AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿಣಿ ಸಿಂಧೂರಿ ಮಾನಹಾನಿ ಕೇಸ್: ಡಿ.ರೂಪಾ ಮೌದ್ಗಿಲ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಐಪಿಎಸ್ ಡಿ.ರೂಪಾ ಮೌದ್ಗಿಲ್ ವಿರುದ್ಧ ಐಎಎಸ್​ ರೋಹಿಣಿ ಸಿಂಧೂರಿ ಅವರು ಮಾನಹಾನಿ ಪ್ರಕರಣ ದಾಖಲಿಸಿದ್ದರು. ಇದನ್ನು ರದ್ದು ಕೋರಿ ಡಿ.ರೂಪ ಅವರು ಕರ್ನಾಟಕ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಮಾನನಷ್ಟ ಮೊಕದ್ದಮೆ ರದ್ದುಪಡಿಸಲು ನಿರಾಕರಿಸಿದೆ.

ರೋಹಿಣಿ ಸಿಂಧೂರಿ ಮಾನಹಾನಿ ಕೇಸ್: ಡಿ.ರೂಪಾ ಮೌದ್ಗಿಲ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಡಿ.ರೂಪಾ ಮೌದ್ಗಿಲ್ ಮತ್ತು ರೋಹಿಣಿ ಸಿಂಧೂರಿ
Ramesha M
| Edited By: |

Updated on: Aug 21, 2023 | 6:26 PM

Share

ಬೆಂಗಳೂರು, ಆಗಸ್ಟ್ 21: ತನ್ನ ವಿರುದ್ಧ ಐಎಎಸ್ ರೋಹಿಣಿ ಸಿಂಧೂರಿ (Rohini Sindhuri) ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ ರದ್ದು ಕೋರಿ ಐಪಿಎಸ್ ಡಿ.ರೂಪಾ ಮೌದ್ಗಿಲ್ (D.Roopa Moudgil) ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ರದ್ದುಗೊಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ತನ್ನ ಬಗ್ಗೆ ಮಾನಹಾನಿಕರ ಪೋಸ್ಟ್ ಹಂಚಿಕೊಂಡಿದ್ದ ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದ ಹಿನ್ನೆಲೆ ರೂಪಾ ವಿರುದ್ಧ ರೋಹಿನಿ ಸಿಂಧೂರಿ ಕಾನೂನು ಹೋರಾಟ ನಡೆಸುತ್ತಿದ್ದು, ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಕೋರ್ಟ್ ರೂಪಾ ಅವರಿಗೆ ಸಮನ್ಸ್​​ ಜಾರಿಗೊಳಿಸಿತ್ತು.

ಅದರಂತೆ ಕೋರ್ಟ್​​​ಗೆ ಹಾಜರಾಗಿದ್ದ ರೂಪಾ ಜಾಮೀನು ಪಡೆದಿದ್ದರು. ಅಲ್ಲದೆ, ಮಾನಹಾನಿ ಪ್ರಕರಣ ರದ್ದುಗೊಳಿಸುವಂತೆ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅವರಿಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ.

ಇದನ್ನೂ ಓದಿ: ಮತ್ತೊಂದು ಕೇಸ್​ನಲ್ಲೂ ಉಪೇಂದ್ರಗೆ ರಿಲೀಫ್​; ಎರಡನೇ ಎಫ್​ಐಆರ್​​ಗೂ ತಡೆ ನೀಡಿದ‌ ಹೈಕೋರ್ಟ್

ರೋಹಿಣಿ ಸಿಂಧೂರಿ ಮತ್ತು ರೂಪಾ ನಡುವೆ ವಾಕ್ಸಮರ, ಆರೋಪ ಪ್ರತ್ಯಾರೋಗಳು ನಡೆಯುತ್ತಿದ್ದವು. ಅದರಂತೆ, ರೋಹಿಣಿ ಸಿಂಧೂರಿ ವಿರುದ್ಧ​​ ಡಿ.ರೂಪಾ ಅವರು 19 ಆರೋಪ ಪಟ್ಟಿ ಬಿಡುಗಡೆ ಮಾಡಿದ್ದರು. ಶಾಸಕ ಸಾ.ರಾ.ಮಹೇಶ್ ಬಳಿ ರೋಹಿಣಿ ಸಂಧಾನಕ್ಕೆ ಹೋಗಿದ್ದು, ಡಿಕೆ ರವಿ ಆತ್ಮಹತ್ಯೆ ಪ್ರಕರಣ, ಚಾಮರಾಜನಗರ ಆಕ್ಸಿಜನ್ ದುರಂತ, ಐಎಎಸ್ ಅಧಿಕಾರಿಗಳಾದ ಶಿಲ್ಪಾ ನಾಗ್, ಹರ್ಷ ಗುಪ್ತ, ಮಣಿವಣ್ಣನ್, ಜೊತೆಗಿನ ಜಗಳ ಸೇರಿದಂತೆ ಅನೇಕ ವಿಚಾರಗಳನ್ನು ಕೆದಕಿದ್ದರು.

ರೂಪಾ ಅವರ ಆರೋಪಗಳ ಪ್ರತಿಯಾಗಿ ರೋಹಿಣಿ ಸಿಂಧೂರಿ ಅಭಿಮಾನಿಗಳು ರೂಪಾ ಅವರಿಗೆ ಒಂಬತ್ತು ಪ್ರಶ್ನೆಗಳನ್ನು ಮುಂದಿಟ್ಟು ಉತ್ತರಿಸುವಂತೆ ಸವಾಲೆಸೆದಿದ್ದರು. ಅಲ್ಲದೆ, ಸ್ವತಃ ರೋಹಿಣಿ ಅವರ ಪತಿ ಸುಧೀರ್​ ರೆಡ್ಡಿ ಆಕ್ರೋಶ ಹೊರಹಾಕಿದ್ದರು. ನಮ್ಮ ಕುಟುಂಬದ ಬಗ್ಗೆ ಅನಗತ್ಯವಾಗಿ ಮಾತನಾಡುವುದು ಸರಿಯಲ್ಲ. ರೋಹಿಣಿ ಸಿಂಧೂರಿ ಸಾಮಾಜಿಕ ಜಾಲತಾಣ ಬಳಕೆ ಮಾಡುತ್ತಿಲ್ಲ. ಫೋಟೋಗಳನ್ನು ಅವರು ಹ್ಯಾಕ್ ಮಾಡಿ ತೆಗೆದುಕೊಂಡಿರಬಹುದು. ರೋಹಿಣಿ ಸಿಂಧೂರಿ ಯಾರಿಗೆ ಫೋಟೋ ಕಳಿಸಿದ್ದಾರೆ ಹೆಸರು ಹೇಳಿ. ನನ್ನ ತಂದೆ ಕಾಲದಿಂದಲೂ ರಿಯಲ್ ಎಸ್ಟೇಟ್​​​ ಮಾಡುತ್ತಿದ್ದೇವೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್