AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬೊಮ್ಮಾಯಿಗೆ ಎದುರಾಗಲಿದೆ ಚುನಾವಣೆ ಸವಾಲು; ಪಾಲಿಕೆ, ನಗರಸಭೆಗಳಿಗೆ ಚುನಾವಣೆ ಘೋಷಿಸಿ ಎಂದ ಹೈಕೋರ್ಟ್

ಡಿಸೆಂಬರ್ ಅಂತ್ಯದವರೆಗೂ ಚುನಾವಣೆ ನಡೆಸದಂತೆ ಕರ್ನಾಟಕ ಸರ್ಕಾರ ಮನವಿ ಮಾಡಿತ್ತು. ಕೊವಿಡ್ ಕಾರಣಕ್ಕೆ ಚುನಾವಣೆ ಮುಂದೂಡಲು ಮನವಿ ಮಾಡಿತ್ತು. ಆದರೆ, ರಾಜ್ಯ ಸರ್ಕಾರದ ಮನವಿಯನ್ನ ಆಯೋಗ ಪರಿಗಣಿಸಬೇಕಿಲ್ಲ ಎಂದು ಹೇಳಿದೆ.

ಸಿಎಂ ಬೊಮ್ಮಾಯಿಗೆ ಎದುರಾಗಲಿದೆ ಚುನಾವಣೆ ಸವಾಲು; ಪಾಲಿಕೆ, ನಗರಸಭೆಗಳಿಗೆ ಚುನಾವಣೆ ಘೋಷಿಸಿ ಎಂದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Aug 04, 2021 | 6:15 PM

Share

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಕಳೆದ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಬಳಿಕ, ಇಂದು (ಆಗಸ್ಟ್ 4) ಹೊಸ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದೆ. ಕರ್ನಾಟಕದ ಹೊಸ ಸಚಿವರಾಗಿ 29 ಮಂದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮಧ್ಯೆ ನೂತನ ಸಿಎಂಗೆ ಚುನಾವಣೆ ಸವಾಲು ಎದುರಾಗಲಿದೆ. ಬಾಕಿಯಿರುವ ಪಾಲಿಕೆ, ನಗರಸಭೆಗಳಿಗೆ ಚುನಾವಣೆ ಘೋಷಿಸಿ ಎಂದು ಹೈಕೋರ್ಟ್ ಸೂಚನೆ ನೀಡಿದೆ.

ಚುನಾವಣಾ ವೇಳಾಪಟ್ಟಿ ಪ್ರಕಟಿಸಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ. ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ತರೀಕೆರೆ ಮುಂತಾದೆಡೆ ಅವಧಿಯೊಳಗೆ ಚುನಾವಣೆ ನಡೆದಿಲ್ಲ ಎಂದ ಹೈಕೋರ್ಟ್ ಚುನಾವಣೆ ಮುಂದೂಡುವ ಮನವಿ ಒಪ್ಪಿಲ್ಲ. ರಾಜ್ಯ ಸರ್ಕಾರದ ಮನವಿಗೆ ಹೈಕೋರ್ಟ್ ಒಪ್ಪಿಗೆ ಸೂಚಿಸಿಲ್ಲ.

ಡಿಸೆಂಬರ್ ಅಂತ್ಯದವರೆಗೂ ಚುನಾವಣೆ ನಡೆಸದಂತೆ ಕರ್ನಾಟಕ ಸರ್ಕಾರ ಮನವಿ ಮಾಡಿತ್ತು. ಕೊವಿಡ್ ಕಾರಣಕ್ಕೆ ಚುನಾವಣೆ ಮುಂದೂಡಲು ಮನವಿ ಮಾಡಿತ್ತು. ಆದರೆ, ರಾಜ್ಯ ಸರ್ಕಾರದ ಮನವಿಯನ್ನ ಆಯೋಗ ಪರಿಗಣಿಸಬೇಕಿಲ್ಲ ಎಂದು ಹೇಳಿದೆ. ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಪಶ್ಚಿಮ ಬಂಗಾಳ ರಾಜ್ಯದಲ್ಲಿ ಚುನಾವಣೆ ನಡೆದಿದೆ. ಕರ್ನಾಟಕದಲ್ಲಿ ಮಾತ್ರ ಚುನಾವಣೆ ಮುಂದೂಡಲಾಗುತ್ತಿದೆ. ಸಂವಿಧಾನದ ಆಶಯ ಪಾಲನೆಯಾಗುತ್ತಿಲ್ಲ ಎಂದು ಹೈಕೋರ್ಟ್‌ ಹೇಳಿದೆ. ಎಲ್ಲಾ ಧಾರ್ಮಿಕ ಕೇಂದ್ರಗಳನ್ನೂ ತೆರೆಯಲಾಗಿದೆ. ಜನ ಕ್ಯೂನಲ್ಲಿ ನಿಂತು ದೇವಾಲಯಕ್ಕೆ ಹೋಗಬಹುದು. ಹಾಗೆಯೇ ಚುನಾವಣೆ ಮಾಡಲು ಸಾಧ್ಯವಿಲ್ಲವೇ ಎಂದಿರುವ ಹೈಕೋರ್ಟ್ ಶೀಘ್ರವೇ ಚುನಾವಣಾ ವೇಳಾಪಟ್ಟಿ ನಿರ್ಧರಿಸಲು ಸೂಚನೆ ಕೊಟ್ಟಿದೆ.

ಇದನ್ನೂ ಓದಿ: ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ಅಸ್ತಿತ್ವಕ್ಕೆ; ಸಚಿವರ ಜಾತಿವಾರು, ಪ್ರದೇಶವಾರು ಲೆಕ್ಕಾಚಾರ, ಸಮಗ್ರ ವರದಿ ಹೀಗಿದೆ

Karnataka Cabinet: ಬಸವರಾಜ ಬೊಮ್ಮಾಯಿ ಟೀಂನ ನೂತನ ಸಚಿವರಲ್ಲಿ ಯಾರಿಗೆ ಯಾವ ಖಾತೆ? ಸಂಭಾವ್ಯ ಪಟ್ಟಿ ಇಲ್ಲಿದೆ

(Karnataka High Court on Municipality Elections to Karnataka Govt Election Commission)

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್