AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪರ್ಧಾ ಆಯೋಗದ ತನಿಖೆಗೆ ತಡೆ ನೀಡಬೇಕೆಂಬ ಅಮೆಜಾನ್, ಫ್ಲಿಪ್​ಕಾರ್ಟ್​ ಮನವಿ ತಳ್ಳಿಹಾಕಿದ ಕರ್ನಾಟಕ ಹೈಕೋರ್ಟ್​

‘ಈ ಹಂತದಲ್ಲಿ ತನಿಖೆಯನ್ನು ನಿಲ್ಲಿಸಲು ಸಾಧ್ಯವಿಲ್ಲ’ ಎಂದು ನ್ಯಾಯಮೂರ್ತಿ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ನ್ಯಾಯಪೀಠವು ಹೇಳಿತು.

ಸ್ಪರ್ಧಾ ಆಯೋಗದ ತನಿಖೆಗೆ ತಡೆ ನೀಡಬೇಕೆಂಬ ಅಮೆಜಾನ್, ಫ್ಲಿಪ್​ಕಾರ್ಟ್​ ಮನವಿ ತಳ್ಳಿಹಾಕಿದ ಕರ್ನಾಟಕ ಹೈಕೋರ್ಟ್​
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 23, 2021 | 4:41 PM

ಬೆಂಗಳೂರು: ಇ-ಕಾಮರ್ಸ್​ ದೈತ್ಯ ಕಂಪನಿಗಳಾದ ಅಮೆಜಾನ್ ಮತ್ತು ಫ್ಲಿಪ್​ಕಾರ್ಟ್​ಗಳಿಗೆ ಕಾನೂನು ಹೋರಾಟದಲ್ಲಿ ಮತ್ತೆ ಹಿನ್ನಡೆಯಾಗಿದೆ. ಸ್ಪರ್ಧಾ ಆಯೋಗದ (Competition Commission of India – CCI) ತನಿಖೆಗೆ ತಡೆ ನೀಡಬೇಕೆಂಬ ಈ ಕಂಪನಿಗಳ ಬೇಡಿಕೆಯನ್ನು ಕರ್ನಾಟಕ ಹೈಕೋರ್ಟ್​ನ ವಿಭಾಗೀಯ ನ್ಯಾಯಪೀಠವು ಶುಕ್ರವಾರ ವಜಾ ಮಾಡಿದೆ. ಸ್ಪರ್ಧಾ ಆಯೋಗವು ತನಿಖೆ ಮುಂದುವರಿಸಲು ಹೈಕೋರ್ಟ್​ ಅನುಮತಿ ನೀಡಿದೆ.

‘ಈ ಹಂತದಲ್ಲಿ ತನಿಖೆಯನ್ನು ನಿಲ್ಲಿಸಲು ಸಾಧ್ಯವಿಲ್ಲ’ ಎಂದು ನ್ಯಾಯಮೂರ್ತಿ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ನ್ಯಾಯಪೀಠವು ಹೇಳಿತು. ಸ್ಪರ್ಧಾ ಆಯೋಗವು ತೆಗೆದುಕೊಂಡಿರುವ ಕ್ರಮಗಳು ಅಂತಿಮ ಹಂತಕ್ಕೆ ತಲುಪಬಾರದು ಎನ್ನುವ ಉದ್ದೇಶದಿಂದ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿಗಳು ವಜಾರ್ಹವಾದವು, ಪರಿಗಣನೆಗೆ ಯೋಗ್ಯವಾದವಲ್ಲ ಎಂದು ದ್ವಿ ಸದಸ್ಯ ನ್ಯಾಯಪೀಠವು ಅಭಿಪ್ರಾಯಪಟ್ಟಿತು.

ದೆಹಲಿ ವ್ಯಾಪಾರ ಮಹಾಸಂಘವು ಸಲ್ಲಿಸಿರುವ ಅರ್ಜಿಯನ್ನು ಆಧರಿಸಿ ಭಾರತದ ಸ್ವರ್ಧಾ ಆಯೋಗವು ಜನವರಿ 13, 2020ರಂದು ಈ ಸಂಬಂಧ ತನಿಖೆ ನಡೆಸಲು ನಿರ್ದೇಶನ ನೀಡಿತ್ತು. ಈ ಆದೇಶಗಳನ್ನು ಪ್ರಶ್ನಿಸಿ ಇ-ಕಾಮರ್ಸ್​ನ ದೈತ್ಯ ಕಂಪನಿಗಳು ನ್ಯಾಯಾಲಯದ ಮೊರೆ ಹೋಗಿದ್ದವು.

ಸ್ಪರ್ಧಾ ನೀತಿಗೆ ಹೊರತಾದ ಒಪ್ಪಂದಗಳನ್ನು ಮಾಡಿಕೊಳ್ಳುವ ಮೂಲಕ ಈ ಎರಡೂ ಕಂಪನಿಗಳು 2002ರ ಕಂಪನಿ ಕಾಯ್ದೆ ಉಲ್ಲಂಘಿಸಿವೆ ಎಂಬ ದೂರಿಗೆ ಸಂಬಂಧಿಸಿದಂತೆ ಕಳೆದ ಜೂನ್ 11ರಂದು ಏಕ ಸದಸ್ಯ ನ್ಯಾಯಪೀಠವು ಆದೇಶ ನೀಡಿತ್ತು. ತಮ್ಮ ಮಾರಾಟ ವೇದಿಕೆಗಳ ಮೂಲಕ ಕೆಲವೇ ವ್ಯಾಪಾರಿಗಳನ್ನು ಪ್ರೋತ್ಸಾಹಿಸುತ್ತಿರುವ ಈ ಕಂಪನಿಗಳು, ಅತಿಯಾಗಿ ರಿಯಾಯ್ತಿಗಳನ್ನು ಘೋಷಿಸುವ ಮೂಲಕ ಸ್ಪರ್ಧೆಯನ್ನು ಹೊಸಕಿಹಾಕಲು ಯತ್ನಿಸುತ್ತಿವೆ ಎಂಬ ದೂರು ಸಹ ಸಿಸಿಐಗೆ ಸಲ್ಲಿಕೆಯಾಗಿತ್ತು.

ವ್ಯಾಪಾರಿಗಳ ಸಂಘದ ಪರವಾಗಿ ಅಮೆಜಾನ್ ಮತ್ತು ಫ್ಲಿಪ್​ಕಾರ್ಟ್​ ವಿರುದ್ಧ ಅರ್ಜಿ ಸಲ್ಲಿಸಿರುವ ಸರ್ವದಾ ಲೀಗಲ್ ಸಂಸ್ಥೆಯ ವಕ್ತಾರರು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಸ್ವಾಗತಿಸಿದ್ದಾರೆ. ವಿದೇಶಿ ಸುದ್ದಿಸಂಸ್ಥೆಗಳು ಈ ತೀರ್ಪನ್ನು ಅಮೆಜಾನ್ ಮತ್ತು ಫ್ಲಿಪ್​ಕಾರ್ಟ್​ಗೆ ಆದ ಹಿನ್ನಡೆ ಎಂದೇ ವ್ಯಾಖ್ಯಾನಿಸಿವೆ.

(Karnataka High Court quashes Amazon Flipkart plea against antitrust probe by CCI)

ಇದನ್ನೂ ಓದಿ: ಟ್ವಿಟರ್ ಇಂಡಿಯಾ ಎಂಡಿ ಮನೀಶ್​ ಮಹೇಶ್ವರಿಗೆ ಕರ್ನಾಟಕ ಹೈಕೋರ್ಟ್‌ನಿಂದ ರಿಲೀಫ್

ಇದನ್ನೂ ಓದಿ: ಸಾವಿನಂಚಿನಲ್ಲಿರುವ ಗಂಡನಿಂದ ಗರ್ಭಿಣಿಯಾಗಬೇಕೆಂದ ಹೆಂಡತಿ; ವೀರ್ಯ ಸಂಗ್ರಹಿಸಲು ಹೈಕೋರ್ಟ್​ ಅನುಮತಿ

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ