AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಸಚಿವರು, 37 ಶಾಸಕರ ಪ್ರಮಾಣವಚನ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಬೆಳಗಾವಿ ಮೂಲದ ವ್ಯಕ್ತಿಯೋರ್ವರು ಶಾಸಕರು ಹಾಗೂ ಸಚಿವರ ಪ್ರಮಾಣವಚನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ. ಇದರಿಂದ ಕರ್ನಾಟಕದ 9 ಸಚಿವರು ಹಾಗೂ 37 ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

9 ಸಚಿವರು, 37 ಶಾಸಕರ ಪ್ರಮಾಣವಚನ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 15, 2023 | 10:57 PM

Share

ಬೆಂಗಳೂರು, (ಡಿಸೆಂಬರ್ 15): ನಿಗದಿತ ನಮೂನೆಯಲ್ಲಿ ಪ್ರಮಾಣವಚನ (Oath) ಸ್ವೀಕರಿಸದ ಹಿನ್ನೆಲೆಯಲ್ಲಿ 9 ಸಚಿವರು, 37 ಶಾಸಕರ ಪ್ರಮಾಣವಚನ ಪ್ರಶ್ನಿಸಿದ್ದ ಪಿಐಎಲ್ ವಜಾಗೊಂಡಿದೆ. ಸಂವಿಧಾನದ ಪ್ರಕಾರ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸದ‌ ಆರೋಪ ಮೇಲೆ ಡಿ.ಕೆ.‌ಶಿವಕುಮಾರ್, ಜಮೀರ್ ಅಹಮ್ಮದ್ ಖಾನ್, ಕೆ.ಎನ್.‌ರಾಜಣ್ಣ ಸೇರಿ 9 ಸಚಿವರು ಹಾಗೂ 37 ಶಾಸಕರ ಪ್ರಮಾಣವಚನ ಅಸಾಂವಿಧಾನಿಕವೆಂದು ಘೋಷಿಸುವಂತೆ ಕೋರಿ ಬೆಳಗಾವಿಯ ಭೀಮಪ್ಪ ಗುಂಡಪ್ಪ ಗಡಾದ್ ಎನ್ನುವರು ಸಲ್ಲಿಸಿದ್ದ ಪಿಐಎಲ್ ಅನ್ನು ಕರ್ನಾಟಕ ಹೈಕೋರ್ಟ್​ (Karnataka High Court) ವಜಾ ಮಾಡಿದೆ.

ಶಾಸಕರು ಮತದಾರರಿಂದ ಚುನಾಯಿತರಾಗಿದ್ದಾರೆ. ನಿಗದಿತ ನಮೂನೆಯ ಅಪೂರ್ಣ ಪಾಲನೆ ತಾಂತ್ರಿಕ ಅಂಶವಷ್ಟೇ. ಶಾಸಕರು ನಿರೀಕ್ಷೆಯಂತೆ ಜನರ ಕೆಲಸ‌ ಮಾಡುವುದು ಮುಖ್ಯ. ಕೆಲಸ ಮಾಡದವರು ಆಯ್ಕೆಯಾಗದಂತೆ ನೋಡಿಕೊಳ್ಳುವುದು ಜನರಿಗೆ ಬಿಟ್ಟದ್ದು ಎಂದು ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾ.ಕೃಷ್ಣ ದೀಕ್ಷಿತ್ ಅವರಿದ್ದ ಪೀಠ‌ ಅಭಿಪ್ರಾಯ ಪಟ್ಟಿದ್ದು, ಭೀಮಪ್ಪ ಗುಂಡಪ್ಪ ಗಡಾದ್ ಸಲ್ಲಿಸಿದ್ದ ಪಿಐಎಲ್ ವಜಾ ಮಾಡಿ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಶಾಸಕ ಜಮೀರ್ ಅಹಮದ್​ಗೆ ಸಚಿವ ಸ್ಥಾನ ಕೊಟ್ಟರೂ ರಾಜ್ಯಪಾಲರು ಪ್ರಮಾಣವಚನ ಬೋಧಿಸಬಾರದು ಎಂದು ಪತ್ರ 

ಕೆಲವು ಶಾಸಕರು ಹಾಗೂ ಸಚಿವರು ದೇವರ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸಿದ್ದರು. ಇನ್ನು ಕೆಲವರು ಬೇರೆ ಹೆಸರಿನ ಮೇಲೆ ಸಚಿವರಾಗಿ ಪ್ರಮಾಣವಚನ ಸ್ವೀರಿಸಿದ್ದರು. ಈ ಹಿನ್ನೆಲೆಯಲ್ಲಿ  ನಿಗದಿತ ನಮೂನೆ ಪ್ರಕಾರ ಸಚಿವರು, ಶಾಸಕರು ಪ್ರಮಾಣ ವಚನ ಸ್ವೀಕರಿಸಿಲ್ಲ ಎಂದು ಬೆಳಗಾವಿಯ ಭೀಮಪ್ಪ ಗುಂಡಪ್ಪ ಗಡಾದ್ ಎನ್ನುವರು ಹೈಕೋರ್ಟ್​ಗೆ ಪಿಐಎಲ್​ ಸಲ್ಲಿಸಿದ್ದರು.

Published On - 10:56 pm, Fri, 15 December 23

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು