆದೇಶಿಸಿತ್ತು. ಶುಲ್ಕದಲ್ಲಿ ಶೇ 30ರಷ್ಟು ಮೊತ್ತವನ್ನು ವಿನಾಯ್ತಿ ನೀಡಬೇಕು ಎಂಬ ರಾಜ್ಯ ಸರ್ಕಾರದ ಆದೇಶವನ್ನು ಖಾಸಗಿ ಶಾಲೆಗಳ ಒಕ್ಕೂಟ ರಿಟ್ ಅರ್ಜಿ ಸಲ್ಲಿಸುವ ಮೂಲಕ ಪ್ರಶ್ನಿಸಿತ್ತು. ಶುಲ್ಕ ನಿಗದಿಯ ಬಗ್ಗೆ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸಲು ಈ ವೇಳೆ ಪ್ರಸ್ತಾಪ ಸಲ್ಲಿಕೆಯಾಗಿತ್ತು. ಈ ವಿಚಾರದಲ್ಲಿ ರಾಜ್ಯ ಸರ್ಕಾರವು ಮಧ್ಯಂತರ ಅರ್ಜಿ ಸಲ್ಲಿಸಿತ್ತು.

ಕರ್ನಾಟಕ ಸರ್ಕಾರದ ಸೂಚನೆಯಂತೆ ಈ ವರ್ಷವೂ ಶಾಲಾ ಶುಲ್ಕದಲ್ಲಿ ಶೇ 30ರಷ್ಟು ರಿಯಾಯ್ತಿ ನೀಡಲು ಸಾಧ್ಯವಿಲ್ಲ ಎಂದು ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಈ ಹಿಂದೆ ಸ್ಪಷ್ಟಪಡಿಸಿದ್ದವು. ‘ನಮ್ಮ ಪರಿಸ್ಥಿತಿ ಅರ್ಥ ಮಾಡಿಕೊಂಡು ಈ ವರ್ಷವೂ ಶುಲ್ಕ ರಿಯಾಯ್ತಿ ನೀಡಬೇಕು’ ಎಂದು ಪೋಷಕರ ಒಕ್ಕೂಟಗಳು ಆಗ್ರಹಿಸಿದ್ದವು.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಈಚೆಗೆ ಮನವಿ ಸಲ್ಲಿಸಿದ್ದ ಪೋಷಕರ ಒಕ್ಕೂಟದ ಪ್ರತಿನಿಧಿಗಳು ಕಳೆದ ವರ್ಷವೂ ಕೆಲ ಶಾಲೆಗಳು ರಾಜ್ಯ ಸರ್ಕಾರದ ಸೂಚನೆ ಪಾಲಿಸಿರಲಿಲ್ಲ ಎಂದು ದೂರಿದ್ದವು. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದವು. ಖಾಸಗಿ ಶಾಲೆಗಳಿಗೆ ಇಂಥ ಸೂಚನೆ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ವಾದಿಸಿದ್ದವು.

(Karnataka High Court Adjourns Interem Petition Filed by State Government)

ಇದನ್ನೂ ಓದಿ: Lakshadweep ಲಕ್ಷದ್ವೀಪ ಹೈಕೋರ್ಟ್ ಕಾನೂನು ವ್ಯಾಪ್ತಿಯನ್ನು ಕೇರಳದಿಂದ ಕರ್ನಾಟಕಕ್ಕೆ ವರ್ಗಾಯಿಸಲು ಪ್ರಸ್ತಾಪ ಮುಂದಿಟ್ಟ ಪ್ರಫುಲ್ ಪಟೇಲ್

ಇದನ್ನೂ ಓದಿ: BBMP: ಬೆಂಗಳೂರಿನ ಕಸ ನಿರ್ವಹಣೆಗೆ ಕಂಪನಿ ಆರಂಭ; ಪಾಲಿಕೆ ತನ್ನ ಕೆಲಸವನ್ನು ಕಂಪನಿಗೆ ವಹಿಸಬಹುದೇ? ಹೈಕೋರ್ಟ್ ಪ್ರಶ್ನೆ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?