AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ಜೂಜು, ಬೆಟ್ಟಿಂಗ್ ನಿಷೇಧದ ಬಗ್ಗೆ ನಿಲುವು ತಿಳಿಸದ ಸರ್ಕಾರ: ಹೈಕೋರ್ಟ್ ಅಸಮಾಧಾನ

ಹಲವು ಬಾರಿ ನಿರ್ದೇಶನ ನೀಡಿದರೂ ರಾಜ್ಯ ಸರ್ಕಾರ ತನ್ನ ನಿಲುವು ತಿಳಿಸಿಲ್ಲ. ಅರ್ಜಿದಾರರ ಮನವಿ ಬಗ್ಗೆಯೂ ತೀರ್ಮಾನ ಕೈಗೊಂಡಿಲ್ಲ ಎಂದು ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿದೆ.

ಆನ್​ಲೈನ್ ಜೂಜು, ಬೆಟ್ಟಿಂಗ್ ನಿಷೇಧದ ಬಗ್ಗೆ ನಿಲುವು ತಿಳಿಸದ ಸರ್ಕಾರ: ಹೈಕೋರ್ಟ್ ಅಸಮಾಧಾನ
ಕರ್ನಾಟಕ ಹೈಕೋರ್ಟ್​
TV9 Web
| Edited By: |

Updated on:Jun 29, 2021 | 10:04 PM

Share

ಬೆಂಗಳೂರು: ಆನ್​ಲೈನ್ ಜೂಜು ಮತ್ತು ಬೆಟ್ಟಿಂಗ್ ನಿಷೇಧದ ಬಗ್ಗೆ ರಾಜ್ಯ ಸರ್ಕಾರ ಈವರೆಗೆ ತನ್ನ ನಿಲುವು ಸ್ಪಷ್ಟಪಡಿಸಿಲ್ಲ ಎಂದು ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿತು. ಹಲವು ಬಾರಿ ನಿರ್ದೇಶನ ನೀಡಿದರೂ ರಾಜ್ಯ ಸರ್ಕಾರ ತನ್ನ ನಿಲುವು ತಿಳಿಸಿಲ್ಲ. ಅರ್ಜಿದಾರರ ಮನವಿ ಬಗ್ಗೆಯೂ ತೀರ್ಮಾನ ಕೈಗೊಂಡಿಲ್ಲ. ಈ ಸಂಬಂಧ ಸಚಿವ ಸಂಪುಟದ ನಿರ್ಧಾರವನ್ನೂ ಹೈಕೋರ್ಟ್​ಗೆ ತಿಳಿಸಿಲ್ಲ. ನಮ್ಮ ಆದೇಶ ಏಕೆ ಪಾಲಿಸಿಲ್ಲ ಎಂಬುದಕ್ಕೆ ವಿವರಣೆ ನೀಡಬೇಕು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಆನ್​ಲೈನ್ ಜೂಜು ಮತ್ತು ಬೆಟ್ಟಿಂಗ್​ ನಿಷೇಧಕ್ಕೆ ಸಂಬಂಧಿಸಿದಂತೆ ಜುಲೈ 8ರ ಒಳಗೆ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ. ಆನ್​ಲೈನ್​ ಬೆಟ್ಟಿಂಗ್​ ನಿಷೇಧಿಸಬೇಕು ಎಂದು ಆಗ್ರಹಿಸಿ ಡಿ.ಆರ್.ಶಾರದಾ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ತಮಿಳುನಾಡು ಬಳಿಕ, ಆಂಧ್ರದಲ್ಲಿ ಆನ್​ಲೈನ್ ಗ್ಯಾಂಬ್ಲಿಂಗ್ ಬಂದ್ ತಮಿಳುನಾಡು ಸರ್ಕಾರದ ಬಳಿಕ ಇದೀಗ ಆಂಧ್ರ ಪ್ರದೇಶದಲ್ಲೂ ಆನ್​ಲೈನ್ ಜೂಜಿನ ವಿರುದ್ಧ ಮಸೂದೆ ಅಂಗೀಕಾರವಾಗಿದೆ. ಆಂಧ್ರ ಪ್ರದೇಶ ಗೇಮಿಂಗ್ ಬಿಲ್ 2020ಯನ್ನು ಜಾರಿಗೊಳಿಸಲು ವಿಧಾನಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ. ಈ ಹಿಂದೆ ಆಂಧ್ರದಲ್ಲಿ, ಆನ್​ಲೈನ್ ಜೂಜಿನ ಸಾಲ ತೀರಿಸಲಾಗದೆ ಕೆಲವು ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಗಳ ಬೆನ್ನಲ್ಲೇ ಸರ್ಕಾರ ಆನ್​ಲೈನ್ ಜೂಜಾಟಗಳಿಗೆ ನಿರ್ಬಂಧ ಹೇರುವ ಮನಮಾಡಿದೆ.

ಕರ್ನಾಟಕದಲ್ಲಿ ಯಾವಾಗ? ಆನ್​ಲೈನ್ ಜೂಜಾಟಗಳನ್ನು ಬ್ಯಾನ್ ಮಾಡುವ ಬಗ್ಗೆ ಕರ್ನಾಟಕ ಸರ್ಕಾರವು ಹೇಳಿಕೆ ನೀಡುತ್ತಲೇ ಬಂದಿದ್ದು, ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ಜೂಜಿನಲ್ಲಿ ಪಾಲ್ಗೊಳ್ಳುವ ಯುವಕರಿಂದ ಅವರ ಮನೆಯವರೂ ತೊಂದರೆ ಅನುಭವಿಸುತ್ತಿದ್ದಾರೆ. ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ತಮಿಳುನಾಡು, ಆಂಧ್ರದ ಬಳಿಕ ಕರ್ನಾಟಕದಲ್ಲೂ ಆನ್​ಲೈನ್ ಗ್ಯಾಂಬ್ಲಿಂಗ್ ವಿರುದ್ಧ ಮಸೂದೆ ರಚಿಸಬೇಕು ಎಂಬ ಕೂಗು ಜೋರಾಗುತ್ತಿದೆ.

(Karnataka High Court on State Govt Not informing its stand on online gambling and betting)

ಇದನ್ನೂ ಓದಿ: ಡಿಜಿಟಲ್ ಸುದ್ದಿ ಮಾಧ್ಯಮಗಳ ನಿಯಂತ್ರಣಕ್ಕಾಗಿರುವ ಹೊಸ ಐಟಿ ನಿಯಮಗಳ ಅನುಷ್ಠಾನಕ್ಕೆ ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ

ಇದನ್ನೂ ಓದಿ: ಪ್ರತಿ ಪೊಲೀಸ್ ಠಾಣೆಗೆ 2 ಶಬ್ದ ಮಾಪಕ ಅಗತ್ಯ: ಹೈಕೋರ್ಟ್​ಗೆ ಪೊಲೀಸ್ ಇಲಾಖೆ ಮಾಹಿತಿ

Published On - 10:00 pm, Tue, 29 June 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ