AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿ ದಾಸ್ತಾನು ಮಳಿಗೆಗಳ ಪರಿಶೀಲನಾ ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ

ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಪಟಾಕಿ ಮಾರಾಟಗಾರರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಸ್ಪೋಟಕಗಳ ಮುಖ್ಯ ನಿಯಂತ್ರಣಾಧಿಕಾರಿ ಅರ್ಜಿದಾರರ ದಾಸ್ತಾನು ಮಳಿಗೆಗಳ ತಪಾಸಣೆ ನಡೆಸಬೇಕು ಎಂದು ಸೂಚಿಸಿದೆ. ಅಲ್ಲದೇ ಈ ಬಗ್ಗೆ ವರದಿ ನೀಡುವಂತೆ ಹೇಳಿದೆ.

ಪಟಾಕಿ ದಾಸ್ತಾನು ಮಳಿಗೆಗಳ ಪರಿಶೀಲನಾ ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ
ಹೈಕೋರ್ಟ್​
Ramesha M
| Edited By: |

Updated on:Nov 03, 2023 | 3:11 PM

Share

ಬೆಂಗಳೂರು, (ನವೆಂಬರ್ 03): ಅತ್ತಿಬೆಲೆ ಸಮೀಪ ಪಟಾಕಿ (firecracker)ದಾಸ್ತಾನು ಮಾಡುವಾಗ ನಡೆದ ದುರಂತದಲ್ಲಿ 14 ಜನರ ಸಾವಿನ ನಂತರ ಬೆಂಗಳೂರಿನಲ್ಲಿ ಪಟಾಕಿ ಮಾರಾಟದ ಮೇಲೆ ಸರ್ಕಾರ ಹಲವು ನಿರ್ಬಂಧ ವಿಧಿಸಿದೆ. ಹಲವೆಡೆ ಪಟಾಕಿ ದಾಸ್ತಾನು ಕೇಂದ್ರಗಳ‌ ಮೇಲೆ ದಾಳಿ ನಡೆಸಿದ ಕಂದಾಯ ಇಲಾಖೆ ಪಟಾಕಿ ಸಂಗ್ರಹಿಸಿದ್ದ ಹಲವು ದಾಸ್ತಾನುಗಳನ್ನು ಸೀಜ್ ಮಾಡಿದ್ದು, ಇದನ್ನು ಪ್ರಶ್ನಿಸಿ ಪಟಾಕಿ ಮಾರಾಟಗಾರರು ಹೈಕೋರ್ಟ್ (Karnataka High Court) ಮೆಟ್ಟಿಲೇರಿದೆ. ಇದೀಗ ಹೈಕೋರ್ಟ್ ಪಟಾಕಿ ಮಾರಾಟಗಾರರ ರಿಟ್ ಅರ್ಜಿ ವಿಚಾರಣೆ ನಡೆಸಿ, ಸ್ಪೋಟಕಗಳ ಮುಖ್ಯ ನಿಯಂತ್ರಣಾಧಿಕಾರಿ ಅರ್ಜಿದಾರರ ದಾಸ್ತಾನು ಮಳಿಗೆಗಳ ತಪಾಸಣೆ ನಡೆಸಬೇಕು ಎಂದು ಸೂಚಿಸಿದೆ.

ಪಟಾಕಿ ಮಾರಾಟಗಾರರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇಂದು (ನವೆಂಬರ್ 03) ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಪಟಾಕಿ ದಾಸ್ತಾನಿಗೆ ಅನುಸರಿಸಿರುವ ಸುರಕ್ಷತಾ ಕ್ರಮಗಳ ಬಗ್ಗೆಯೂ ಗಮನಿಸಬೇಕಿದೆ. ಇತ್ತೀಚೆಗೆ ನಡೆದ ಪಟಾಕಿ ದುರಂತದ ಹಿನ್ನೆಲೆಯಲ್ಲಿ ಸ್ಪೋಟಕಗಳ ಮುಖ್ಯ ನಿಯಂತ್ರಣಾಧಿಕಾರಿ ಅರ್ಜಿದಾರರ ದಾಸ್ತಾನು ಮಳಿಗೆಗಳ ತಪಾಸಣೆ ನಡೆಸಬೇಕು. ಸರ್ಕಾರ, ಸ್ಪೋಟಕ ನಿಯಂತ್ರಣಾಧಿಕಾರಿಗಳು ಜಂಟಿ ಪರಿಶೀಲನೆ ನಡೆಸಬೇಕು.‌ ದಾಸ್ತಾನು ಕೇಂದ್ರಗಳ ಸುರಕ್ಷತೆ ಬಗ್ಗೆ ನವೆಂಬರ್ 6 ರೊಳಗೆ ಪರಿಶೀಲನಾ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದೆ. ವರದಿ ಆಧರಿಸಿ ಹೈಕೋರ್ಟ್ ಮುಂದಿನ ಆದೇಶ ಹೊರಡಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಈ ಬಾರಿ ದೀಪಾವಳಿ ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಗೈಡ್ ಲೈನ್ಸ್​​​, ಇದರಂತೆ ನಡೆಯಬೇಕು

ತಾವರೆಕೆರೆ, ಅವಲಹಳ್ಳಿ, ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ಪಟಾಕಿ ದಾಸ್ತಾನು ಮಳಿಗೆಗಳಿಗೆ ಬೀಗ ಜಡಿಯಲಾಗಿತ್ತು. ಸರ್ಕಾರದ ಕ್ರಮ ಪ್ರಶ್ನಿಸಿ ತಿರುಮಲ ಟ್ರೇಡರ್ಸ್, ಶ್ರೀ ವಿಜಯ ಟ್ರೇಡರ್ಸ್ ಸೇರಿ ಹಲವು ಪಟಾಕಿ ದಾಸ್ತಾನುಗಾರರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು ಸರ್ಕಾರದ ಕ್ರಮದಿಂದ ಪಟಾಕಿ ವ್ಯಾಪಾರ ನಡೆಸುವ ತಮ್ಮ ಹಕ್ಕಿಗೆ ಧಕ್ಕೆಯಾಗಿದೆ. ಪಟಾಕಿ ಮಾರಾಟದ ಲೈಸೆನ್ಸ್ ಪಡೆದೇ‌ ಪಟಾಕಿ ಸಂಗ್ರಹಿಸಲಾಗಿದೆ. ದಾಸ್ತಾನು ಮಳಿಗೆಗಳಿಗೆ ಬೀಗ ಹಾಕಿರುವುದರಿಂದ ನಷ್ಟವುಂಟಾಗಿದೆ‌. ಹೀಗಾಗಿ ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ಗೆ ಮನವಿ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:10 pm, Fri, 3 November 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!