AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ಜೂಜು, ಬೆಟ್ಟಿಂಗ್ ನಿಷೇಧದ ಬಗ್ಗೆ ನಿಲುವು ತಿಳಿಸದ ಸರ್ಕಾರ: ಹೈಕೋರ್ಟ್ ಅಸಮಾಧಾನ

ಹಲವು ಬಾರಿ ನಿರ್ದೇಶನ ನೀಡಿದರೂ ರಾಜ್ಯ ಸರ್ಕಾರ ತನ್ನ ನಿಲುವು ತಿಳಿಸಿಲ್ಲ. ಅರ್ಜಿದಾರರ ಮನವಿ ಬಗ್ಗೆಯೂ ತೀರ್ಮಾನ ಕೈಗೊಂಡಿಲ್ಲ ಎಂದು ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿದೆ.

ಆನ್​ಲೈನ್ ಜೂಜು, ಬೆಟ್ಟಿಂಗ್ ನಿಷೇಧದ ಬಗ್ಗೆ ನಿಲುವು ತಿಳಿಸದ ಸರ್ಕಾರ: ಹೈಕೋರ್ಟ್ ಅಸಮಾಧಾನ
ಕರ್ನಾಟಕ ಹೈಕೋರ್ಟ್​
TV9 Web
| Edited By: |

Updated on:Jun 29, 2021 | 10:04 PM

Share

ಬೆಂಗಳೂರು: ಆನ್​ಲೈನ್ ಜೂಜು ಮತ್ತು ಬೆಟ್ಟಿಂಗ್ ನಿಷೇಧದ ಬಗ್ಗೆ ರಾಜ್ಯ ಸರ್ಕಾರ ಈವರೆಗೆ ತನ್ನ ನಿಲುವು ಸ್ಪಷ್ಟಪಡಿಸಿಲ್ಲ ಎಂದು ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿತು. ಹಲವು ಬಾರಿ ನಿರ್ದೇಶನ ನೀಡಿದರೂ ರಾಜ್ಯ ಸರ್ಕಾರ ತನ್ನ ನಿಲುವು ತಿಳಿಸಿಲ್ಲ. ಅರ್ಜಿದಾರರ ಮನವಿ ಬಗ್ಗೆಯೂ ತೀರ್ಮಾನ ಕೈಗೊಂಡಿಲ್ಲ. ಈ ಸಂಬಂಧ ಸಚಿವ ಸಂಪುಟದ ನಿರ್ಧಾರವನ್ನೂ ಹೈಕೋರ್ಟ್​ಗೆ ತಿಳಿಸಿಲ್ಲ. ನಮ್ಮ ಆದೇಶ ಏಕೆ ಪಾಲಿಸಿಲ್ಲ ಎಂಬುದಕ್ಕೆ ವಿವರಣೆ ನೀಡಬೇಕು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಆನ್​ಲೈನ್ ಜೂಜು ಮತ್ತು ಬೆಟ್ಟಿಂಗ್​ ನಿಷೇಧಕ್ಕೆ ಸಂಬಂಧಿಸಿದಂತೆ ಜುಲೈ 8ರ ಒಳಗೆ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ. ಆನ್​ಲೈನ್​ ಬೆಟ್ಟಿಂಗ್​ ನಿಷೇಧಿಸಬೇಕು ಎಂದು ಆಗ್ರಹಿಸಿ ಡಿ.ಆರ್.ಶಾರದಾ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ತಮಿಳುನಾಡು ಬಳಿಕ, ಆಂಧ್ರದಲ್ಲಿ ಆನ್​ಲೈನ್ ಗ್ಯಾಂಬ್ಲಿಂಗ್ ಬಂದ್ ತಮಿಳುನಾಡು ಸರ್ಕಾರದ ಬಳಿಕ ಇದೀಗ ಆಂಧ್ರ ಪ್ರದೇಶದಲ್ಲೂ ಆನ್​ಲೈನ್ ಜೂಜಿನ ವಿರುದ್ಧ ಮಸೂದೆ ಅಂಗೀಕಾರವಾಗಿದೆ. ಆಂಧ್ರ ಪ್ರದೇಶ ಗೇಮಿಂಗ್ ಬಿಲ್ 2020ಯನ್ನು ಜಾರಿಗೊಳಿಸಲು ವಿಧಾನಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ. ಈ ಹಿಂದೆ ಆಂಧ್ರದಲ್ಲಿ, ಆನ್​ಲೈನ್ ಜೂಜಿನ ಸಾಲ ತೀರಿಸಲಾಗದೆ ಕೆಲವು ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಗಳ ಬೆನ್ನಲ್ಲೇ ಸರ್ಕಾರ ಆನ್​ಲೈನ್ ಜೂಜಾಟಗಳಿಗೆ ನಿರ್ಬಂಧ ಹೇರುವ ಮನಮಾಡಿದೆ.

ಕರ್ನಾಟಕದಲ್ಲಿ ಯಾವಾಗ? ಆನ್​ಲೈನ್ ಜೂಜಾಟಗಳನ್ನು ಬ್ಯಾನ್ ಮಾಡುವ ಬಗ್ಗೆ ಕರ್ನಾಟಕ ಸರ್ಕಾರವು ಹೇಳಿಕೆ ನೀಡುತ್ತಲೇ ಬಂದಿದ್ದು, ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ಜೂಜಿನಲ್ಲಿ ಪಾಲ್ಗೊಳ್ಳುವ ಯುವಕರಿಂದ ಅವರ ಮನೆಯವರೂ ತೊಂದರೆ ಅನುಭವಿಸುತ್ತಿದ್ದಾರೆ. ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ತಮಿಳುನಾಡು, ಆಂಧ್ರದ ಬಳಿಕ ಕರ್ನಾಟಕದಲ್ಲೂ ಆನ್​ಲೈನ್ ಗ್ಯಾಂಬ್ಲಿಂಗ್ ವಿರುದ್ಧ ಮಸೂದೆ ರಚಿಸಬೇಕು ಎಂಬ ಕೂಗು ಜೋರಾಗುತ್ತಿದೆ.

(Karnataka High Court on State Govt Not informing its stand on online gambling and betting)

ಇದನ್ನೂ ಓದಿ: ಡಿಜಿಟಲ್ ಸುದ್ದಿ ಮಾಧ್ಯಮಗಳ ನಿಯಂತ್ರಣಕ್ಕಾಗಿರುವ ಹೊಸ ಐಟಿ ನಿಯಮಗಳ ಅನುಷ್ಠಾನಕ್ಕೆ ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ

ಇದನ್ನೂ ಓದಿ: ಪ್ರತಿ ಪೊಲೀಸ್ ಠಾಣೆಗೆ 2 ಶಬ್ದ ಮಾಪಕ ಅಗತ್ಯ: ಹೈಕೋರ್ಟ್​ಗೆ ಪೊಲೀಸ್ ಇಲಾಖೆ ಮಾಹಿತಿ

Published On - 10:00 pm, Tue, 29 June 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ