AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕ ಹೈಕೋರ್ಟ್ ಚೀಫ್ ಜಸ್ಟೀಸ್ ಪ್ರಸನ್ನ ಬಿ. ವರಾಳೆ ಹೆಸರು ಶಿಫಾರಸ್ಸು

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಾಮೂರ್ತಿ ಪ್ರಸನ್ನ ಬಿ. ವರಾಳೆ ಹೆಸರು ಶಿಫಾರಸು ಮಾಡಲಾಗಿದೆ. ಸುಪ್ರೀಂಕೋರ್ಟ್ ಕೊಲಿಜಿಯಂ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದ್ದು, ಶೀಘ್ರವೇ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಲಿದ್ದಾರೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕ ಹೈಕೋರ್ಟ್ ಚೀಫ್ ಜಸ್ಟೀಸ್ ಪ್ರಸನ್ನ ಬಿ. ವರಾಳೆ ಹೆಸರು ಶಿಫಾರಸ್ಸು
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ
TV9 Web
| Edited By: |

Updated on: Jan 19, 2024 | 7:58 PM

Share

ಬೆಂಗಳೂರು, (ಜನವರಿ 19): ಮುಂದಿನ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ (Prasanna B. Varale ಅವರ ಹೆಸರು ಶಿಫಾರಸು ಮಾಡಲಾಗಿದೆ. ಸುಪ್ರೀಂಕೋರ್ಟ್ ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದ್ದು, ಶೀಘ್ರವೇ ಪ್ರಸನ್ನ ಬಿ.ವರಾಳೆ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಲಿದ್ದಾರೆ. ಇನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್.ದಿನೇಶ್ ಕುಮಾರ್ ನೇಮಕವಾಗಲಿದ್ದಾರೆ.

ಕರ್ನಾಟಕ ಹೈಕೋರ್ಟ್​ನ ಹಾಲಿ 2ನೇ ಹಿರಿಯ ನ್ಯಾಯಮೂರ್ತಿಯಾಗಿರುವ ದಿನೇಶ್ ಕುಮಾರ್ ಅವರು ಇದೇ ಫೆಬ್ರವರಿ 24ರಂದು ನಿವೃತ್ತಿಯಾಗಲಿದ್ದಾರೆ. ಅದಕ್ಕೂ ಮುನ್ನವೇ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಪದೋನ್ನತಿ ನಂತರ ದಿನೇಶ್ ಕುಮಾರ್ ಅವರು ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಹುದ್ದೆ ಅಲಂಕರಿಸಲಿದ್ದಾರೆ.

ಈ ಮೊದಲು ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಪಿ.ಬಿ.ವರಾಳೆ (ಪ್ರಸನ್ನ ಬಿ.ವರಾಳೆ) ಅವರನ್ನು 2022ರ ಅಕ್ಟೋಬರ್ 11ರಂದು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿತ್ತು. ಇದೀಗ ನ್ಯಾಯಮೂರ್ತಿ ಸ್ಥಾನಕ್ಕೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.

ಪ್ರಸನ್ನ ಬಿ. ವರಾಳೆ ಬಗ್ಗೆ ಒಂದಿಷ್ಟು ಮಾಹಿತಿ

ನ್ಯಾಯಮೂರ್ತಿ ವರಾಳೆ ಅವರು 1962, ಜೂನ್ 23 ರಂದು ಕರ್ನಾಟಕದ ನಿಪಾಣಿಯಲ್ಲಿ ಜನಿಸಿದ್ದು ಅವರು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಿಂದ ಕಲೆ ಮತ್ತು ಕಾನೂನಿನಲ್ಲಿ ಪದವಿ ಪಡೆದುಕೊಂಡಿದ್ದರು.

ಆಗಸ್ಟ್ 1985ರಲ್ಲಿ ವಕೀಲರಾಗಿ ನೋಂದಾಯಿಸಿಕೊಂಡು ವೃತ್ತಿ ಜೀವನ ಆರಂಭಿಸಿದ್ದ ವರಾಳೆ ಅವರು ವಕೀಲರಾದ ಎಸ್ ಎನ್ ಲೋಯಾ ಅವರ ಬಳಿ ಆರಂಭದಲ್ಲಿ ಪ್ರಾಕ್ಟೀಸ್‌ ಮಾಡಿದ್ದರು. 1992ರವರೆಗೆ ಔರಂಗಾಬಾದ್‌ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಇನ್ನು ಜುಲೈ 18, 2008ರಲ್ಲಿ ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು.

ಅಸಿಸ್ಟೆಂಟ್ ಗೌರ್ನಮೆಂಟ್ ಪ್ಲೀಡರ್ ಮತ್ತು ಅಡಿಷನಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಸೇವೆ ಸಲ್ಲಿಸಿದ್ದರು. ಬಾಂಬೆ ಹೈಕೋರ್ಟ್ ನ ಔರಂಗಾಬಾದ್ ಪೀಠದಲ್ಲಿ ಸರ್ಕಾರ ಪರವಾಗಿ ಎಎನ್ ಡಿ ಅಡಿಷನಲ್ ಸ್ಟ್ಯಾಂಡಿಂಗ್ ಕೌನ್ಸೆಲ್ ಆಗಿದ್ದರು.

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ