AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ ಕಾಯಿನ್ ಪ್ರಕರಣ: ಆರೋಪಿಗಳಿಗೆ ತಾತ್ಕಾಲಿಕ ವಿನಾಯಿತಿ ನೀಡಿದ ಹೈಕೋರ್ಟ್

ಬಿಟ್ ಕಾಯಿನ್ ಹಗರಣ ಸಂಬಂಧ ಬೆಂಗಳೂರಿನ ಕಾಟನ್​ಪೇಟೆ ಠಾಣೆಯಲ್ಲಿ 2020ರಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಸೇರಿದಂತೆ ಮೂವರನ್ನು ಬಂಧಿಸಲಾಗಿತ್ತು. ಸದ್ಯ, ಪ್ರಕರಣದಲ್ಲಿ ತನಿಖೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ನಡೆಸುದ ಹೈಕೋರ್ಟ್, ಆರೋಪಿಗಳಿಗೆ ತಾತ್ಕಾಲಿಕ ರಿಲೀಫ್ ನೀಡಿದೆ.

ಬಿಟ್ ಕಾಯಿನ್ ಪ್ರಕರಣ: ಆರೋಪಿಗಳಿಗೆ ತಾತ್ಕಾಲಿಕ ವಿನಾಯಿತಿ ನೀಡಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
ರಮೇಶ್​ ಎಮ್​.
| Edited By: Rakesh Nayak Manchi|

Updated on: Sep 12, 2023 | 3:12 PM

Share

ಬೆಂಗಳೂರು, ಸೆ.12: ಬಿಟ್ ಕಾಯಿನ್ ಪ್ರಕರಣ (Bitcoin Case) ಸಂಬಂಧ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಸುನೀಶ್ ಹೆಗ್ಡೆ, ಹೇಮಂತ್ ಮುದ್ದಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ (Karnataka High Court) ತಾತ್ಕಾಲಿಕ ರಿಲೀಫ್ ನೀಡಿದೆ. ಮುಂದಿನ ದಿನಾಂಕದವರೆಗೆ ಕೋರ್ಟ್​ಗೆ ಖುದ್ದು ಹಾಜರಿಯಿಂದ‌ ವಿನಾಯಿತಿ ನೀಡಿದ ಏಕಸದಸ್ಯ ಪೀಠ, ವಿಚಾರಣೆಯನ್ನು ಅಕ್ಟೋಬರ್ 3ಕ್ಕೆ ಮುಂದೂಡಿತು.

ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ವೇಳೆ ವಾದ ಮಂಡಿಸಿದ ಎಸ್​ಪಿಪಿ‌ ಪ್ರಸನ್ನಕುಮಾರ್, ತನಿಖೆಗೆ ತಡೆ ನೀಡದಂತೆ ಮನವಿ ಮಾಡಿದರು. ಹಿಂದಿನ ತನಿಖೆಯಲ್ಲಿ ಲೋಪ ಕಂಡು ಬಂದಿರುವುದರಿಂದ ಹೊಸದಾಗಿ ಎಫ್ಐಆರ್ ದಾಖಲಿಸಿ ಎಫ್ಎಸ್ಎಲ್ ವರದಿ ಆಧರಿಸಿ ಮರು ತನಿಖೆ ನಡೆಸಲಾಗುತ್ತಿದೆ. ಅಧಿಕಾರಿಗಳ ಪಾತ್ರದ ಬಗ್ಗೆಯೂ ಸಿಐಡಿ ತನಿಖೆ ನಡೆಸುತ್ತಿರುವುದಾಗಿ ಮಾಹಿತಿ ನೀಡಿದರು.

ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣದ ತನಿಖೆ ಚುರುಕು: ಪ್ರಮುಖ ಮೂರು ಆರೋಪಿಗಳ ಮನೆ ಮೇಲೆ ಎಸ್​ಐಟಿ ದಾಳಿ

ಬಿಟ್ ಕಾಯಿನ್ ಪ್ರಕರಣದಲ್ಲಿ ಸಿಐಡಿ ಎಫ್ಐಆರ್ ಪ್ರಶ್ನಿಸಿ ತನಿಖೆಗೆ ತಡೆ ನೀಡುವಂತೆ ಕೋರಿ ಡಿವೈಎಸ್​ಪಿ ಶ್ರೀಧರ್ ಕೆ ಪೂಜಾರ್ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಎಫ್ಐಆರ್​ನಲ್ಲಿ ಆರೋಪಿ ಅಧಿಕಾರಿಗಳ ಹೆಸರು ನಮೂದಿಸಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ವಶಕ್ಕೆ ಪಡೆದಿದ್ದಾಗ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಲ್ಯಾಪ್ ಟಾಪ್ ತೆರೆಯಲಾಗಿದೆ. ಈ ವೇಳೆ ನಡೆದಿರಬಹುದಾದ ಕೃತ್ಯದ ಬಗ್ಗೆ ತನಿಖೆ ನಡೆದಿದೆ. ಹೀಗಾಗಿ ತನಿಖೆಗೆ ತಡೆ ನೀಡದಂತೆ ಎಸ್​​ಪಿಪಿ ಪ್ರಸನ್ನಕುಮಾರ್ ಮನವಿ ಮಾಡಿದ್ದಾರೆ.

ವಾದ ಆಲಿಸಿದ ನ್ಯಾ. ಹೇಮಂತ್ ಚಂದನ್ ಗೌಡರ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಸಾಕ್ಷಾಧಾರವಿಲ್ಲದೇ ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ತೆಗೆದುಕೊಳ್ಳಬಾರದು ಎಂದು ಸಿಐಡಿ ಪೊಲೀಸರಿಗೆ ಸೂಚನೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ