ಒಂದೇ ದಿನದಲ್ಲಿ 600 ಪ್ರಕರಣಗಳ ವಿಚಾರಣೆ: ಅರ್ಜಿಗಳ ಕ್ಷಿಪ್ರ ವಿಲೇವಾರಿಯಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ದಾಖಲೆ

ಕರ್ನಾಟಕ ಹೈಕೋರ್ಟ್​ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಬಾಕಿ ಪ್ರಕರಣಗಳ ವಿಲೇವಾರಿಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಒಂದೇ ದಿನ ಬರೋಬ್ಬರಿ 600 ಪ್ರಕರಣಗಳ‌ ವಿಚಾರಣೆ ನಡೆಸಿ ಮಹತ್ವದ ಮೈಲುಗಲ್ಲು ಸಾಧಿಸಿದ್ದಾರೆ. ಈ ಮೂಲಕ ಈ ಹಿಂದಿನ ತಮ್ಮದೇ ದಾಖಲೆಯನ್ನು ಮುರಿದಿದ್ದಾರೆ.

ಒಂದೇ ದಿನದಲ್ಲಿ 600 ಪ್ರಕರಣಗಳ ವಿಚಾರಣೆ: ಅರ್ಜಿಗಳ ಕ್ಷಿಪ್ರ ವಿಲೇವಾರಿಯಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ದಾಖಲೆ
ಕರ್ನಾಟಕ ಹೈಕೋರ್ಟ್ ನ್ಯಾ. ಎಂ.ನಾಗಪ್ರಸನ್ನ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Jun 18, 2024 | 10:33 PM

ಬೆಂಗಳೂರು, (ಜೂನ್ 18):  ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಎಂ.ನಾಗಪ್ರಸನ್ನ(Karnataka high court justice nagaprasanna) ಅವರು ಒಂದು ದಿನದ ಕಲಾಪದ ಅವಧಿಯಲ್ಲಿ ವಿವಿಧ ಪ್ರಕಾರಗಳ 608 ಅರ್ಜಿಗಳನ್ನು ಅದೇ ದಿನವೇ ವಿಲೇವಾರಿ ಮಾಡುವ ಮೂಲಕ ಕರ್ನಾಟಕ ಹೈಕೋರ್ಟ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಹೌದು.. ಬಾಕಿ ಪ್ರಕರಣಗಳ ವಿಲೇವಾರಿಯಲ್ಲಿ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಇಂದು (ಜೂನ್ 18) ಮತ್ತೊಂದು ಮಹತ್ವದ ಮೈಲುಗಲ್ಲು ಸಾಧಿಸಿದ್ದಾರೆ. ಇಂದು (ಜೂನ್ 18) ಒಂದೇ ದಿನ 600 ಅರ್ಜಿಗಳ ವಿಚಾರಣೆ ನಡೆಸಿದ್ದಾರೆ. ಈ ಪೈಕಿ ಹಲವು ಪ್ರಕರಣಗಳಲ್ಲಿ ಮಧ್ಯಂತರ ಆದೇಶ ಪ್ರಕಟಿಸಿರುವ ನ್ಯಾಯಮೂರ್ತಿಗಳು ಕೆಲ ಅರ್ಜಿಗಳಲ್ಲಿ ಅಂತಿಮ ಆದೇಶವನ್ನೂ ನೀಡಿದ್ದಾರೆ. ಈ ಹಿಂದೆಯೂ ಬಾಕಿ ಪ್ರಕರಣಗಳ ವಿಲೇವಾರಿಯಲ್ಲಿ ನ್ಯಾಯಮೂರ್ತಿ ಎಂ..‌ನಾಗಪ್ರಸನ್ನ ಹಲವು ವಿಕ್ರಮಗಳನ್ನು ಸಾಧಿಸಿದ್ದಾರೆ.

2023 ರ ಜೂ.12 ರಂದು ಒಂದೇ ದಿನ 522 ಪ್ರಕರಣಗಳ ವಿಚಾರಣೆ ನಡೆಸಿದ್ದರು. 2023 ರ ಡಿ.20 ರಂದು ಒಂದೇ ದಿನ 50 ತೀರ್ಪುಗಳನ್ನು ಪ್ರಕಟಿಸಿದ್ದರು. ಕೆಲ ತಿಂಗಳ ಹಿಂದೆ ಒಂದೇ ದಿನ 480 ಪ್ರಕರಣಗಳ ಪಟ್ಟಿ ಮಾಡಿಸಿ ಅಷ್ಟೂ ಪ್ರಕರಣಗಳ ವಿಚಾರಣೆ ನಡೆಸಿದ್ದರು. ಬಾಕಿ ಪ್ರಕರಣಗಳ ವಿಲೇವಾರಿಯಲ್ಲಿ ಮಹತ್ವದ ಪಾತ್ರ ವಹಿಸಿರುವ ನ್ಯಾಯಮೂರ್ತಿಗಳು ಪ್ರಕರಣವನ್ನು ಶೀಘ್ರವಾಗಿ ಗ್ರಹಿಸಿ ತಕ್ಷಣ ಆದೇಶ ಪ್ರಕಟಿಸುವುದರಲ್ಲಿ ಸಿದ್ದಹಸ್ತರೆಂದು ಹೈಕೋರ್ಟ್ ವಕೀಲರ ವಲಯದಲ್ಲಿ ಖ್ಯಾತಿ ಗಳಿಸಿದ್ದಾರೆ.

ಇದನ್ನೂ ಓದಿ: ಮೋದಿ-ಸಿದ್ದರಾಮಯ್ಯ ಸರ್ಕಾರ, ದರ್ಶನ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ

ಈಗ ಕ್ರಿಮಿನಲ್ ಪ್ರಕರಣ ರದ್ದು ಕೋರಿರುವ ಅರ್ಜಿಗಳ ವಿಚಾರಣೆಯ ಹೊಣೆ ಹೊತ್ತಿರುವ ನ್ಯಾಯಮೂರ್ತಿ ಇಂದು ಒಂದೇ ದಿನ 600 ಪ್ರಕರಣಗಳ ವಿಚಾರಣೆ ನಡೆಸುವ ಮೂಲಕ ತ್ವರಿತ ನ್ಯಾಯದಾನದ ಹಾದಿಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು 2019ರ ನವೆಂಬರ್ 26ರಂದು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡು 2021ರ ಸೆಪ್ಟಂಬರ್ 8ರಂದು ಕಾಯಂ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ಈ ರಾಶಿಯವರು ಇಂದು ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವರು
ಈ ರಾಶಿಯವರು ಇಂದು ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವರು
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್