AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ಚೇತನರಿಗೆ ಸೈಟ್ ಸ್ವಾಧೀನ ನೀಡದ ಆರೋಪ; ಬಿಬಿಎಂಪಿ ವಿರುದ್ಧ ಹೈಕೋರ್ಟ್ ವಿಭಾಗೀಯ ಪೀಠ ಅಸಮಾಧಾನ

Karnataka HC: ಅರ್ಜುನ್ ಸಾ‌ ಎಂಬವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ವಿಶೇಷ ಚೇತನರಿಗೆ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆಯಾಗಿತ್ತು. ನಿವೇಶನ ಹಂಚಿಕೆಯಾಗಿದ್ದರೂ ಸ್ವಾಧೀನ ನೀಡಿರಲಿಲ್ಲ.

ವಿಶೇಷ ಚೇತನರಿಗೆ ಸೈಟ್ ಸ್ವಾಧೀನ ನೀಡದ ಆರೋಪ; ಬಿಬಿಎಂಪಿ ವಿರುದ್ಧ ಹೈಕೋರ್ಟ್ ವಿಭಾಗೀಯ ಪೀಠ ಅಸಮಾಧಾನ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Sep 13, 2021 | 10:02 PM

Share

ಬೆಂಗಳೂರು: ವಿಶೇಷ ಚೇತನರೊಬ್ಬರಿಗೆ ಸೈಟ್‌ ಸ್ವಾಧೀನ‌ ನೀಡದ ಆರೋಪಕ್ಕೆ ಸಂಬಂಧಿಸಿ ಬಿಬಿಎಂಪಿ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಲಾಗಿದೆ. ಬಿಬಿಎಂಪಿ ಕಾರ್ಯವೈಖರಿಗೆ ಹೈಕೋರ್ಟ್‌ ತರಾಟೆ ತೆಗೆದುಕೊಂಡಿದೆ. 2011ರಲ್ಲೇ ನಿವೇಶನ ಮಂಜೂರಾದರೂ ಸ್ವಾಧೀನ ನೀಡಿಲ್ಲ. ಹೈಕೋರ್ಟ್ ಆದೇಶ ನೀಡಿ 3 ವರ್ಷವಾದರೂ ಪಾಲಿಸಿಲ್ಲ ಎಂದು ಹೈಕೋರ್ಟ್‌ನ ವಿಭಾಗೀಯ ಪೀಠದಿಂದ ಅಸಮಾಧಾನ ವ್ಯಕ್ತವಾಗಿದೆ. ನ್ಯಾ. ಬಿ. ವೀರಪ್ಪ, ನ್ಯಾ. ಇ.ಎಸ್. ಇಂದಿರೇಶ್‌ರವರಿದ್ದ ಪೀಠ ಅಸಮಾಧಾನ ತೋರಿದೆ.

ವಿಳಂಬಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ಕ್ಷಮೆ ಕೋರಿದ್ದಾರೆ. ಶೀಘ್ರ ನಿವೇಶನ ನೀಡುವುದಾಗಿ ಗೌರವ್ ಗುಪ್ತ ಭರವಸೆ ನೀಡಿದ್ದಾರೆ. ಈ ಸಂಬಂಧ ಅರ್ಜುನ್ ಸಾ‌ ಎಂಬವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ವಿಶೇಷ ಚೇತನರಿಗೆ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆಯಾಗಿತ್ತು. ನಿವೇಶನ ಹಂಚಿಕೆಯಾಗಿದ್ದರೂ ಸ್ವಾಧೀನ ನೀಡಿರಲಿಲ್ಲ.

ಶಿರೂರು ಮಠಕ್ಕೆ ಬಾಲ ಸನ್ಯಾಸಿ ನೇಮಕ ವಿಚಾರ; ಅಮಿಕಸ್ ಕ್ಯೂರಿ ಆಗಿ ಎಸ್. ನಾಗಾನಂದ್ ನೇಮಕ ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠಕ್ಕೆ ಪೀಠಾಧಿಪತಿಯಾಗಿ ಅಪ್ರಾಪ್ತರ ನೇಮಕ ವಿಚಾರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ನಡೆಯುತ್ತಿದೆ. ಪ್ರಕರಣದಲ್ಲಿ ಅಮಿಕಸ್ ಕ್ಯೂರಿಯಾಗಿ ಹಿರಿಯ ವಕೀಲ ಎಸ್. ನಾಗಾನಂದ್ ಅವರನ್ನು ಹೈಕೋರ್ಟ್ ನೇಮಿಸಿದೆ. ಬಾಲಸನ್ಯಾಸಿ ನೇಮಕ‌ ಮಕ್ಕಳ‌ ಹಕ್ಕಿನ ಉಲ್ಲಂಘನೆ ಆಗುತ್ತದೆ ಎಂದು ಅರ್ಜಿದಾರರ ಪರ ವಕೀಲ ಡಿ.ಆರ್. ರವಿಶಂಕರ್ ವಾದ ಮಂಡಿಸಿದ್ದರು.

ಮಧ್ವಾಚಾರ್ಯ, ಶಂಕರಾಚಾರ್ಯ ಬಾಲಸನ್ಯಾಸಿಗಳು. ಅಷ್ಟಮಠಗಳಲ್ಲೂ ಬಾಲ ಸನ್ಯಾಸಿಗಳ ಪರಂಪರೆಯಿದೆ. ಧರ್ಮ ಶಾಸ್ತ್ರ, ವೇದ, ಉಪನಿಷತ್ ಬೋಧಿಸಲಾಗಿದೆ ಎಂದು ಶಿರೂರು ಮಠದ ಪರ ವಕೀಲರು ವಾದಮಂಡಿಸಿದ್ದಾರೆ. 21 ವರ್ಷವಾಗುವವರೆಗೆ ವಿವಾಹಕ್ಕೆ ಕಾನೂನು ಅನುಮತಿಸಲ್ಲ ಮತ್ತು ಐಹಿಕ ಸುಖಭೋಗಗಳಿಂದ ದೂರವಿಡುವ ಆರೋಪ‌ ಸರಿಯಲ್ಲ ಎಂದು ಶಿರೂರು ಮಠದ ಪರ ವಕೀಲರಿಂದ ವಾದಮಂಡನೆ ಮಾಡಿದ್ದಾರೆ. ಸೆಪ್ಟೆಂಬರ್ 23ರ ಒಳಗೆ ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿಗಳಿಗೆ ಸೂಚನೆ ನೀಡಲಾಗಿದೆ.

ಶಿರೂರು ಈ ಮೊದಲಿನ ಸ್ವಾಮೀಜಿ ಲಕ್ಷ್ಮೀವರತೀರ್ಥರ ನಿಧನದ ಬಳಿಕ ಮಠಕ್ಕೆ ನೂತನ ಸನ್ಯಾಸಿಯ ನೇಮಕ ಮಾಡಲಾಗಿತ್ತು. ನೂತನ ಮಠಾಧೀಶರಾಗಿ ಅನಿರುದ್ಧ ಸರಳತ್ತಾಯರನ್ನು ನೇಮಕ ಮಾಡಲಾಗಿತ್ತು. ಸೋದೆ ವಾದಿರಾಜ ಮಠದಿಂದ ಪೀಠಾಧಿಪತಿ ನೇಮಕವಾಗಿತ್ತು. ಈ ಬಗ್ಗೆ ವಿರೋಧಿಸಿ ಶಿರೂರು ಮಠದ ಭಕ್ತರ ಸಮಿತಿ ಪಿಐಎಲ್ ಸಲ್ಲಿಸಿತ್ತು.

ಇದನ್ನೂ ಓದಿ: ಮಾನಹಾನಿ ಪ್ರಕರಣ ವಿಚಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್​ನಿಂದ ನೋಟಿಸ್ ಜಾರಿ

ಇದನ್ನೂ ಓದಿ: ’ದೇಶಾದ್ಯಂತ ದೇವಸ್ಥಾನಗಳಲ್ಲಿ ತಮಿಳು ಸ್ತೋತ್ರಗಳನ್ನೂ ಪಠಿಸುವಂತಾಗಬೇಕು‘-ಮದ್ರಾಸ್ ಹೈಕೋರ್ಟ್​

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು