AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಅಶ್ಲೀಲ ಚಿತ್ರ ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಅಪರಾಧವಲ್ಲ ಎಂಬ ಆದೇಶ ವಾಪಸ್ಸು ಪಡೆದ ಕರ್ನಾಟಕ ಹೈಕೋರ್ಟ್​

ಮಕ್ಕಳ ಅಶ್ಲೀಲ ಚಿತ್ರಗಳನ್ನು ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಅಪರಾಧವಲ್ಲ ಎಂಬ ಆದೇಶ ನೀಡಿದ ಹೈಕೋರ್ಟ್​​​​, ಇದೀಗ ಆ ಆದೇಶವನ್ನು ವಾಪಸ್ಸು ಪಡೆದಿದೆ. ಆನ್‌ಲೈನ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ವೀಕ್ಷಿಸುವುದು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 ಬಿ ಅಡಿಯಲ್ಲಿ ಅಪರಾಧವಲ್ಲ ಎಂದು ಹೇಳಿತ್ತು. ಇದೀಗ ಈ ಆದೇಶದಲ್ಲಿ ತಪ್ಪಿದೆ ಎಂದು ಹೇಳಿದೆ.

ಮಕ್ಕಳ ಅಶ್ಲೀಲ ಚಿತ್ರ ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಅಪರಾಧವಲ್ಲ ಎಂಬ ಆದೇಶ ವಾಪಸ್ಸು ಪಡೆದ ಕರ್ನಾಟಕ ಹೈಕೋರ್ಟ್​
ಕರ್ನಾಟಕ ಹೈಕೋರ್ಟ್​​
ಅಕ್ಷಯ್​ ಪಲ್ಲಮಜಲು​​
|

Updated on:Jul 20, 2024 | 4:33 PM

Share

ಮಕ್ಕಳ ಅಶ್ಲೀಲ ಚಿತ್ರಗಳನ್ನು ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಅಪರಾಧವಲ್ಲ ಎಂದು ಕರ್ನಾಟಕ ಹೈಕೋರ್ಟ್​​​ ಜುಲೈ 10ರಂದು ಆದೇಶವನ್ನು ನೀಡಿತ್ತು. ಇದೀಗ ಈ ಆದೇಶವನ್ನು ಹಿಂಪಡೆದಿದೆ. ಆನ್‌ಲೈನ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ವೀಕ್ಷಿಸುವುದು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 ಬಿ ಅಡಿಯಲ್ಲಿ ಅಪರಾಧವಲ್ಲ ಎಂದು ಹೇಳಿತ್ತು. ಆದರೆ ಇದೀಗ ಈ ಆದೇಶವನ್ನು ಹಿಂಪಡೆದಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸೆಕ್ಷನ್ 67 ಬಿ (ಬಿ)ಯನ್ನು ಗಮನಿಸಿದೆ ತಪ್ಪಾಗಿ ಈ ಆದೇಶವನ್ನು ನೀಡಿದೆ ಎಂದು ಹೇಳಿದೆ.

ರಾಜ್ಯ ಸರ್ಕಾರವು ಸಲ್ಲಿಸಿದ ಅರ್ಜಿ ಆಧಾರ ಮೇಲೆ ಈ ಆದೇಶವನ್ನು ಸೆಕ್ಷನ್ 67 ಬಿ (ಎ) ಆಧಾರದ ಮೇಲೆ ನೀಡಲಾಗಿದೆ. ಕಾಯಿದೆಯ 67B (b) ವಿಭಾಗವು ಪಠ್ಯ ಅಥವಾ ಡಿಜಿಟಲ್ ಚಿತ್ರಗಳನ್ನು ರಚಿಸುವುದು, ಸಂಗ್ರಹಿಸುವುದು, ಹುಡುಕುವುದು, ಬ್ರೌಸ್ ಮಾಡುವುದು, ಡೌನ್‌ಲೋಡ್ ಮಾಡುವುದು, ಜಾಹೀರಾತು ಮಾಡುವುದು, ಪ್ರಚಾರ ಮಾಡುವುದು, ವಿನಿಮಯ ಮಾಡುವುದು ಅಥವಾ ಮಕ್ಕಳನ್ನು ಅಶ್ಲೀಲ ಅಥವಾ ಅಸಭ್ಯ ಅಥವಾ ಲೈಂಗಿಕವಾಗಿ ಅಶ್ಲೀಲ ರೀತಿಯಲ್ಲಿ ಚಿತ್ರಿಸುವುದು ಸೆಕ್ಷನ್ 67B ಅಡಿಯಲ್ಲಿ ವಿಚಾರಣೆಗೆ ಮುಕ್ತವಾಗಿರುತ್ತದೆ ಎಂದು ಹೇಳಲಾಗಿದೆ.

ಈ ಅರ್ಜಿ ಬಗ್ಗೆ ವಿಚಾರಣೆಯನ್ನು ನಡೆಸಲು ಆವಕಾಶ ನೀಡದೇ, ತೀರ್ಪು ನೀಡಿರುವುದು ತಪ್ಪು ಎಂದು ಹೇಳಿದೆ. ಈ ಆದೇಶವನ್ನು ರದ್ದುಗೊಳಿಸುವ ಮೂಲಕ ಹೆಚ್ಚಿನ ವಿಚಾರಣೆ ಅಗತ್ಯ ಎಂದು ಹೇಳಿದೆ. ಇನ್ನು ಒಮ್ಮೆ ಆದೇಶ ಹೊರಡಿಸಿದ ನಂತರ ಈ ಆದೇಶವನ್ನು ಹಿಂಪಡೆಯಲು ಅಥವಾ ಆದೇಶವನ್ನು ಪರಿಶೀಲಿಸಲು ಈ ನ್ಯಾಯಾಲಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಅರ್ಜಿದಾರರು ಪರ ವಕೀಲರು ವಾದಿಸಿದ್ದಾರೆ. ಈ ಅರ್ಜಿದಾರರ ವಕೀಲರ ವಾದವನ್ನು ತಿರಸ್ಕರಿಸಿದ ನ್ಯಾಯಾಲಯವು ಸೆಕ್ಷನ್ 362 CrPC ಬಾರ್ ಮೂಲಕ ಸಮಿತಿಯನ್ನು ರಚನೆ ಮಾಡಲಾಗುವುದು ಎಂದು ಹೇಳಲಾಗಿದೆ.

ಇದನ್ನೂ ಓದಿ: ವಿಧಾನಸೌಧದ ಗುಮ್ಮಟದಲ್ಲಿ ಕಾಣಿಸಿಕೊಂಡ ಬಿರುಕು; ದಿಢೀರ್ ಪರಿಶೀಲನೆ ನಡೆಸಿದ ಸ್ಪೀಕರ್ ಯುಟಿ ಖಾದರ್

ಇದರ ಜತೆಗೆ ವಕೀಲರಿಗೆ ಉತ್ತರ ವಕೀಲರು ನಾವು ಕೂಡ ಮನುಷ್ಯರೇ ನಮ್ಮಿಂದಲ್ಲೂ ತಪ್ಪು ಆಗುತ್ತದೆ. ಅದನ್ನು ಸರಿ ಮಾಡಲು ಅವಕಾಶ ಇದೆ. ನಾವೂ ದೋಷರಹಿತರಲ್ಲ ಎಂದು ಹೇಳಿದೆ. ಇದೀಗ ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆದು, ಮುಂದಿನ ತೀರ್ಪು ನೀಡಲಾಗುವುದು. ಈ ಆದೇಶವನ್ನು ರದ್ದು ಮಾಡಲಾಗುವುದು ಎಂದು ಪೀಠ ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:30 pm, Sat, 20 July 24

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ