AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರೂಪದ ಪ್ರಕರಣ: ಋತುಸ್ರಾವದ ವೇಳೆ ಸ್ವಚ್ಛತೆ ಕಾಪಾಡಿಕೊಳ್ಳಲು ಅಸಮರ್ಥ ಯುವತಿಯ ಗರ್ಭಾಶಯ ತೆಗೆಯಲು ಹೈಕೋರ್ಟ್ ಅನುಮತಿ

TV9 Kannada News: ತೀವ್ರ ದಿವ್ಯಾಂಗತೆಯಿಂದಾಗಿ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಲಾಗದ 23 ವರ್ಷದ ಯುವತಿಯ ಆರೋಗ್ಯದ ಹಿತದೃಷ್ಟಿಯಿಂದ, ಆಕೆಯ ಗರ್ಭಾಶಯ ತೆಗೆದುಹಾಕಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಈ ಸಂಬಂಧ ಅಪರೂಪದ ಆದೇಶ ನೀಡಿರುವ ನ್ಯಾಯಮೂರ್ತಿ ಸೂರಜ್​​ ಗೋವಿಂದರಾಜ್​​ ಅವರು, ಶಸ್ತ್ರಚಿಕಿತ್ಸೆಯನ್ನು ನಗರದ ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ನಡೆಸುವಂತೆ ಸೂಚಿಸಿದ್ದಾರೆ.

ಅಪರೂಪದ ಪ್ರಕರಣ: ಋತುಸ್ರಾವದ ವೇಳೆ ಸ್ವಚ್ಛತೆ ಕಾಪಾಡಿಕೊಳ್ಳಲು ಅಸಮರ್ಥ ಯುವತಿಯ ಗರ್ಭಾಶಯ ತೆಗೆಯಲು ಹೈಕೋರ್ಟ್ ಅನುಮತಿ
ಕರ್ನಾಟಕ ಹೈಕೋರ್ಟ್​​Image Credit source: Getty Images
ಪ್ರಸನ್ನ ಹೆಗಡೆ
| Edited By: |

Updated on:Jun 23, 2026 | 2:19 PM

Share

ಬೆಂಗಳೂರು, ಜೂನ್​​ 23: ಅಪರೂಪದ ಪ್ರಕರಣವೊಂದರಲ್ಲಿ 23 ವರ್ಷದ ದಿವ್ಯಾಂಗ ಯುವತಿಯ ಗರ್ಭಾಶಯವನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಈ ಶಸ್ತ್ರಚಿಕಿತ್ಸೆಯನ್ನು ನಗರದ ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ. ಯುವತಿ ದಿನನಿತ್ಯದ ಮೂಲಭೂತ ಚಟುವಟಿಕೆಗಳನ್ನು ಅರ್ಥಮಾಡಿಕೊಳ್ಳುವುದು, ನಿರ್ವಹಿಸುವುದು ಹಾಗೂ ಸ್ವತಂತ್ರವಾಗಿ ಬದುಕುವುದು ಸಾಧ್ಯವಾಗದ ಸ್ಥಿತಿಯಲ್ಲಿರುವುದನ್ನು ಗಮನಿಸಿ ಈ ಸಂಬಂಧ ನ್ಯಾಯಾಲಯ ತೀರ್ಪು ನೀಡಿದೆ.

ಪೋಷಕರ ವಾದ

ಯುವತಿಯ ಮಾಸಿಕ ಋತುಚಕ್ರ ಅನಿಯಮಿತವಾಗಿದ್ದು, ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಲು ಸಾಧ್ಯವಾಗದ ಕಾರಣ ಮರುಮರು ಸೋಂಕುಗಳು, ಜ್ವರ ಹಾಗೂ ಇತರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ ಎಂದು ಪೋಷಕರು ನ್ಯಾಯಾಲಯಕ್ಕೆ ತಿಳಿಸಿದ್ದರು. ತಾವು ವಯೋವೃದ್ಧರಾಗುತ್ತಿದ್ದು, ಮಗಳ ಏಕೈಕ ಆರೈಕೆದಾರರಾಗಿರುವ ಕಾರಣ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಒತ್ತಡ ಹೆಚ್ಚಾಗಿದೆ ಎಂದು ಉಲ್ಲೇಖಿಸಿ ಅವರು ಈ ಸಂಬಂಧ ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: 30 ವರ್ಷ ದಾಟಿದ ಬಳಿಕ ಪ್ರತಿಯೊಬ್ಬ ಮಹಿಳೆಯೂ ತಪ್ಪದೇ ಈ ಅಭ್ಯಾಸಗಳನ್ನು ಪಾಲಿಸಬೇಕು

ಯುವತಿ ಗ್ಲೋಬಲ್​​ ಡೆವಲಪ್​​ಮೆಂಟ್​​ ಡಿಲೆ ಮತ್ತು ಮೊಡರೇಟ್​​ ಪರ್ಮನೆಂಟ್ ಇಂಟಲೆಕ್ಚುವಲ್​​ ಆ್ಯಂಡ್​​ ಡೆವಲಪ್​​ಮೆಂಟಲ್​​ ಡಿಸಾಬಿಲಿಟಿ ​​ ಸಮಸ್ಯೆಯಿಂದ ಬಳಲುತ್ತಿದ್ದು, ಆಕೆಯ ಸಾಮಾಜಿಕ ವಯಸ್ಸು ಸುಮಾರು 5 ವರ್ಷ 4 ತಿಂಗಳ ಮಗುವಿನ ಮಟ್ಟದಲ್ಲಿದೆ. ಆಕೆಯ ಐಕ್ಯೂ (IQ) 36 ಆಗಿದ್ದು, ಶೇ.75ರಷ್ಟು ಶಾಶ್ವತ ಅಂಗವೈಕಲ್ಯವಿದೆ. ಜೊತೆಗೆ, ಆಕೆ ಅಪಸ್ಮಾರ (seizures) ಸಮಸ್ಯೆಯನ್ನೂ ಎದುರಿಸುತ್ತಿರುವ ಬಗ್ಗೆ ವೈದ್ಯಕೀಯ ಮಂಡಳಿ ಕೂಡ ವರದಿ ನೀಡಿತ್ತು.

ಹೀಗಾಗಿ ಈ ಸಂಬಂಧ ನ್ಯಾಯಮೂರ್ತಿ ಸೂರಜ್​​ ಗೋವಿಂದರಾಜ್​​ ಅವರು ಆದೇಶ ನೀಡಿದ್ದು, ಈ ಶಸ್ತ್ರಚಿಕಿತ್ಸೆಯನ್ನು ಆರೋಗ್ಯ, ಸ್ವಚ್ಛತೆ, ಘನತೆ, ಸುರಕ್ಷತೆ ಮತ್ತು ಜೀವನದ ಗುಣಮಟ್ಟವನ್ನು ಸುಧಾರಿಸುವ ಉದ್ದೇಶದಿಂದಲೇ ಶಿಫಾರಸು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದು ಜನಸಂಖ್ಯೆ ನಿಯಂತ್ರಣ, ಬಲವಂತದ ಸಂತಾನೋತ್ಪತ್ತಿ ತಡೆ ಅಥವಾ ಅಂಗವೈಕಲ್ಯ ಹೊಂದಿರುವ ವ್ಯಕ್ತಿಯ ಹಕ್ಕುಗಳನ್ನು ಕಸಿದುಕೊಳ್ಳುವ ಉದ್ದೇಶದ ಕ್ರಮವಲ್ಲ. ಬದಲಾಗಿ, ಯುವತಿಯ ಆರೋಗ್ಯ ಮತ್ತು ಕಲ್ಯಾಣದ ಹಿತದೃಷ್ಟಿಯಿಂದ ತೆಗೆದುಕೊಳ್ಳಲಾದ ನಿರ್ಧಾರ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:47 am, Tue, 23 June 26

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ