AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಶಾಕ್: ಹೈಕೋರ್ಟ್ ಹೇಳಿದ್ದೇನು?

ಬೆಂಗಳೂರಿನಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬಂದ್ ಮಾಡುವಂತೆ ಈಗಾಗಲೇ ಕರ್ನಾಟಕ ಹೈಕೋರ್ಟ್​ ಆದೇಶ ಹೊರಡಿಸಿದೆ. ಇದನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮವಿಯನ್ನೂ ಸಹ ಹೈಕೋರ್ಟ್, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ನಿರಾಕರಿಸಿದೆ. ಅಲ್ಲದೇ ಮೇಲ್ಮನವಿ ಅರ್ಜಿಗಳ ವಿಚಾರಣೆ ಜೂ.24ಕ್ಕೆ ನಿಗದಿಪಡಿಸಿದ್ದು, ಅಂದೇ ಅಂತಿಮವಾಗಿ ತೀರ್ಮಾನಿಸಲಾಗುವುದು ತಿಳಿಸಿದೆ.

ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಶಾಕ್: ಹೈಕೋರ್ಟ್ ಹೇಳಿದ್ದೇನು?
Bike Taxi
ರಮೇಶ್​ ಎಮ್​.
| Edited By: |

Updated on:Jun 13, 2025 | 6:30 PM

Share

ಬೆಂಗಳೂರು(ಜೂ.13): ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಕರ್ನಾಟಕ ಹೈಕೋರ್ಟ್ ಶಾಕ್ ಕೊಟ್ಟಿದೆ. ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಕೋರ್ಟ್​ ನಿರಾಕರಿಸಿದೆ. ಬೆಂಗಳೂರಿನಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬಂದ್ ಮಾಡುವಂತೆ ಈಗಾಗಲೇ ಕರ್ನಾಟಕ ಹೈಕೋರ್ಟ್​ ಆದೇಶ ಹೊರಡಿಸಿದೆ. ಇದನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮವಿಯನ್ನೂ ವಿಚಾರಣೆ ನಡೆಸಿದ ಹೈಕೋರ್ಟ್, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ನಿರಾಕರಿಸಿದೆ. ಹೈಕೋರ್ಟ್‌ನ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಹಾಗೂ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ ಕುಮಾರ್‌ ಅವರಿದ್ದ ಪೀಠ, ಬೈಕ್ ಟ್ಯಾಕ್ಸಿ ಪರ ಮಧ್ಯಂತರ ಆದೇಶ ನೀಡಲು ನಿರಾಕಿರಿಸಿದ್ದು, ಮೇಲ್ಮನವಿ ಅರ್ಜಿಗಳನ್ನು ಜೂ.24ರಂದು ಅಂತಿಮವಾಗಿ ತೀರ್ಮಾನಿಸಲಾಗುವುದು ಎಂದಿದೆ. ಹೀಗಾಗಿ ಜೂನ್ 16ರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಇರುವುದಿಲ್ಲ.

ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದು, ಬೈಕ್ ಟ್ಯಾಕ್ಸಿಗಳ ಪರ್ಮಿಟ್ ನಿಯಮ ರೂಪಿಸಲು ಸರ್ಕಾರ ಸಿದ್ಧವಿಲ್ಲ. 8 ರಾಜ್ಯಗಳಲ್ಲಿ ಮಾತ್ರ ಬೈಕ್ ಟ್ಯಾಕ್ಸಿಗೆ ಪರ್ಮಿಟ್ ನೀಡಲಾಗಿದೆ. ಆದ್ರೆ, ಕರ್ನಾಟಕ ಸೇರಿ ಉಳಿದ ರಾಜ್ಯಗಳಲ್ಲಿ ಅನುಮತಿ ನೀಡಲಾಗಿಲ್ಲ. 4 ವರ್ಷಗಳಿಂದ ಮಧ್ಯಂತರ ಆದೇಶದ ಮೇಲೆ ಬೈಕ್ ಟ್ಯಾಕ್ಸಿ ನಡೆಯುತ್ತಿದೆ. ಸುಪ್ರೀಂಕೋರ್ಟ್ ಕೂಡಾ ಮಧ್ಯಂತರ ಆದೇಶ ನಿರಾಕರಿಸಿದೆ ಎಂದು ಕೋರ್ಟ್​ ಹೇಳಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆ ಜೂನ್ 15 ರವರೆಗೆ ವಿಸ್ತರಿಸಿದ ಹೈಕೋರ್ಟ್

ಮೋಟಾರು ವಾಹನ ಕಾಯ್ದೆಯ ನಿಯಮಗಳ ಪ್ರಕಾರವಾಗಿ ಹಳದಿ ನೋಂದಣಿ ಫಲಕ (ಯೆಲ್ಲೋ ಬೋರ್ಡ್) ಹೊಂದಿರುವ ಸಾರಿಗೆ ವಾಹನಗಳಂತೆ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಬೇಕು ಎಂಬುದಾಗಿ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ರೊಪ್ಪೆನ್ ಟ್ರಾನ್ಸ್​​ಪೋರ್ಟೇಶನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಮತ್ತು ಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಬೈಕ್ ಸೇವೆಯನ್ನು ಸ್ಥಗಿತಗೊಳಿಸಲು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಅಗ್ರಿಗ್ರೇಟರ್ ಸಂಸ್ಥೆಗಳು ಹೈಕೋರ್ಟ್​​ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ
Image
ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಆದೇಶ
Image
ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸ್ಥಗಿತಕ್ಕೆ ಹೈಕೋರ್ಟ್ ಆದೇಶ
Image
ಬೆಂಗಳೂರು ಬುಕಿಂಗ್ ಮಾಫಿಯಾ: ಟಿಪ್ಸ್ ಹೆಸರಲ್ಲಿ ದುಪ್ಪಟ್ಟು ಹಣ ವಸೂಲಿ
Image
ಸಿಹಿ ಸುದ್ದಿ ನೀಡಿದ ಅಮಿತ್​​ ಶಾ: ಓಲಾ-ಊಬರ್ ರೀತಿ ಸಹಕಾರಿ ಟ್ಯಾಕ್ಸಿ ಆರಂಭ

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳ ಸೇವೆ ಸ್ಥಗಿತಗೊಳಿಸಲು ನಿರ್ದೇಶನ ನೀಡಿರುವ ಏಕಸದಸ್ಯಪೀಠದ ಆದೇಶ ಪ್ರಶ್ನಿಸಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎನ್ಐ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್(ಓಲಾ), ವರ್ಕುಟಿ ಮಹೇಂದ್ರ ರೆಡ್ಡಿ(ಬೈಕ್ ಟ್ಯಾಕ್ಸಿಗಳ ಮಾಲೀಕರು) ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ಸಲ್ಲಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:25 pm, Fri, 13 June 25

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ