AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಸಂಪೂರ್ಣ ವ್ಯಾಕ್ಸಿನೇಶನ್​ಗೆ ನೀಲನಕ್ಷೆ ರೂಪಿಸಲು ಹೈಕೋರ್ಟ್ ಸೂಚನೆ

Karnataka High Court on Covid Vaccination: ಸದ್ಯ 26 ಲಕ್ಷ ಜನರಿಗೆ 2ನೇ ಡೋಸ್ ಲಸಿಕೆ ಒದಗಿಸಬೇಕು. ಕೈಗೊಂಡ‌ ಕ್ರಮದ ಬಗ್ಗೆ ಮೇ 13ರಂದು ಉತ್ತರಿಸಿ ಎಂದು ಹೈಕೋರ್ಟ್​ನ ವಿಭಾಗೀಯ ಪೀಠ ರಾಜ್ಯ, ಕೇಂದ್ರ ಸರ್ಕಾರಗಳಿಗೆ ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಸಂಪೂರ್ಣ ವ್ಯಾಕ್ಸಿನೇಶನ್​ಗೆ ನೀಲನಕ್ಷೆ ರೂಪಿಸಲು ಹೈಕೋರ್ಟ್ ಸೂಚನೆ
ಕರ್ನಾಟಕ ಹೈಕೋರ್ಟ್
Follow us
guruganesh bhat
|

Updated on:May 11, 2021 | 3:22 PM

ಬೆಂಗಳೂರು: ರಾಜ್ಯದಲ್ಲಿ ಸಂಪೂರ್ಣ ವ್ಯಾಕ್ಸಿನೇಷನ್‌ಗೆ ನೀಲನಕ್ಷೆ ರೂಪಿಸುವಂತೆ ರಾಜ್ಯ, ಕೇಂದ್ರ ಸರ್ಕಾರಗಳಿಗೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. 2ನೇ ಲಸಿಕೆ ಡೋಸ್ ಕೊರತೆ ಗಂಭೀರ ಪರಿಸ್ಥಿತಿ ಸೃಷ್ಟಿಸಿದೆ. ರಾಜ್ಯ, ಕೇಂದ್ರ ಸರ್ಕಾರಗಳು ತಕ್ಷಣ ಕ್ರಮಕೈಗೊಳ್ಳಬೇಕು. ವ್ಯಾಕ್ಸಿನ್‌ ಕೊರತೆಯ ಸಮಸ್ಯೆ ಬಗೆಹರಿಸಬೇಕು. ಸದ್ಯ 26 ಲಕ್ಷ ಜನರಿಗೆ 2ನೇ ಡೋಸ್ ಲಸಿಕೆ ಒದಗಿಸಬೇಕು. ಕೈಗೊಂಡ‌ ಕ್ರಮದ ಬಗ್ಗೆ ಮೇ 13ರಂದು ಉತ್ತರಿಸಿ ಎಂದು ಹೈಕೋರ್ಟ್​ನ ವಿಭಾಗೀಯ ಪೀಠ ರಾಜ್ಯ, ಕೇಂದ್ರ ಸರ್ಕಾರಗಳಿಗೆ ಸೂಚನೆ ನೀಡಿದೆ.

ರಾಜ್ಯದಲ್ಲಿ 2ನೇ ಡೋಸ್ ವ್ಯಾಕ್ಸಿನ್ ಕೊರತೆ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಹೈಕೋರ್ಟ್ ತಕ್ಷಣ ಕ್ರಮ ಕೈಗೊಳ್ಳುವಂತೆ ಕೇಂದ್ರ, ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ರಾಜ್ಯದಲ್ಲಿ 2ನೇ ಡೋಸ್ ವ್ಯಾಕ್ಸಿನ್ ಕೊರತೆ ಎದುರಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2ನೇ ಡೋಸ್ ವ್ಯಾಕ್ಸಿನ್‌ ಪಡೆಯಬೇಕಾದ 26 ಲಕ್ಷ ಜನರಿಗೆ ವ್ಯಾಕ್ಸಿನ್ ಸಿಕ್ತಿಲ್ಲ. ರಾಜ್ಯ ಸರ್ಕಾರ ಸಲ್ಲಿಸಿದ ಅಂಕಿ ಅಂಶ ಪರಿಶೀಲಿಸಿದ ಹೈಕೋರ್ಟ್ ರಾಜ್ಯದಲ್ಲಿ ತಕ್ಷಣಕ್ಕೆ 26 ಲಕ್ಷ ಜನರಿಗೆ 2ನೇ ಡೋಸ್ ಲಸಿಕೆ ನೀಡಬೇಕಿದೆ. ಹೀಗಾಗಿ ಲಸಿಕೆ ಪೂರೈಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 1ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದ 28 ದಿನಗಳಲ್ಲಿ 2ನೇ ಡೋಸ್ ಲಸಿಕೆ ಪಡೆಯಬೇಕಿದೆ. 1ನೇ ಡೋಸ್ ಕೋವಿಶೀಲ್ಡ್‌ ಲಸಿಕೆ ಪಡೆದ 4 ರಿಂ 6 ವಾರಗಳೊಳಗೆ 2ನೇ ಡೋಸ್ ಪಡೆಯಬೇಕಿದೆ. ಆದರೆ ಸದ್ಯಕ್ಕೆ 26 ಲಕ್ಷ ಜನರಿಗೆ ನಿಗದಿತ ಅವಧಿಯೊಳಗೆ ಲಸಿಕೆ ಹಾಕಲು ಸಾಧ್ಯವಾಗದ ಬಗ್ಗೆ ಹೈಕೋರ್ಟ್ ಆತಂಕ ವ್ಯಕ್ತಪಡಿಸಿದೆ.

18 ರಿಂದ 44 ವರ್ಷದೊಳಗಿನವರ ವ್ಯಾಕ್ಸಿನೇಷನ್‌ ಗೆ ಮುಂದಾಗಿರುವ ಸರ್ಕಾರಕ್ಕೆ 45 ವರ್ಷ ಮೇಲ್ಪಟ್ಟವರಿಗೆ 2ನೇ ಡೋಸ್ ಲಸಿಕೆ ನೀಡಲು ಸಾಧ್ಯವಾಗಿಲ್ಲ. 1ನೇ ಡೋಸ್ ಪಡೆದ 65 ಲಕ್ಷ ಜನರಿಗೆ 2ನೇ ಡೋಸ್ ಲಸಿಕೆ ಹಾಕಬೇಕಿದೆ. ಈ ಪೈಕಿ 26 ಲಕ್ಷ ಜನರಿಗೆ ತಕ್ಷಣ ವ್ಯಾಕ್ಸಿನೇಷನ್ ಅಗತ್ಯವಿದೆ. ಆದ್ರೆ ಸದ್ಯಕ್ಕೆ ಸರ್ಕಾರದ ಬಳಿ ಕೇವಲ 9.32 ಲಕ್ಷ ಡೋಸ್ ಮಾತ್ರ ಉಳಿದಿದ್ದು ಗಂಭೀರ ಪರಿಸ್ಥಿತಿಯಿದೆ. ಹೀಗಾಗಿ ತಕ್ಷಣಕ್ಕೆ ವ್ಯಾಕ್ಸಿನ್ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಮೇ 13 ರೊಳಗೆ ಕೈಗೊಂಡ ಕ್ರಮದ ಮಾಹಿತಿ ನೀಡಬೇಕು. ರಾಜ್ಯ ಸರ್ಕಾರ ಸಂಪೂರ್ಣ ವ್ಯಾಕ್ಸಿನೇಷನ್‌ ಗೆ ನೀಲನಕ್ಷೆ ರೂಪಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಒಕಾ ಹಾಗೂ ನ್ಯಾಯಮೂರ್ತಿ ಅರವಿಂದ್‌ ಕುಮಾರ್ ರವರಿದ್ದ ವಿಭಾಗೀಯ ಪೀಠ ಆದೇಶ ನೀಡಿದೆ.

2ನೇ ಡೋಸ್ ಪಡೆಯಲು ವಿಳಂಬವಾದರೆ 1ನೇ ಡೋಸ್ ನಿಷ್ಕ್ರಿಯವಾಗುವುದಿಲ್ಲ. ಈ ಬಗ್ಗೆ ವೈಜ್ಞಾನಿಕ ಆಧಾರಗಳಿಲ್ಲ. ಕೋವಿಡ್ ನಿಂದ ಗುಣಮುಖರಾದವರಿಗೆ ಒಂದೇ ಡೋಸ್ ವ್ಯಾಕ್ಸಿನ್ ಸಾಕೆಂಬ ವರದಿ ಇದೆ. ಆದರೂ ಲಸಿಕೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದೆಂದು ಎಜಿ ಹೈಕೋರ್ಟ್ ಗೆ ವಿವರಣೆ ನೀಡಿದರು. ಇನ್ನು ಲಾಕ್‌ಡೌನ್‌ ನಿಂದ ತೊಂದರೆಗೊಳಗಾಗಿರುವ ಬಡವರಿಗೆ  ಆಹಾರ ಭದ್ರತೆ ಒದಗಿಸುವಂತೆ ಹೈಕೋರ್ಟ್ ನೀಡಿದ್ದ ಸೂಚನೆಯಂತೆ ಕೈಗೊಂಡ ಕ್ರಮದ ಮಾಹಿತಿಯನ್ನು ಸರ್ಕಾರ ಹೈಕೋರ್ಟ್ ಗೆ ಸಲ್ಲಿಸಿದೆ.

ಇದನ್ನೂ ಓದಿ: ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಸೋಂಕಿತ ಮಕ್ಕಳಿಗಿಲ್ಲ ಚಿಕಿತ್ಸೆ; 500 ಬೆಡ್​ಗಳಿರುವ ಆಸ್ಪತ್ರೆಯನ್ನು ಕೊವಿಡ್ ಆಸ್ಪತ್ರೆಯಾಗಿಸಿಲ್ಲ ಏಕೆ?

ಕೊವಿಡ್ ಬಗ್ಗೆ ಜನರ ದಾರಿ ತಪ್ಪಿಸಬೇಡಿ: ಸೋನಿಯಾ ಗಾಂಧಿಗೆ ಜೆ.ಪಿ.ನಡ್ಡಾ ಪತ್ರ

(karnataka high court directs state and union govt to prepare a blueprint of fully vaccination in karnataka)

Published On - 3:01 pm, Tue, 11 May 21

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ