AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೌಕರರ ವರ್ಗಾವಣೆಗಿಂತ ಮಾಡಬೇಕಾದ ಉತ್ತಮ ಕೆಲಸಗಳಿವೆ: ಸಿಎಂಗೆ ಹೈಕೋರ್ಟ್ ತರಾಟೆ

ಕರ್ನಾಟಕ ರಾಜ್ಯ ಸರ್ಕಾರರ ಸಾರ್ವತ್ರಿಕ ವರ್ಗಾವಣೆಗೆ ನಿಯಮಗಳು ಇವೆ. ವರ್ಗಾವಣೆ ಅಧಿಕಾರ ಸಂಬಂಧಪಟ್ಟ ಇಲಾಖೆಗಳದ್ದಾಗಿರುತ್ತೆ. ಆದ್ರೆ, ಇತ್ತೀಚೆಗೆ ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪ ಮಾಡುತ್ತಿದೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೇ ವರ್ಗಾವಣೆಗಿಂತ ಸಿಎಂಗೆ ಮಾಡಬೇಕಾದ ಉತ್ತಮ ಕೆಲಸಗಳಿವೆ ಎಂದು ಚಾಟಿ ಬೀಸಿದೆ.

ನೌಕರರ ವರ್ಗಾವಣೆಗಿಂತ ಮಾಡಬೇಕಾದ ಉತ್ತಮ ಕೆಲಸಗಳಿವೆ: ಸಿಎಂಗೆ ಹೈಕೋರ್ಟ್ ತರಾಟೆ
Siddaramaiah And High Court
Ramesha M
| Edited By: |

Updated on: Mar 19, 2026 | 7:57 PM

Share

ಬೆಂಗಳೂರು, (ಮಾರ್ಚ್ 19): ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯಲ್ಲಿ (government employees transfer) ಸಿಎಂ ಹಸ್ತಕ್ಷೇಪಕ್ಕೆ ಕರ್ನಾಟಕ ಹೈಕೋರ್ಟ್ (Karnataka High Court) ಆಕ್ಷೇಪ ವ್ಯಕ್ತಪಡಿಸಿದೆ. ಬೆಸ್ಕಾಂ ಎಇ ಎಸ್.ಚೇತನ್ ಎಂಬುವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಕೆ.ಸಿಂಗ್, ಹಾಗೂ ಟಿ.ಎಂ.ನದಾಫ್ ಅವರಿದ್ದ ಹೈಕೋರ್ಟ್ ಪೀಠ, ಸಿಎಂ ಸಿದ್ದರಾಮಯ್ಯಗೆ (siddaramaiah )ಚಾಟಿ ಬೀಸಿದೆ. ಸಿಎಂಗೆ ನೌಕರರ ವರ್ಗಾವಣೆಗಿಂತ ಮಾಡಬೇಕಾದ ಉತ್ತಮ ಕೆಲಸಗಳಿವೆ. ಸರ್ಕಾರಿ ನೌಕರರ ವರ್ಗಾವಣೆ ವಿಚಾರ ಆಯಾ ಇಲಾಖೆಗೇ ಬಿಡಬೇಕು. ಮುಖ್ಯಮಂತ್ರಿಗಳ ಕಚೇರಿ ವರ್ಗಾವಣೆಯ ಮನವಿ ಸ್ವೀಕರಿಸಬಾರದು ಎಂದು ತರಾಟೆಗೆ ತೆಗೆದುಕೊಂಡಿದೆ.

ಸರ್ಕಾರಿ ನೌಕರರ ವರ್ಗಾವಣೆ ವಿಚಾರ ಆಯಾ ಇಲಾಖೆಗೇ ಬಿಡಬೇಕು. ಮುಖ್ಯಮಂತ್ರಿಗಳ ಕಚೇರಿ ವರ್ಗಾವಣೆಯ ಮನವಿ ಸ್ವೀಕರಿಸಬಾರದು. ಇಂತಹ ವಿಚಾರಗಳಿಗೆ ಮುಖ್ಯಮಂತ್ರಿ ತಮ್ಮ ಸಮಯ ವಿನಿಯೋಗಿಸಬಾರದು ಎಂದು ಅಭಿಪ್ರಾಯಪಟ್ಟಿದ್ದು, ಹೈಕೋರ್ಟ್​ನ ಈ ಆದೇಶದ ಪ್ರತಿಯನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಲು ಸೂಚನೆ ನೀಡಿದೆ.

ಇದನ್ನೂ ಓದಿ: ಇಂಧನ ಇಲಾಖೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಬೇಸತ್ತು ರಾಜೀನಾಮೆಗೆ ಮುಂದಾಗಿದ್ದ ಕೆಜೆ ಜಾರ್ಜ್: ಆಮೇಲಾಗಿದ್ದೇ ಬೇರೆ!

ಸಿಎಂ ನೀಡುವ ವರ್ಗಾವಣೆ ಪತ್ರಗಳ ಬಗ್ಗೆ ಹೈಕೋರ್ಟ್, ಸರ್ಕಾರದ ಮುಖ್ಯಕಾರ್ಯದರ್ಶಿ( ಸಿಎಸ್) ನಿಲುವು ಕೇಳಿತ್ತು. ಇದಕ್ಕೆ ಮುಖ್ಯ ಕಾರ್ಯದರ್ಶಿ ಸಹ ಉತ್ತರಿಸಿ, ಸಿಎಂ ಕಚೇರಿಯಿಂದ ನೀಡುವ ಟಿಪ್ಪಣಿಗಳು ಕೇವಲ ಶಿಫಾರಸುಗಳಷ್ಟೇ. ಸಂಬಂಧಪಟ್ಟ ಇಲಾಖೆ ವರ್ಗಾವಣೆ ಆದೇಶ ನೀಡುತ್ತದೆಂದು ಎಂದು ಹೇಳಿದ್ದರು.

ಇಂಧನ ಇಲಾಖೆಯ ಕೆಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಸಿಎಂ ಕಚೇರಿ ಮುಂದಾಗಿತ್ತು. ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಇಂಧನ ಇಲಾಖೆ ಆಡಳಿತದಲ್ಲಿ ತೀವ್ರ ಹಸ್ತಕ್ಷೇಪ ಮಾಡುತ್ತಿದ್ದರು. ಇದರಿಂದ ಅಸಮಾಧಾನಗೊಂಡ ಕೆಜೆ ಜಾರ್ಜ್ ಸಿಎಂ ನಿವಾಸಕ್ಕೆ ತೆರಳಿ ಪ್ರಶ್ನಿಸಿದ್ದರು, ಅಲ್ಲದೇ ರಾಜೀನಾಮೆ ಬಗ್ಗೆ ಸಹ ಪ್ರಸ್ತಾಪಿಸಿದ್ದರು. ಆದ್ರೆ,  ಸಿಎಂ ಸಿದ್ದರಾಮಯ್ಯ ಜಾರ್ಚ್ ಅವರನ್ನು ಸಮಾಧಾನಪಡಿಸಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು. ಹೀಗೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಎಲ್ಲಾ ಇಲಾಖೆಗಳಲ್ಲೂ ಮೂಗು ತೂರಿಸುತ್ತಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಹೈಕೋರ್ಟ್, ಸಿಎಂಗೆ ತರಾಟೆಗೆ ತೆಗೆದಯಕೊಂಡಿದ್ದು, ಮಾಡಬೇಕಾದ ಉತ್ತಮ ಕೆಲಸಗಳಿವೆ. ಅವುಗಳನ್ನು ಮಾಡಿ ಎಂದು ಟಾಂಗ್ ಕೊಟ್ಟಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?
ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಅಪಾಯಕಾರಿ ವ್ಹೀಲಿಂಗ್
ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಅಪಾಯಕಾರಿ ವ್ಹೀಲಿಂಗ್
ಸೌದೆ ಒಲೆಯಲ್ಲಿ ಸಿದ್ಧವಾಗುತ್ತಿದೆ ಬಿಸಿ ಬಿಸಿ ಹೋಳಿಗೆ!
ಸೌದೆ ಒಲೆಯಲ್ಲಿ ಸಿದ್ಧವಾಗುತ್ತಿದೆ ಬಿಸಿ ಬಿಸಿ ಹೋಳಿಗೆ!
ಹರಿತವಾದ ಆಯುಧಗಳೊಂದಿಗೆ ಬಂದು ಪೊಲೀಸರನ್ನೇ ಹೆದರಿಸಿ ಓಡಿಸಿದ ಗೂಂಡಾಗಳು
ಹರಿತವಾದ ಆಯುಧಗಳೊಂದಿಗೆ ಬಂದು ಪೊಲೀಸರನ್ನೇ ಹೆದರಿಸಿ ಓಡಿಸಿದ ಗೂಂಡಾಗಳು
ಯುಗಾದಿ ವರ್ಷ ಭವಿಷ್ಯ; ಜೂನ್‌ನಿಂದ ಈ ರಾಶಿಗೆ ರಾಜಯೋಗ ಆರಂಭ
ಯುಗಾದಿ ವರ್ಷ ಭವಿಷ್ಯ; ಜೂನ್‌ನಿಂದ ಈ ರಾಶಿಗೆ ರಾಜಯೋಗ ಆರಂಭ