AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಸಚಿವರು, 37 ಶಾಸಕರ ಪ್ರಮಾಣವಚನ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಬೆಳಗಾವಿ ಮೂಲದ ವ್ಯಕ್ತಿಯೋರ್ವರು ಶಾಸಕರು ಹಾಗೂ ಸಚಿವರ ಪ್ರಮಾಣವಚನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ. ಇದರಿಂದ ಕರ್ನಾಟಕದ 9 ಸಚಿವರು ಹಾಗೂ 37 ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

9 ಸಚಿವರು, 37 ಶಾಸಕರ ಪ್ರಮಾಣವಚನ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 15, 2023 | 10:57 PM

Share

ಬೆಂಗಳೂರು, (ಡಿಸೆಂಬರ್ 15): ನಿಗದಿತ ನಮೂನೆಯಲ್ಲಿ ಪ್ರಮಾಣವಚನ (Oath) ಸ್ವೀಕರಿಸದ ಹಿನ್ನೆಲೆಯಲ್ಲಿ 9 ಸಚಿವರು, 37 ಶಾಸಕರ ಪ್ರಮಾಣವಚನ ಪ್ರಶ್ನಿಸಿದ್ದ ಪಿಐಎಲ್ ವಜಾಗೊಂಡಿದೆ. ಸಂವಿಧಾನದ ಪ್ರಕಾರ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸದ‌ ಆರೋಪ ಮೇಲೆ ಡಿ.ಕೆ.‌ಶಿವಕುಮಾರ್, ಜಮೀರ್ ಅಹಮ್ಮದ್ ಖಾನ್, ಕೆ.ಎನ್.‌ರಾಜಣ್ಣ ಸೇರಿ 9 ಸಚಿವರು ಹಾಗೂ 37 ಶಾಸಕರ ಪ್ರಮಾಣವಚನ ಅಸಾಂವಿಧಾನಿಕವೆಂದು ಘೋಷಿಸುವಂತೆ ಕೋರಿ ಬೆಳಗಾವಿಯ ಭೀಮಪ್ಪ ಗುಂಡಪ್ಪ ಗಡಾದ್ ಎನ್ನುವರು ಸಲ್ಲಿಸಿದ್ದ ಪಿಐಎಲ್ ಅನ್ನು ಕರ್ನಾಟಕ ಹೈಕೋರ್ಟ್​ (Karnataka High Court) ವಜಾ ಮಾಡಿದೆ.

ಶಾಸಕರು ಮತದಾರರಿಂದ ಚುನಾಯಿತರಾಗಿದ್ದಾರೆ. ನಿಗದಿತ ನಮೂನೆಯ ಅಪೂರ್ಣ ಪಾಲನೆ ತಾಂತ್ರಿಕ ಅಂಶವಷ್ಟೇ. ಶಾಸಕರು ನಿರೀಕ್ಷೆಯಂತೆ ಜನರ ಕೆಲಸ‌ ಮಾಡುವುದು ಮುಖ್ಯ. ಕೆಲಸ ಮಾಡದವರು ಆಯ್ಕೆಯಾಗದಂತೆ ನೋಡಿಕೊಳ್ಳುವುದು ಜನರಿಗೆ ಬಿಟ್ಟದ್ದು ಎಂದು ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾ.ಕೃಷ್ಣ ದೀಕ್ಷಿತ್ ಅವರಿದ್ದ ಪೀಠ‌ ಅಭಿಪ್ರಾಯ ಪಟ್ಟಿದ್ದು, ಭೀಮಪ್ಪ ಗುಂಡಪ್ಪ ಗಡಾದ್ ಸಲ್ಲಿಸಿದ್ದ ಪಿಐಎಲ್ ವಜಾ ಮಾಡಿ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಶಾಸಕ ಜಮೀರ್ ಅಹಮದ್​ಗೆ ಸಚಿವ ಸ್ಥಾನ ಕೊಟ್ಟರೂ ರಾಜ್ಯಪಾಲರು ಪ್ರಮಾಣವಚನ ಬೋಧಿಸಬಾರದು ಎಂದು ಪತ್ರ 

ಕೆಲವು ಶಾಸಕರು ಹಾಗೂ ಸಚಿವರು ದೇವರ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸಿದ್ದರು. ಇನ್ನು ಕೆಲವರು ಬೇರೆ ಹೆಸರಿನ ಮೇಲೆ ಸಚಿವರಾಗಿ ಪ್ರಮಾಣವಚನ ಸ್ವೀರಿಸಿದ್ದರು. ಈ ಹಿನ್ನೆಲೆಯಲ್ಲಿ  ನಿಗದಿತ ನಮೂನೆ ಪ್ರಕಾರ ಸಚಿವರು, ಶಾಸಕರು ಪ್ರಮಾಣ ವಚನ ಸ್ವೀಕರಿಸಿಲ್ಲ ಎಂದು ಬೆಳಗಾವಿಯ ಭೀಮಪ್ಪ ಗುಂಡಪ್ಪ ಗಡಾದ್ ಎನ್ನುವರು ಹೈಕೋರ್ಟ್​ಗೆ ಪಿಐಎಲ್​ ಸಲ್ಲಿಸಿದ್ದರು.

Published On - 10:56 pm, Fri, 15 December 23

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ