AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

56 ಮುನ್ಸಿಪಾಲ್ಟಿಗಳಿಗೆ ಮೀಸಲಾತಿ ಪ್ರಕಟಿಸಿ: ಹೈಕೋರ್ಟ್ ಸೂಚನೆ

ಜೂನ್ ತಿಂಗಳಲ್ಲೇ  56 ಮುನ್ಸಿಪಾಲ್ಟಿಗಳಿಗೆ ಅವಧಿ ಮುಗಿದಿದೆ. ಮೀಸಲಾತಿ ವಿಳಂಬದಿಂದ ಚುನಾವಣೆ ಘೋಷಣೆಯಾಗಿಲ್ಲ. ಹೀಗಾಗಿ ಮೀಸಲಾತಿ ಘೋಷಿಸಲು ನಿರ್ದೇಶನ ನೀಡಲು ಚುನಾವಣಾ ಆಯೋಗ ಹೈಕೋರ್ಟ್​ಗೆ ಮನವಿ ಮಾಡಿತ್ತು.

56 ಮುನ್ಸಿಪಾಲ್ಟಿಗಳಿಗೆ ಮೀಸಲಾತಿ ಪ್ರಕಟಿಸಿ: ಹೈಕೋರ್ಟ್ ಸೂಚನೆ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Sep 16, 2021 | 7:21 PM

Share

ಬೆಂಗಳೂರು: 56 ಮುನ್ಸಿಪಾಲ್ಟಿಗಳಿಗೆ ಮೀಸಲಾತಿ ಪ್ರಕಟಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. 2 ತಿಂಗಳಲ್ಲಿ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಿದೆ. ಈಮುನ್ನ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು.

ಜೂನ್ ತಿಂಗಳಲ್ಲೇ  56 ಮುನ್ಸಿಪಾಲ್ಟಿಗಳಿಗೆ ಅವಧಿ ಮುಗಿದಿದೆ. ಮೀಸಲಾತಿ ವಿಳಂಬದಿಂದ ಚುನಾವಣೆ ಘೋಷಣೆಯಾಗಿಲ್ಲ. ಹೀಗಾಗಿ ಮೀಸಲಾತಿ ಘೋಷಿಸಲು ನಿರ್ದೇಶನ ನೀಡಲು ಚುನಾವಣಾ ಆಯೋಗ ಹೈಕೋರ್ಟ್​ಗೆ ಮನವಿ ಮಾಡಿತ್ತು. ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಮನವಿ ಮಾಡಿದ್ದರು. 2 ತಿಂಗಳಲ್ಲಿ ಮೀಸಲಾತಿ ಅಂತಿಮಗೊಳಿಸಲು ಸೂಚನೆ ನೀಡಿದ ಕರ್ನಾಟಕ ಹೈಕೋರ್ಟ್​ನ ವಿಭಾಗೀಯ ಪೀಠ ವಿಚಾರಣೆಯನ್ನು ನವೆಂಬರ್17 ಕ್ಕೆ ಮುಂದೂಡಿದೆ.

ಕೆಆರ್​ಎಸ್ ಸುತ್ತಮುತ್ತ ಗಣಿಗಾರಿಕೆ ನಡೆಸುತ್ತಿದ್ದ 28 ಗಣಿ ಮಾಲೀಕರಿಗೆ ತಾತ್ಕಾಲಿಕ ಸಮಾಧಾನ ನೀಡಿದ ಹೈಕೋರ್ಟ್ ಕೆಆರ್​ಎಸ್ ಸುತ್ತಮುತ್ತ ಕಲ್ಲುಗಣಿಗಾರಿಕೆ ನಡೆಸುತ್ತಿದ್ದ 28 ಕಲ್ಲು ಗಣಿಗಾರಿಕೆ ಮಾಲೀಕರಿಗೆ ತಾತ್ಕಾಲಿಕ ರಿಲೀಫ್ ದೊರೆತಿದೆ. ಕಾನೂನು ಪ್ರಕ್ರಿಯೆ ಪಾಲಿಸದೇ ಗಣಿಗಾರಿಕೆಯ ಲೈಸೆನ್ಸ್ ರದ್ದು ಮಾಡಿದ್ದ ಮಂಡ್ಯ ಜಿಲ್ಲಾಧಿಕಾರಿಗಳ ಆದೇಶವನ್ನು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿದೆ. ಲೈಸೆನ್ಸ್ ರದ್ದಿಗೆ ಮುನ್ನ ಕಾನೂನು ಪ್ರಕ್ರಿಯೆ ಪಾಲಿಸಲು ಸೂಚನೆ ನೀಡಿರುವ ಹೈಕೋರ್ಟ್, ಗಣಿ ಮಾಲೀಕರಿಗೆ ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಿ ಅವರ ವಾದವನ್ನೂ ಆಲಿಸಿದ ನಂತರ ತೀರ್ಮಾನಿಸಲು ಸೂಚಿಸಿದೆ. ಸಕ್ಷಮ ಪ್ರಾಧಿಕಾರ ಲೈಸೆನ್ಸ್ ಬಗ್ಗೆ ತೀರ್ಮಾನಿಸಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದೆ.

ಇದನ್ನೂ ಓದಿ: 

ಎರಡು ತಿಂಗಳಲ್ಲಿ ಸಾಹಿತ್ಯ ಪರಿಷತ್ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

Char Dham Yatra 2021: ಚಾರ್​ಧಾಮ್​ ಯಾತ್ರೆಯ ಮೇಲಿನ ನಿಷೇಧ ತೆರವುಗೊಳಿಸಿದ ಉತ್ತರಾಖಂಡ್ ಹೈಕೋರ್ಟ್​; ಈ ಷರತ್ತುಗಳ ಪಾಲನೆ ಕಡ್ಡಾಯ

(Karnataka High Court directs announced reservation for 56 municipalities)

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ