HD Revanna: ಹೆಚ್​ಡಿ.ರೇವಣ್ಣಗೆ ಮತ್ತೆ ಸಮನ್ಸ್‌ ಜಾರಿ ಮಾಡಲು ಹೈಕೋರ್ಟ್‌ ಆದೇಶ

ಮಾಜಿ ಸಚಿವ ಹೆಚ್‌.ಡಿ.ರೇವಣ್ಣ (HD Revanna) ಅವರಿಗೆ ಸಮನ್ಸ್‌ ಜಾರಿ ಮಾಡುವಂತೆ ಕರ್ನಾಟಕ ಹೈಕೋರ್ಟ್‌ (ಆದೇಶಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಜಿ.ದೇವರಾಜೇಗೌಡ ಅರ್ಜಿ ಸಲ್ಲಿಸಿದ್ದು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​., ರೇವಣ್ಣಗೆ ಮತ್ತೆ ಸಮನ್ಸ್ ಜಾರಿಗೆ ಆದೇಶಿಸಿದೆ.

HD Revanna: ಹೆಚ್​ಡಿ.ರೇವಣ್ಣಗೆ ಮತ್ತೆ ಸಮನ್ಸ್‌ ಜಾರಿ ಮಾಡಲು ಹೈಕೋರ್ಟ್‌ ಆದೇಶ
ಹೈಕೋರ್ಟ್, ಹೆಚ್.ಡಿ.ರೇವಣ್ಣ
Edited By:

Updated on: Oct 30, 2023 | 12:14 PM

ಬೆಂಗಳೂರು, (ಅಕ್ಟೋಬರ್ 30): ಮಾಜಿ ಸಚಿವ ಹೆಚ್‌.ಡಿ.ರೇವಣ್ಣ (HD Revanna) ಅವರಿಗೆ ಸಮನ್ಸ್‌ ಜಾರಿ ಮಾಡುವಂತೆ ಕರ್ನಾಟಕ ಹೈಕೋರ್ಟ್‌ (Karnataka High Court) ಆದೇಶಿಸಿದೆ . ಶಾಸಕ ಹೆಚ್​ಡಿ ರೇವಣ್ಣ ಆಯ್ಕೆ ಅಸಿಂಧು ಕೋರಿ ವಕೀಲ ಜಿ.ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಇಂದು (ಅಕ್ಟೋಬರ್ 30) ವಿಚಾರಣೆ ನಡೆಸಿದ ಹೈಕೋರ್ಟ್, ಮತ್ತೆ ಸಮನ್ಸ್​ ಜಾರಿಗೆ ಆದೇಶಿಸಿದೆ. ಚುನಾವಣಾ ತಕರಾರು ಅರ್ಜಿಯ ನಿಯಮದಂತೆ  ಸಮನ್ಸ್ ಜಾರಿ ಮಾಡಬೇಕು. ಅದರಂತೆ ಹೈಕೋರ್ಟ್ ನ್ಯಾ.ಜ್ಯೋತಿ ಮೂಲಿಮನಿ ಅವರು ಪ್ರಕ್ರಿಯೆಯಂತೆ ರೇವಣ್ಣ ಸೇರಿದಂತೆ ಇತರೆ ಅಭ್ಯರ್ಥಿಗಳಿಗೂ ಸಮನ್ಸ್​ ಜಾರಿಗೆ ಆದೇಶಿಸಿ ಮುಂದಿನ ವಿಚಾರಣೆಯನ್ನು ನವೆಂಬರ್ 29ಕ್ಕೆ ನಿಗದಿಪಡಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಚ್‌.ಡಿ.ರೇವಣ್ಣ ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆ. ಅವರ ಬೆಂಬಲಿಗರು ಮತದಾರರಿಗೆ ತಲಾ 2 ಕೋಳಿ ಮತ್ತು 2 ಸಾವಿರ ರೂ. ನಗದು ಹಂಚಿ ಮತ ಹಾಕಿಸಿಕೊಂಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ಇಂತಹ ಅಕ್ರಮ ನಡೆಸಿ ಗೆದ್ದಿರುವ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಜಿ.ದೇವರಾಜೇಗೌಡ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಪ್ರಜ್ವಲ್​ ರೇವಣ್ಣ ಅನರ್ಹ ಬೆನ್ನಲ್ಲೇ ಇದೀಗ ತಂದೆ ಹೆಚ್​.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು

ಇದೇ ಅರ್ಜಿಗೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಸಮನ್ಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿತ್ತು. ಆದ್ರೆ, ರೇವಣ್ಣ ಅವರಿಗೆ ಸಮನ್ಸ್ ಜಾರಿಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮಿಳಾ ನೇಸರ್ಗಿ ಅವರು ಪತ್ರಿಕಾ ಪ್ರಕಟಣೆ ಮೂಲಕ ಸಮನ್ಸ್ ಜಾರಿಗೆ ಮನವಿ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:02 pm, Mon, 30 October 23