AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ ತಾಲೂಕಿನಲ್ಲೂ ಕನಿಷ್ಟ ಬೆಂಬಲ‌ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಲು ಹೈಕೋರ್ಟ್ ಆದೇಶ

ಕರ್ನಾಟಕ ಹೈಕೋರ್ಟ್ ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಸ್ಥಾಪಿಸಲು ಆದೇಶಿಸಿದೆ. ರೈತರ ಪರವಾಗಿ ರೈತ ಸೇನೆ ಸಲ್ಲಿಸಲಾದ ಪಿಐಎಲ್​ ಅರ್ಜಿ ಆಧರಿಸಿ ಈ ಆದೇಶ ಹೊರಡಿಸಲಾಗಿದೆ. ಜಿಲ್ಲಾಧಿಕಾರಿಗಳು ಬೆಳೆಗಳ ಲಭ್ಯತೆಯ ವೈಜ್ಞಾನಿಕ ಅಧ್ಯಯನ ನಡೆಸಬೇಕು ಮತ್ತು ಅಗತ್ಯವಿರುವಷ್ಟು ಖರೀದಿ ಕೇಂದ್ರಗಳನ್ನು ಸ್ಥಾಪಿಸುವಂತೆ ಸೂಚಿಸಲಾಗಿದೆ.

ಪ್ರತಿ ತಾಲೂಕಿನಲ್ಲೂ ಕನಿಷ್ಟ ಬೆಂಬಲ‌ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಲು ಹೈಕೋರ್ಟ್ ಆದೇಶ
ಹೈಕೋರ್ಟ್
Ramesha M
| Updated By: ಗಂಗಾಧರ​ ಬ. ಸಾಬೋಜಿ|

Updated on:May 28, 2025 | 6:11 PM

Share

ಬೆಂಗಳೂರು, ಮೇ 28: ಪ್ರತಿ ತಾಲೂಕಿನಲ್ಲೂ ಖರೀದಿ ಕೇಂದ್ರ ಸ್ಥಾಪಿಸಲು ಕರ್ನಾಟಕ ಹೈಕೋರ್ಟ್ (High Court) ಬುಧವಾರ ಆದೇಶ ಹೊರಡಿಸಿದೆ. ರೈತ ಸೇನೆ ಸಲ್ಲಿಸಿದ್ದ ಪಿಐಎಲ್ ಅರ್ಜಿ (PIL application) ವಿಚಾರಣೆ ಮಾಡಿದ ಹೈಕೋಟ್​​, ಕನಿಷ್ಟ ಬೆಂಬಲ‌ ಬೆಲೆಯ ಖರೀದಿ ಕೇಂದ್ರ ಆರಂಭಿಸಲು ಸಿಜೆ ಎನ್.ವಿ.ಅಂಜಾರಿಯಾ ಮತ್ತು ನ್ಯಾ.ಕೆ.ವಿ.ಅರವಿಂದ್​​ರಿದ್ದ ಪೀಠ ಆದೇಶ ನೀಡಿದೆ.

ಜಿಲ್ಲಾಧಿಕಾರಿ ಬೆಳೆಗಳ ಲಭ್ಯತೆಯ ವೈಜ್ಞಾನಿಕ ಅಧ್ಯಯನ ನಡೆಸಬೇಕು. ಅಗತ್ಯವಿದ್ದಷ್ಟು ಕನಿಷ್ಟ ಬೆಂಬಲ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಬೇಕು. ಪ್ರತಿ ತಾಲೂಕಿನಲ್ಲೂ ಒಂದು ಖರೀದಿ ಕೇಂದ್ರ ಸ್ಥಾಪಿಸಬೇಕು. ನಿಗದಿತ ಅವಧಿಗಿಂತ ಕನಿಷ್ಟ 2 ತಿಂಗಳು ಖರೀದಿ ಕೇಂದ್ರದ ಅವಧಿ ವಿಸ್ತರಿಸಬೇಕು ಎಂದು ಪೀಠ ನಿರ್ದೇಶನ ನೀಡಿದೆ.

ಇದನ್ನೂ ಓದಿ: ರೈತರಿಗೆ ಖುಷಿ ಸುದ್ದಿ; 14 ಬೆಳೆಗಳ ಕನಿಷ್ಠ ಬೆಂಬಲ ಹೆಚ್ಚಳಕ್ಕೆ ಕೇಂದ್ರ ಸಂಪುಟ ಒಪ್ಪಿಗೆ

ಇದನ್ನೂ ಓದಿ
Image
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
Image
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
Image
ಸೈಟ್ ರಿಜಿಸ್ಟ್ರೇಷನ್ ಆಗದೇ ಪರದಾಡುತ್ತಿದ್ದವರಿಗೆ ಗುಡ್ ನ್ಯೂಸ್
Image
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ

ಕರ್ನಾಟಕದಲ್ಲಿ ಕನಿಷ್ಟ ಬೆಂಬಲ‌ ಬೆಲೆಯ ಖರೀದಿ ಕೇಂದ್ರ ಆರಂಭಿಸಲು ರೈತರು ಸಾಕಷ್ಟು ಭಾರೀ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಬೆಳೆಗಳು ಕಟಾವು ಮಾಡಿ ದಲ್ಲಾಳಿಗಳಿಗೆ ಮಾರಾಟ ಮಾಡಿದ ನಂತರ ಸರ್ಕಾರ ಖರೀದಿ ಕೇಂದ್ರಗಳನ್ನು ಆರಂಭಿಸುತ್ತದೆ. ಆದರೆ ಇದರಿಂದ ರೈತರಿಗೆ ನಷ್ಟ ಉಂಟಾಗುತ್ತದೆ.

ಈ ನಿಟ್ಟಿನಲ್ಲಿ ಬೆಳೆಗಳು ಕಟಾವಿಗೂ ಮುಂಚೆಯೇ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ರೈತರು ಆಗ್ರಹಿಸಿದ್ದರು. ಈ ವಿಚಾರವಾಗಿ ಸಾಕಷ್ಟು ಚರ್ಚೆಗಳು ಕೂಡ ನಡೆದಿದ್ದವು. ಹೀಗಾಗಿ ರೈತ ಸೇನೆ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸಲಾಗಿತ್ತು.

14 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಒಪ್ಪಿಗೆ

ಇನ್ನು ಖಾರಿಫ್​ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. 14 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಒಪ್ಪಿಗೆ ಸೂಚಿಸಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಮುಂದುವರಿಸಲು ನಿರ್ಧರಿಸಿದ್ದು, ರಾಗಿ, ಹತ್ತಿ, ಎಳ್ಳು ಸೇರಿದಂತೆ 14 ಬೆಳೆಗಳ ಬೆಂಬಲ ಬೆಲೆ ಹೆಚ್ಚಳ ಬಗ್ಗೆ ಕ್ಯಾಬಿನೆಟ್​ ಸಭೆ ಬಳಿಕ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್​ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:52 pm, Wed, 28 May 25

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?