AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೇಶ್ವರ್ ವಿರುದ್ಧ ಮಗಳು ನಿಶಾ ಮಾತನಾಡದಂತೆ ಕೋರ್ಟ್​​ನಿಂದ ತಡೆಯಾಜ್ಞೆ ತಂದ ತಾಯಿ!

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರ ವಿರುದ್ಧ ಮಗಳು ನಿಶಾ ಯೋಗೇಶ್ವರ್ ಸಿಡಿದೆದ್ದಿದ್ದಾರೆ. ಚುನಾವಣೆ ನಡುವೆ ಪುತ್ರಿಯ ಭಯ ಶುರುವಾಗಿದೆ. ಹೀಗಾಗಿ ಅವರು ಮಾತನಾಡದಂತೆ ಯೋಗೇಶ್ವ ಮತ್ತು ಅವರ 2ನೇ ಹೆಂಡತಿ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ.

ಯೋಗೇಶ್ವರ್ ವಿರುದ್ಧ ಮಗಳು ನಿಶಾ ಮಾತನಾಡದಂತೆ ಕೋರ್ಟ್​​ನಿಂದ ತಡೆಯಾಜ್ಞೆ ತಂದ ತಾಯಿ!
ನಿಶಾ, ಯೋಗೇಶ್ವರ್
Ramesha M
| Edited By: |

Updated on:Nov 04, 2024 | 9:47 PM

Share

ಬೆಂಗಳೂರು. (ನವೆಂಬರ್ 04): ಸಿ.ಪಿ. ಯೋಗೇಶ್ವರ್ ವಿರುದ್ಧ ಮಗಳು ನಿಶಾ ಮಾತನಾಡದಂತೆ ಮಲತಾಯಿ (ಯೋಗೇಶ್ವರ್ ಅವರ 2ನೇ ಹೆಂಡತಿ) ಕೋರ್ಟ್‌ನಿಂದ ತಡೆಯಾಜ್ಞೆಯನ್ನು ತಂದಿದ್ದಾರೆ. ಹೌದು..ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ವಿರುದ್ಧ ಪುತ್ರಿ ನಿಶಾ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಮಾನಹಾನಿಕರ ಅಥವಾ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್‌ ನಿರ್ಬಂಧಿಸಿ ಆದೇಶಿದೆ.

ಚನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ ಅವರ ವಿರುದ್ಧ ಹಲವು ಆರೋಪಗಳನ್ನು ಮಾಡುತ್ತಾ ಅವರ ಮಗಳು ನಿಶಾ ಯೋಗೇಶ್ವರ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದರು. ಉಪ ಚುನಾವಣೆ ಸಂದರ್ಭದಲ್ಲಿ ಈ ವಿಡಿಯೋ ಭಾರೀ ವೈರಲ್ ಆಗಿತ್ತು.

ಇದನ್ನೂ ಓದಿ: Nisha Yogeshwar: ನನ್ನ ಕುಟುಂಬದ ಗುಟ್ಟು ಬಯಲಿಗೆಳೆಯುವೆ; ಅಪ್ಪ ಸಿ.ಪಿ ಯೋಗೇಶ್ವರ್ ಕುರಿತ ಶಾಕಿಂಗ್ ವಿಷಯ ಬಿಚ್ಚಿಟ್ಟ ನಿಶಾ

ಚುನಾವಣೆ ಸಂದರ್ಭದಲ್ಲಿ ನಿಶಾ ಯೋಗೇಶ್ವರ್ ಅವರ ಆರೋಪದ ವಿಡಿಯೋ ಪರಿಣಾಮ ಯೋಗೇಶ್ವರ್ ಮೇಲೆ ಎಫೆಕ್ಟ್​ ಕೊಡುತ್ತೆ ಎನ್ನುವುದು ಗೊತ್ತಾಗುತ್ತಿದ್ದಂತೆಯೇ ಅವರ 2ನೇ ಹೆಂಡತಿ ಪಿ.ವಿ. ಶೀಲಾ ಹೈಕೋರ್ಟ್​ ಮೆಟ್ಟಿಲೇರಿದ್ದು, ಗಂಡ ಯೋಗೇಶ್ವರ್ ವಿರುದ್ಧ ಅವರ ಮೊದಲ ಪತ್ನಿಯ ಮಗಳು ಯಾವುದೇ ಹೇಳಿಕೆ ನೀಡದಂತೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದರು. ಈ ಅರ್ಜಿ ವಿಚಾರನೆ ನಡೆಸಿದ ಹೈಕೋರ್ಟ್​ ಯೋಗೇಶ್ವರ್​ ವಿರುದ್ಧ ನಿಶಾ ಯಾವುದೇ ಹೇಳಿಕೆ ನೀಡದಂತೆ ಆದೇಶ ಹೊರಡಿಸಿದೆ.

ವಿಚಾರಣೆ ವೇಳೆ ನನ್ನ ಪತಿ ಸಿ.ಪಿ.ಯೋಗೇಶ್ವರ್ ಚುನಾವಣೆಗೆ ಸ್ಪರ್ಧಿಸಿರುವ ಬೆನ್ನಲ್ಲೇ ನಮ್ಮ ಮಲಮಗಳಾದ ನಿಶಾ ಯೋಗೇಶ್ವರ್‌ ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಕುಟುಂಬದ ವಿರುದ್ಧ ಅವಹೇಳನಕಾರಿ, ಮಾನಹಾನಿಕಾರಕ, ಆಧಾರರಹಿತ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಸಂಬಂಧ ಬೆಂಗಳೂರಿನ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕೋರ್ಟ್ ಗಮನಕ್ಕೆ ತಂದಿದ್ದಾರೆ.

ಅರ್ಜಿಯ ಮಧ್ಯಂತರ ಮನವಿಯನ್ನು ಪರಿಗಣಿಸಿರುವ ಹೈಕೋರ್ಟ್, ಪ್ರತಿವಾದಿಗಳಾದ ಇನ್‌ಸ್ಟಾಗ್ರಾಂ, ಎಕ್ಸ್‌ ಕಾರ್ಪ್‌ (ಟ್ವಿಟರ್‌), ಗೂಗಲ್‌ ಮತ್ತು ಯೂಟ್ಯೂಬ್‌ ಜಾಲತಾಣಗಳಲ್ಲಿ ನಿಶಾ ಯೋಗೇಶ್ ಅವರ ನಿಂದನಾತ್ಮಕ ಹೇಳಿಕೆಗಳನ್ನು ಅಪ್‌ಲೋಡ್‌ ಮಾಡಬಾರದು ಮತ್ತು ಈಗಾಗಲೇ ಪ್ರಸಾರ ಮಾಡಲಾಗಿರುವ ತುಣಕುಗಳನ್ನು ತಡೆಹಿಡಿಯಬೇಕು ಎಂದು ಮಧ್ಯಂತರ ಆದೇಶ ನೀಡಿ ವಿಚಾರಣೆ ಮುಂದೂಡಿದೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 pm, Mon, 4 November 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್