AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಒಬಿಸಿ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಿ: ಬೆಂಗಳೂರು ವಕೀಲರ ಸಂಘ ಆಗ್ರಹ

ಬೆಂಗಳೂರು ವಕೀಲರ ಸಂಘವು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಒಬಿಸಿ ಪ್ರಾತಿನಿಧ್ಯದ ಕೊರತೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವಕೀಲರ ಕೋಟಾದಡಿ ಇತ್ತೀಚಿನ ಶಿಫಾರಸುಗಳಲ್ಲಿ ಒಬಿಸಿ ಅಭ್ಯರ್ಥಿಗಳು ಇಲ್ಲದಿರುವುದು ಸಂವಿಧಾನದ ಸಮಾನತೆಯ ಆಶಯಕ್ಕೆ ವಿರುದ್ಧವಾಗಿದೆ ಎಂದಿರುವ ಸಂಘ, ಈ ವಿಚಾರವಾಗಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರುಗೆ ಪತ್ರ ಬರೆದಿದೆ.

ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಒಬಿಸಿ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಿ: ಬೆಂಗಳೂರು ವಕೀಲರ ಸಂಘ ಆಗ್ರಹ
ಕರ್ನಾಟಕ ಹೈಕೋರ್ಟ್‌ ಹಾಗೂ ಬೆಂಗಳೂರು ವಕೀಲರ ಸಂಘದ ಪತ್ರದ ಪ್ರತಿImage Credit source: tv9
ಗಣಪತಿ ಶರ್ಮಾ
|

Updated on: Jan 30, 2026 | 2:39 PM

Share

ಬೆಂಗಳೂರು, ಜನವರಿ 30: ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಹಿಂದುಳಿದ ವರ್ಗಗಳಿಗೆ (OBC/BCM-A) ಸೂಕ್ತ ಪ್ರಾತಿನಿಧ್ಯ ನೀಡುತ್ತಿಲ್ಲ ಎಂದು ಬೆಂಗಳೂರು ವಕೀಲರ ಸಂಘ (AAB) ಅಸಮಾಧಾನ ವ್ಯಕ್ತಪಡಿಸಿದ್ದು, ಕರ್ನಾಟಕ ಹೈಕೋರ್ಟ್‌ನ (Karnataka High Court) ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರಿಗೆ ಪತ್ರ ಬರೆದಿದೆ. ಇತ್ತೀಚಿನ ನೇಮಕಾತಿ ಪ್ರಕ್ರಿಯೆಯಲ್ಲಿ ಸಾಮಾಜಿಕ ನ್ಯಾಯವನ್ನು ಕಡೆಗಣಿಸಲಾಗಿದೆ ಎಂದು ಸಂಘವು ಜನವರಿ 28 ರಂದು ಬರೆದ ಈ ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದೆ.

ವಕೀಲರ ಕೋಟಾದಡಿ (Bar Quota) ಇತ್ತೀಚೆಗೆ ಶಿಫಾರಸು ಮಾಡಲಾದ 10 ಅಭ್ಯರ್ಥಿಗಳಲ್ಲಿ ಒಬ್ಬರೂ ಒಬಿಸಿ ಅಥವಾ ಬಿಸಿಎಂ-ಎ ವರ್ಗಕ್ಕೆ ಸೇರಿದವರಿಲ್ಲ ಎಂಬುದು ಸಂಘದ ಮುಖ್ಯ ಆರೋಪವಾಗಿದೆ. ಇದು ಸಂವಿಧಾನದ 15 ಮತ್ತು 16ನೇ ವಿಧಿಗಳ ಅಡಿಯಲ್ಲಿ ನೀಡಲಾದ ಸಮಾನ ಪ್ರಾತಿನಿಧ್ಯದ ಆಶಯಕ್ಕೆ ವಿರುದ್ಧವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಒಬಿಸಿ ಪ್ರಾತಿನಿಧ್ಯದ ಕೊರತೆ

ಪ್ರಸ್ತುತ ಕರ್ನಾಟಕ ಹೈಕೋರ್ಟ್‌ನಲ್ಲಿರುವ 38 ಜಡ್ಜ್​​ಗಳ ಪೈಕಿ ಕೇವಲ 2 ರಿಂದ 3 ಮಂದಿ ಮಾತ್ರ ಒಬಿಸಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ರಾಜ್ಯದ ಜನಸಂಖ್ಯೆಯಲ್ಲಿ ಒಬಿಸಿ ಸಮುದಾಯದ ಪಾಲು ಶೇಕಡಾ 25ಕ್ಕಿಂತ ಹೆಚ್ಚಿದ್ದರೂ, ನ್ಯಾಯಾಂಗದಲ್ಲಿ ಅವರ ಪ್ರಾತಿನಿಧ್ಯ ಕೇವಲ ಶೇಕಡಾ 5 ರಿಂದ 7 ರಷ್ಟಿದೆ ಎಂದು ಸಂಘವು ಅಂಕಿ-ಅಂಶಗಳ ಸಮೇತ ವಿವರಿಸಿದೆ.

ಜಿಲ್ಲಾ ನ್ಯಾಯಾಧೀಶರ ಕೋಟಾದಲ್ಲಿ ಅವಕಾಶ ಕೊಟ್ಟು ಹಿಂದುಳಿದ ವರ್ಗಗಳ ನೇಮಕಾತಿಯನ್ನು ಸರಿದೂಗಿಸುವ ಪ್ರಯತ್ನ ಮಾಡಬಾರದು. ಏಕೆಂದರೆ ಅದು ಹಿರಿತನದ ಮೇಲೆ ಆಧಾರಿತವಾಗಿರುತ್ತದೆ. ಆದರೆ ವಕೀಲರ ಕೋಟಾದಡಿ ನೇಮಕ ಮಾಡುವಾಗ ಅರ್ಹ ಮತ್ತು ಪ್ರತಿಭಾವಂತ ಒಬಿಸಿ ವಕೀಲರಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂದು ಸಂಘ ಒತ್ತಾಯಿಸಿದೆ.

ಇದನ್ನೂ ಓದಿ: ಕೊನೆಗೂ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್

ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಹೆಚ್.ವಿ. ಪ್ರವೀಣ್ ಗೌಡ ಮತ್ತು ಇತರ ಪದಾಧಿಕಾರಿಗಳು ಈ ಪತ್ರಕ್ಕೆ ಸಹಿ ಹಾಕಿದ್ದು, ಈಗಾಗಲೇ ಸಿದ್ಧಪಡಿಸಲಾದ ಪಟ್ಟಿಗೆ ಒಬಿಸಿ ಸಮುದಾಯದ ಇಬ್ಬರು ಹೆಚ್ಚುವರಿ ಅಭ್ಯರ್ಥಿಗಳನ್ನು ಸೇರಿಸಿ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ನ್ಯಾಯಾಂಗದಲ್ಲಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಲು ಈ ಕ್ರಮ ಅನಿವಾರ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ