AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನದಲ್ಲಿ 600 ಪ್ರಕರಣಗಳ ವಿಚಾರಣೆ: ಅರ್ಜಿಗಳ ಕ್ಷಿಪ್ರ ವಿಲೇವಾರಿಯಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ದಾಖಲೆ

ಕರ್ನಾಟಕ ಹೈಕೋರ್ಟ್​ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಬಾಕಿ ಪ್ರಕರಣಗಳ ವಿಲೇವಾರಿಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಒಂದೇ ದಿನ ಬರೋಬ್ಬರಿ 600 ಪ್ರಕರಣಗಳ‌ ವಿಚಾರಣೆ ನಡೆಸಿ ಮಹತ್ವದ ಮೈಲುಗಲ್ಲು ಸಾಧಿಸಿದ್ದಾರೆ. ಈ ಮೂಲಕ ಈ ಹಿಂದಿನ ತಮ್ಮದೇ ದಾಖಲೆಯನ್ನು ಮುರಿದಿದ್ದಾರೆ.

ಒಂದೇ ದಿನದಲ್ಲಿ 600 ಪ್ರಕರಣಗಳ ವಿಚಾರಣೆ: ಅರ್ಜಿಗಳ ಕ್ಷಿಪ್ರ ವಿಲೇವಾರಿಯಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ದಾಖಲೆ
ಕರ್ನಾಟಕ ಹೈಕೋರ್ಟ್ ನ್ಯಾ. ಎಂ.ನಾಗಪ್ರಸನ್ನ
Ramesha M
| Edited By: |

Updated on: Jun 18, 2024 | 10:33 PM

Share

ಬೆಂಗಳೂರು, (ಜೂನ್ 18):  ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಎಂ.ನಾಗಪ್ರಸನ್ನ(Karnataka high court justice nagaprasanna) ಅವರು ಒಂದು ದಿನದ ಕಲಾಪದ ಅವಧಿಯಲ್ಲಿ ವಿವಿಧ ಪ್ರಕಾರಗಳ 608 ಅರ್ಜಿಗಳನ್ನು ಅದೇ ದಿನವೇ ವಿಲೇವಾರಿ ಮಾಡುವ ಮೂಲಕ ಕರ್ನಾಟಕ ಹೈಕೋರ್ಟ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಹೌದು.. ಬಾಕಿ ಪ್ರಕರಣಗಳ ವಿಲೇವಾರಿಯಲ್ಲಿ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಇಂದು (ಜೂನ್ 18) ಮತ್ತೊಂದು ಮಹತ್ವದ ಮೈಲುಗಲ್ಲು ಸಾಧಿಸಿದ್ದಾರೆ. ಇಂದು (ಜೂನ್ 18) ಒಂದೇ ದಿನ 600 ಅರ್ಜಿಗಳ ವಿಚಾರಣೆ ನಡೆಸಿದ್ದಾರೆ. ಈ ಪೈಕಿ ಹಲವು ಪ್ರಕರಣಗಳಲ್ಲಿ ಮಧ್ಯಂತರ ಆದೇಶ ಪ್ರಕಟಿಸಿರುವ ನ್ಯಾಯಮೂರ್ತಿಗಳು ಕೆಲ ಅರ್ಜಿಗಳಲ್ಲಿ ಅಂತಿಮ ಆದೇಶವನ್ನೂ ನೀಡಿದ್ದಾರೆ. ಈ ಹಿಂದೆಯೂ ಬಾಕಿ ಪ್ರಕರಣಗಳ ವಿಲೇವಾರಿಯಲ್ಲಿ ನ್ಯಾಯಮೂರ್ತಿ ಎಂ..‌ನಾಗಪ್ರಸನ್ನ ಹಲವು ವಿಕ್ರಮಗಳನ್ನು ಸಾಧಿಸಿದ್ದಾರೆ.

2023 ರ ಜೂ.12 ರಂದು ಒಂದೇ ದಿನ 522 ಪ್ರಕರಣಗಳ ವಿಚಾರಣೆ ನಡೆಸಿದ್ದರು. 2023 ರ ಡಿ.20 ರಂದು ಒಂದೇ ದಿನ 50 ತೀರ್ಪುಗಳನ್ನು ಪ್ರಕಟಿಸಿದ್ದರು. ಕೆಲ ತಿಂಗಳ ಹಿಂದೆ ಒಂದೇ ದಿನ 480 ಪ್ರಕರಣಗಳ ಪಟ್ಟಿ ಮಾಡಿಸಿ ಅಷ್ಟೂ ಪ್ರಕರಣಗಳ ವಿಚಾರಣೆ ನಡೆಸಿದ್ದರು. ಬಾಕಿ ಪ್ರಕರಣಗಳ ವಿಲೇವಾರಿಯಲ್ಲಿ ಮಹತ್ವದ ಪಾತ್ರ ವಹಿಸಿರುವ ನ್ಯಾಯಮೂರ್ತಿಗಳು ಪ್ರಕರಣವನ್ನು ಶೀಘ್ರವಾಗಿ ಗ್ರಹಿಸಿ ತಕ್ಷಣ ಆದೇಶ ಪ್ರಕಟಿಸುವುದರಲ್ಲಿ ಸಿದ್ದಹಸ್ತರೆಂದು ಹೈಕೋರ್ಟ್ ವಕೀಲರ ವಲಯದಲ್ಲಿ ಖ್ಯಾತಿ ಗಳಿಸಿದ್ದಾರೆ.

ಇದನ್ನೂ ಓದಿ: ಮೋದಿ-ಸಿದ್ದರಾಮಯ್ಯ ಸರ್ಕಾರ, ದರ್ಶನ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ

ಈಗ ಕ್ರಿಮಿನಲ್ ಪ್ರಕರಣ ರದ್ದು ಕೋರಿರುವ ಅರ್ಜಿಗಳ ವಿಚಾರಣೆಯ ಹೊಣೆ ಹೊತ್ತಿರುವ ನ್ಯಾಯಮೂರ್ತಿ ಇಂದು ಒಂದೇ ದಿನ 600 ಪ್ರಕರಣಗಳ ವಿಚಾರಣೆ ನಡೆಸುವ ಮೂಲಕ ತ್ವರಿತ ನ್ಯಾಯದಾನದ ಹಾದಿಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು 2019ರ ನವೆಂಬರ್ 26ರಂದು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡು 2021ರ ಸೆಪ್ಟಂಬರ್ 8ರಂದು ಕಾಯಂ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​