AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಒಬಿಸಿ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಿ: ಬೆಂಗಳೂರು ವಕೀಲರ ಸಂಘ ಆಗ್ರಹ

ಬೆಂಗಳೂರು ವಕೀಲರ ಸಂಘವು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಒಬಿಸಿ ಪ್ರಾತಿನಿಧ್ಯದ ಕೊರತೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವಕೀಲರ ಕೋಟಾದಡಿ ಇತ್ತೀಚಿನ ಶಿಫಾರಸುಗಳಲ್ಲಿ ಒಬಿಸಿ ಅಭ್ಯರ್ಥಿಗಳು ಇಲ್ಲದಿರುವುದು ಸಂವಿಧಾನದ ಸಮಾನತೆಯ ಆಶಯಕ್ಕೆ ವಿರುದ್ಧವಾಗಿದೆ ಎಂದಿರುವ ಸಂಘ, ಈ ವಿಚಾರವಾಗಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರುಗೆ ಪತ್ರ ಬರೆದಿದೆ.

ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಒಬಿಸಿ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಿ: ಬೆಂಗಳೂರು ವಕೀಲರ ಸಂಘ ಆಗ್ರಹ
ಕರ್ನಾಟಕ ಹೈಕೋರ್ಟ್‌ ಹಾಗೂ ಬೆಂಗಳೂರು ವಕೀಲರ ಸಂಘದ ಪತ್ರದ ಪ್ರತಿImage Credit source: tv9
ಗಣಪತಿ ಶರ್ಮಾ
|

Updated on: Jan 30, 2026 | 2:39 PM

Share

ಬೆಂಗಳೂರು, ಜನವರಿ 30: ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಹಿಂದುಳಿದ ವರ್ಗಗಳಿಗೆ (OBC/BCM-A) ಸೂಕ್ತ ಪ್ರಾತಿನಿಧ್ಯ ನೀಡುತ್ತಿಲ್ಲ ಎಂದು ಬೆಂಗಳೂರು ವಕೀಲರ ಸಂಘ (AAB) ಅಸಮಾಧಾನ ವ್ಯಕ್ತಪಡಿಸಿದ್ದು, ಕರ್ನಾಟಕ ಹೈಕೋರ್ಟ್‌ನ (Karnataka High Court) ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರಿಗೆ ಪತ್ರ ಬರೆದಿದೆ. ಇತ್ತೀಚಿನ ನೇಮಕಾತಿ ಪ್ರಕ್ರಿಯೆಯಲ್ಲಿ ಸಾಮಾಜಿಕ ನ್ಯಾಯವನ್ನು ಕಡೆಗಣಿಸಲಾಗಿದೆ ಎಂದು ಸಂಘವು ಜನವರಿ 28 ರಂದು ಬರೆದ ಈ ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದೆ.

ವಕೀಲರ ಕೋಟಾದಡಿ (Bar Quota) ಇತ್ತೀಚೆಗೆ ಶಿಫಾರಸು ಮಾಡಲಾದ 10 ಅಭ್ಯರ್ಥಿಗಳಲ್ಲಿ ಒಬ್ಬರೂ ಒಬಿಸಿ ಅಥವಾ ಬಿಸಿಎಂ-ಎ ವರ್ಗಕ್ಕೆ ಸೇರಿದವರಿಲ್ಲ ಎಂಬುದು ಸಂಘದ ಮುಖ್ಯ ಆರೋಪವಾಗಿದೆ. ಇದು ಸಂವಿಧಾನದ 15 ಮತ್ತು 16ನೇ ವಿಧಿಗಳ ಅಡಿಯಲ್ಲಿ ನೀಡಲಾದ ಸಮಾನ ಪ್ರಾತಿನಿಧ್ಯದ ಆಶಯಕ್ಕೆ ವಿರುದ್ಧವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಒಬಿಸಿ ಪ್ರಾತಿನಿಧ್ಯದ ಕೊರತೆ

ಪ್ರಸ್ತುತ ಕರ್ನಾಟಕ ಹೈಕೋರ್ಟ್‌ನಲ್ಲಿರುವ 38 ಜಡ್ಜ್​​ಗಳ ಪೈಕಿ ಕೇವಲ 2 ರಿಂದ 3 ಮಂದಿ ಮಾತ್ರ ಒಬಿಸಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ರಾಜ್ಯದ ಜನಸಂಖ್ಯೆಯಲ್ಲಿ ಒಬಿಸಿ ಸಮುದಾಯದ ಪಾಲು ಶೇಕಡಾ 25ಕ್ಕಿಂತ ಹೆಚ್ಚಿದ್ದರೂ, ನ್ಯಾಯಾಂಗದಲ್ಲಿ ಅವರ ಪ್ರಾತಿನಿಧ್ಯ ಕೇವಲ ಶೇಕಡಾ 5 ರಿಂದ 7 ರಷ್ಟಿದೆ ಎಂದು ಸಂಘವು ಅಂಕಿ-ಅಂಶಗಳ ಸಮೇತ ವಿವರಿಸಿದೆ.

ಜಿಲ್ಲಾ ನ್ಯಾಯಾಧೀಶರ ಕೋಟಾದಲ್ಲಿ ಅವಕಾಶ ಕೊಟ್ಟು ಹಿಂದುಳಿದ ವರ್ಗಗಳ ನೇಮಕಾತಿಯನ್ನು ಸರಿದೂಗಿಸುವ ಪ್ರಯತ್ನ ಮಾಡಬಾರದು. ಏಕೆಂದರೆ ಅದು ಹಿರಿತನದ ಮೇಲೆ ಆಧಾರಿತವಾಗಿರುತ್ತದೆ. ಆದರೆ ವಕೀಲರ ಕೋಟಾದಡಿ ನೇಮಕ ಮಾಡುವಾಗ ಅರ್ಹ ಮತ್ತು ಪ್ರತಿಭಾವಂತ ಒಬಿಸಿ ವಕೀಲರಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂದು ಸಂಘ ಒತ್ತಾಯಿಸಿದೆ.

ಇದನ್ನೂ ಓದಿ: ಕೊನೆಗೂ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್

ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಹೆಚ್.ವಿ. ಪ್ರವೀಣ್ ಗೌಡ ಮತ್ತು ಇತರ ಪದಾಧಿಕಾರಿಗಳು ಈ ಪತ್ರಕ್ಕೆ ಸಹಿ ಹಾಕಿದ್ದು, ಈಗಾಗಲೇ ಸಿದ್ಧಪಡಿಸಲಾದ ಪಟ್ಟಿಗೆ ಒಬಿಸಿ ಸಮುದಾಯದ ಇಬ್ಬರು ಹೆಚ್ಚುವರಿ ಅಭ್ಯರ್ಥಿಗಳನ್ನು ಸೇರಿಸಿ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ನ್ಯಾಯಾಂಗದಲ್ಲಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಲು ಈ ಕ್ರಮ ಅನಿವಾರ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ