AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಕೊರೊನಾ ಉಲ್ಬಣ: ಸರ್ಕಾರದೊಂದಿಗೆ ಸಹಕರಿಸುವಂತೆ ಖಾಸಗಿ ಆಸ್ಪತ್ರೆಗಳ ಸಂಘಕ್ಕೆ ಹೈಕೋರ್ಟ್ ನೋಟಿಸ್

ಪರಿಸ್ಥಿತಿ ಸುಧಾರಿಸಲು ಸರ್ಕಾರಕ್ಕೆ ನೆರವಾಗುವಂತೆ ಹೈಕೋರ್ಟ್‌ ಸೂಚನೆ ನೀಡಿದೆ. ಪರಿಸ್ಥಿತಿ ಸುಧಾರಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ಸರ್ಕಾರ ಏಪ್ರಿಲ್ 26ರ ಒಳಗೆ ಮಾಹಿತಿ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಹೈಕೋರ್ಟ್​ ಸರ್ಕಾರಕ್ಕೂ ಸೂಚಿಸಿದೆ.

ಕರ್ನಾಟಕದಲ್ಲಿ ಕೊರೊನಾ ಉಲ್ಬಣ: ಸರ್ಕಾರದೊಂದಿಗೆ ಸಹಕರಿಸುವಂತೆ ಖಾಸಗಿ ಆಸ್ಪತ್ರೆಗಳ ಸಂಘಕ್ಕೆ ಹೈಕೋರ್ಟ್ ನೋಟಿಸ್
ಕರ್ನಾಟಕ ಹೈಕೋರ್ಟ್
Ghanashyam D M | ಡಿ.ಎಂ.ಘನಶ್ಯಾಮ
|

Updated on:Apr 23, 2021 | 7:26 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸೋಂಕು ಉಲ್ಬಣಿಸಿದ ಹಿನ್ನೆಲೆ‌ ಖಾಸಗಿ ಆಸ್ಪತ್ರೆಗಳ ಸಂಘ ‘ಫನಾ’ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಪರಿಸ್ಥಿತಿ ಸುಧಾರಿಸಲು ಸರ್ಕಾರಕ್ಕೆ ನೆರವಾಗುವಂತೆ ಹೈಕೋರ್ಟ್‌ ಸೂಚನೆ ನೀಡಿದೆ. ಪರಿಸ್ಥಿತಿ ಸುಧಾರಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ಸರ್ಕಾರ ಏಪ್ರಿಲ್ 26ರ ಒಳಗೆ ಮಾಹಿತಿ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಹೈಕೋರ್ಟ್​ ಸರ್ಕಾರಕ್ಕೂ ಸೂಚಿಸಿದೆ.

ರೆಮ್‌ಡಿಸಿವಿರ್‌, ಆಕ್ಸಿಜನ್ ಪ್ರತಿದಿನದ ಲಭ್ಯತೆ, ಬೇಡಿಕೆ ಮತ್ತು ಪೂರೈಕೆಯ ಮಾಹಿತಿ ನೀಡಬೇಕು. ಕೊವಿಡ್‌ ಆಸ್ಪತ್ರೆಗಳ ಎದುರು ಹೆಲ್ಪ್ ಡೆಸ್ಕ್ ಸ್ಥಾಪಿಸಬೇಕು. ಸಣ್ಣ ಆಸ್ಪತ್ರೆಗಳಿಗೆ ಆಕ್ಸಿಜನ್ ಸಿಲಿಂಡರ್ ಕೊರತೆ ನೀಗಿಸಲು ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎ.ಎಸ್.ಒಕಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಪೀಠವು ನಿರ್ದೇಶನ ನೀಡಿತು.

ಬೆಂಗಳೂರಿನ 6 ಚಿತಾಗಾರಗಳಲ್ಲೂ ಕೊವಿಡ್ ಮೃತರ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ನೀಡಿತು.

ಖಾಸಗಿ ಆಸ್ಪತ್ರೆಗಳಿಗೆ ಫನಾ ಪತ್ರ ಕೊವಿಡ್ ವಿರುದ್ಧದ ಹೋರಾಟದಲ್ಲಿ ಸರ್ಕಾರ ಜತೆ ಕೈಜೋಡಿಸಬೇಕು ಎಂದು ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿಗಳಿಗೆ ಖಾಸಗಿ ಆಸ್ಪತ್ರೆಗಳ ಸಂಘ ‘ಫನಾ’ ಪತ್ರ ಬರೆದಿದೆ. ಕೊವಿಡ್ ವಿರುದ್ಧದ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ. ಸರ್ಕಾರದ ಆದೇಶಗಳನ್ನು ಪಾಲಿಸಿ ಎಂದು ಫನಾದಿಂದ ಸೂಚಿಸಿದೆ.

ಕೊರೊನಾ ಸೋಂಕಿತರಿಂದ ಹೆಚ್ಚುವರಿ ಶುಲ್ಕ ಪಡೆಯಬೇಡಿ. ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನೇ ಪಡೆದುಕೊಳ್ಳಿ. ಸೋಂಕಿತರಿಗೆ ಬೆಡ್‌ ಹಂಚಿಕೆಯಲ್ಲಿ ಪಾರದರ್ಶಕತೆ ಇರಲಿ. ಸರ್ಕಾರಕ್ಕೆ ಕೊವಿಡ್ ಬೆಡ್ ಕಾಯ್ದಿರಿಸುವ ಬಗ್ಗೆ ಮಾಹಿತಿ ಕೊಡಿ. ಪೋರ್ಟಲ್‌ನಲ್ಲಿ ಬೆಡ್ ವಿವರಗಳನ್ನು ಅಪ್​ಡೇಟ್ ಮಾಡಿ. ಸಣ್ಣಪುಟ್ಟ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗಳಿಗೆ ಕೆಟ್ಟ ಹೆಸರು ಬೇಡ. ಒಟ್ಟಾಗಿ ಕೊವಿಡ್ ವಿರುದ್ಧ ಹೋರಾಡಿ, ಜಯ ಸಾಧಿಸೋಣ ಎಂದು ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿಗಳಿಗೆ ಫನಾ ಪತ್ರ ಬರೆದಿದೆ.

ಚುನಾವಣೆಗಳಿಗೆ ತಡೆ ನೀಡಲು ಹೈಕೋರ್ಟ್​ ನಕಾರ ನಗರಪಾಲಿಕೆ ಚುನಾವಣೆಗಳಿಗೆ ತಡೆ ನೀಡಲು ಹೈಕೋರ್ಟ್ ಸಾಧ್ಯವಿಲ್ಲ ಎಂದು ಹೇಳಿದೆ. ಈ ಸಂಬಂಧ ಆಮ್ ಆದ್ಮಿ ಪಕ್ಷ (ಆಪ್) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಚುನಾವಣೆ ನಡೆಸುವುದು ಆಯೋಗಕ್ಕೆ ಬಿಟ್ಟ ವಿಚಾರ ಎಂದು ಹೈಕೋರ್ಟ್ ತನ್ನ ನಿಲುವು ಸ್ಪಷ್ಟಪಡಿಸಿದೆ.

ಸಂವಿಧಾನದ ಚೌಕಟ್ಟಿನಲ್ಲಿ, ನಿರ್ದಿಷ್ಟ ಅವಧಿಯೊಳಗೆ ಚುನಾವಣೆ ನಡೆಯಬೇಕು. ಈಗ ಹಲವು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಕರ್ನಾಟಕದಲ್ಲೂ ಉಪ ಚುನಾವಣೆ ನಡೆದಿದೆ. ಚುನಾವಣೆಯನ್ನು ಯಾವ ರೀತಿ ನಡೆಸಬೇಕು ಎಂಬ ಬಗ್ಗೆ ಚುನಾವಣಾ ಆಯೋಗವೇ ತೀರ್ಮಾನಿಸಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿತು.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ ಸೇರಿ 10 ಸ್ಥಳೀಯ ಸಂಸ್ಥೆಗಳಿಗೆ ಈಗ ಚುನಾವಣೆ ನಡೆಯಬೇಕಿದೆ.

(Karnataka High court issues Notice to Pvt Hospital Association Phana to Cooperate with Govt)

ಇದನ್ನೂ ಓದಿ: ಮೇ 1 ರ ನಂತರ ಕೊವಿಶೀಲ್ಡ್​ ದರ ಬದಲು, ಕೇಂದ್ರಕ್ಕೆ ರೂ 150, ರಾಜ್ಯಗಳಿಗೆ ರೂ 400, ಖಾಸಗಿ ಆಸ್ಪತ್ರೆಗಳಿಗೆ ರೂ 600 ಕ್ಕೆ ಲಸಿಕೆ ಮಾರಾಟ

ಇದನ್ನೂ ಓದಿ: ಕೋವಿಡ್ ಇಲ್ಲದವರಿಗೆ ಚಿಕಿತ್ಸೆ ವಿಚಾರ: ಸರ್ಕಾರದ ಕಾರ್ಯವೈಖರಿಗೆ ಹೈಕೋರ್ಟ್ ಅಸಮಾಧಾನ

Published On - 7:24 pm, Fri, 23 April 21

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!