AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರು ಗ್ಯಾಜೆಟ್‌ ವಶಪಡಿಸಿಕೊಳ್ಳುವಾಗ ಈ ನಿಯಮ ಪಾಲಿಸಿ: ಕರ್ನಾಟಕ ಹೈಕೋರ್ಟ್​ನಿಂದ​ ಹೊಸ ಮಾರ್ಗಸೂಚಿ

ವೀರೇನ್​ ಖನ್ನಾ ತಮ್ಮ ಸ್ಮಾರ್ಟ್‌ಫೋನ್‌ನ ಬಯೋಮೆಟ್ರಿಕ್ ಪಾಸ್‌ವರ್ಡ್‌ಗಳು ಮತ್ತು ಇಮೇಲ್ ಖಾತೆಗಳ ಪಾಸ್‌ವರ್ಡ್‌ಗಳನ್ನು ಪೊಲೀಸರಿಗೆ ನೀಡುವ ಮೂಲಕ ತನಿಖೆಗೆ ಸಹಕರಿಸುವಂತೆ ಕೋರ್ಟ್​ ಆದೇಶಿಸಿದೆ.

ಪೊಲೀಸರು ಗ್ಯಾಜೆಟ್‌ ವಶಪಡಿಸಿಕೊಳ್ಳುವಾಗ ಈ ನಿಯಮ ಪಾಲಿಸಿ: ಕರ್ನಾಟಕ ಹೈಕೋರ್ಟ್​ನಿಂದ​ ಹೊಸ ಮಾರ್ಗಸೂಚಿ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Mar 13, 2021 | 8:50 PM

Share

ಬೆಂಗಳೂರು: ಕ್ರಿಮಿನಲ್ ಪ್ರಕರಣಗಳನ್ನು ತನಿಖೆ ಮಾಡುವಾಗ ನಡೆಸುವ ಶೋಧ ಕಾರ್ಯಾಚರಣೆಯಲ್ಲಿ ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್ ಮತ್ತು ಕಂಪ್ಯೂಟರ್‌ಗಳಂತಹ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳು ಮತ್ತು ಇ-ಮೇಲ್ ಖಾತೆಗಳನ್ನು ವಶಕ್ಕೆ ಪಡೆದುಕೊಳ್ಳುವಾಗ ಪೊಲೀಸರು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ಬಿಡುಗಡೆ​ ಮಾಡಿದೆ. ಇದಕ್ಕೆ ಸಂಬಂಧಿಸಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ ಯಾವುದೇ ನಿಯಮಗಳಿಲ್ಲ. ಹೀಗಾಗಿ, ಕರ್ನಾಟಕ ಸರ್ಕಾರವು ಇದಕ್ಕೆ ನಿಯಮಗಳನ್ನು ಬಿಡುಗಡೆ ಮಾಡುವವರೆಗೆ ಈ ಮಾರ್ಗಸೂಚಿಗಳು ಜಾರಿಯಲ್ಲಿರುತ್ತವೆ ಎಂದು ಹೈಕೋರ್ಟ್​ ಹೇಳಿದೆ.

ಡ್ರಗ್ಸ್ ಪ್ರಕರಣದ ಆರೋಪಿ ವಿರೇನ್ ಖನ್ನಾ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು ಈ ತೀರ್ಪು ನೀಡಿದ್ದಾರೆ. ವೀರೇನ್​ ಖನ್ನಾ ತಮ್ಮ ಸ್ಮಾರ್ಟ್‌ಫೋನ್‌ನ ಬಯೋಮೆಟ್ರಿಕ್ ಪಾಸ್‌ವರ್ಡ್‌ಗಳು ಮತ್ತು ಇಮೇಲ್ ಖಾತೆಗಳ ಪಾಸ್‌ವರ್ಡ್‌ಗಳನ್ನು ಪೊಲೀಸರಿಗೆ ನೀಡುವ ಮೂಲಕ ತನಿಖೆಗೆ ಸಹಕರಿಸುವಂತೆ ಕೋರ್ಟ್​ ಆದೇಶಿಸಿದೆ.

ವೈಜ್ಞಾನಿಕ ಕ್ರಮಗಳನ್ನು ಅನುಸರಿಸಲಾಗಿದೆಯೇ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಲು ತನಿಖಾ ತಂಡದ ಜತೆ ವಿಧಿ ವಿಜ್ಞಾನದ ತಂಡವೂ ತೆರಳಬೇಕು. ತನಿಖಾಧಿಕಾರಿಗಳು ಲ್ಯಾಪ್‌ಟಾಪ್ ಅಥವಾ ಕಂಪ್ಯೂಟರ್ ವಶಪಡಿಸಿಕೊಂಡರೆ ಅದನ್ನು ಅವರು ಬಳಸಬಾರದು ಮತ್ತು ಸಾಕ್ಷ್ಯಕ್ಕಾಗಿ ಲ್ಯಾಪ್​ಟಾಪ್ ಆನ್​ ಮಾಡಿ ಹುಡುಕಬಾರದು ಎಂದು ಕೋರ್ಟ್​ ಗೈಡ್​ಲೈನ್​ನಲ್ಲಿ ಹೇಳಿದೆ. ಲ್ಯಾಪ್‌ಟಾಪ್ ಅಥವಾ ಕಂಪ್ಯೂಟರ್ ಆಫ್ ಆಗಿದ್ದರೆ ಸಂಶೋದನೆಗೆ ತೆರಳಿದ ಅಧಿಕಾರಿಯು ಅದನ್ನು ಆನ್ ಮಾಡಬಾರದು. ಪರೀಕ್ಷಕ ಅಧಿಕಾರಿ ಲಭ್ಯವಿಲ್ಲದ ಸಂದರ್ಭದಲ್ಲಿ ಅದನ್ನು ಪ್ಯಾಕ್​ ಮಾಡಿ ಇಟ್ಟುಕೊಳ್ಳಬೇಕು ಎಂದು ಕೋರ್ಟ್​ ಹೇಳಿದೆ.

ಮೊಬೈಲ್ ಫೋನ್‌ಗಳನ್ನು ನಿರ್ವಹಣೆ ಮಾಡುವಾಗ ಮೊಬೈಲ್​ಗೆ ಯಾವುದೇ ವಯರ್​​ಲೆಸ್​ ನೆಟ್ವರ್ಕ್​​ಗೆ ಕನೆಕ್ಟ್​ ಆಗದಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್​ ಸೂಚನೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Netflix Mobile+ 299 Plan: ನೆಟ್​ಫ್ಲಿಕ್ಸ್​ನಿಂದ ಮೊಬೈಲ್+ ಪ್ಲಾನ್ ರೂ. 299ಕ್ಕೆ: ಏನಿದು ಪ್ಲಾನ್, ಯಾರಿಗೆ?

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ