AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪರ್ಧಾ ಆಯೋಗದ ತನಿಖೆಗೆ ತಡೆ ನೀಡಬೇಕೆಂಬ ಅಮೆಜಾನ್, ಫ್ಲಿಪ್​ಕಾರ್ಟ್​ ಮನವಿ ತಳ್ಳಿಹಾಕಿದ ಕರ್ನಾಟಕ ಹೈಕೋರ್ಟ್​

‘ಈ ಹಂತದಲ್ಲಿ ತನಿಖೆಯನ್ನು ನಿಲ್ಲಿಸಲು ಸಾಧ್ಯವಿಲ್ಲ’ ಎಂದು ನ್ಯಾಯಮೂರ್ತಿ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ನ್ಯಾಯಪೀಠವು ಹೇಳಿತು.

ಸ್ಪರ್ಧಾ ಆಯೋಗದ ತನಿಖೆಗೆ ತಡೆ ನೀಡಬೇಕೆಂಬ ಅಮೆಜಾನ್, ಫ್ಲಿಪ್​ಕಾರ್ಟ್​ ಮನವಿ ತಳ್ಳಿಹಾಕಿದ ಕರ್ನಾಟಕ ಹೈಕೋರ್ಟ್​
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Jul 23, 2021 | 4:41 PM

Share

ಬೆಂಗಳೂರು: ಇ-ಕಾಮರ್ಸ್​ ದೈತ್ಯ ಕಂಪನಿಗಳಾದ ಅಮೆಜಾನ್ ಮತ್ತು ಫ್ಲಿಪ್​ಕಾರ್ಟ್​ಗಳಿಗೆ ಕಾನೂನು ಹೋರಾಟದಲ್ಲಿ ಮತ್ತೆ ಹಿನ್ನಡೆಯಾಗಿದೆ. ಸ್ಪರ್ಧಾ ಆಯೋಗದ (Competition Commission of India – CCI) ತನಿಖೆಗೆ ತಡೆ ನೀಡಬೇಕೆಂಬ ಈ ಕಂಪನಿಗಳ ಬೇಡಿಕೆಯನ್ನು ಕರ್ನಾಟಕ ಹೈಕೋರ್ಟ್​ನ ವಿಭಾಗೀಯ ನ್ಯಾಯಪೀಠವು ಶುಕ್ರವಾರ ವಜಾ ಮಾಡಿದೆ. ಸ್ಪರ್ಧಾ ಆಯೋಗವು ತನಿಖೆ ಮುಂದುವರಿಸಲು ಹೈಕೋರ್ಟ್​ ಅನುಮತಿ ನೀಡಿದೆ.

‘ಈ ಹಂತದಲ್ಲಿ ತನಿಖೆಯನ್ನು ನಿಲ್ಲಿಸಲು ಸಾಧ್ಯವಿಲ್ಲ’ ಎಂದು ನ್ಯಾಯಮೂರ್ತಿ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ನ್ಯಾಯಪೀಠವು ಹೇಳಿತು. ಸ್ಪರ್ಧಾ ಆಯೋಗವು ತೆಗೆದುಕೊಂಡಿರುವ ಕ್ರಮಗಳು ಅಂತಿಮ ಹಂತಕ್ಕೆ ತಲುಪಬಾರದು ಎನ್ನುವ ಉದ್ದೇಶದಿಂದ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿಗಳು ವಜಾರ್ಹವಾದವು, ಪರಿಗಣನೆಗೆ ಯೋಗ್ಯವಾದವಲ್ಲ ಎಂದು ದ್ವಿ ಸದಸ್ಯ ನ್ಯಾಯಪೀಠವು ಅಭಿಪ್ರಾಯಪಟ್ಟಿತು.

ದೆಹಲಿ ವ್ಯಾಪಾರ ಮಹಾಸಂಘವು ಸಲ್ಲಿಸಿರುವ ಅರ್ಜಿಯನ್ನು ಆಧರಿಸಿ ಭಾರತದ ಸ್ವರ್ಧಾ ಆಯೋಗವು ಜನವರಿ 13, 2020ರಂದು ಈ ಸಂಬಂಧ ತನಿಖೆ ನಡೆಸಲು ನಿರ್ದೇಶನ ನೀಡಿತ್ತು. ಈ ಆದೇಶಗಳನ್ನು ಪ್ರಶ್ನಿಸಿ ಇ-ಕಾಮರ್ಸ್​ನ ದೈತ್ಯ ಕಂಪನಿಗಳು ನ್ಯಾಯಾಲಯದ ಮೊರೆ ಹೋಗಿದ್ದವು.

ಸ್ಪರ್ಧಾ ನೀತಿಗೆ ಹೊರತಾದ ಒಪ್ಪಂದಗಳನ್ನು ಮಾಡಿಕೊಳ್ಳುವ ಮೂಲಕ ಈ ಎರಡೂ ಕಂಪನಿಗಳು 2002ರ ಕಂಪನಿ ಕಾಯ್ದೆ ಉಲ್ಲಂಘಿಸಿವೆ ಎಂಬ ದೂರಿಗೆ ಸಂಬಂಧಿಸಿದಂತೆ ಕಳೆದ ಜೂನ್ 11ರಂದು ಏಕ ಸದಸ್ಯ ನ್ಯಾಯಪೀಠವು ಆದೇಶ ನೀಡಿತ್ತು. ತಮ್ಮ ಮಾರಾಟ ವೇದಿಕೆಗಳ ಮೂಲಕ ಕೆಲವೇ ವ್ಯಾಪಾರಿಗಳನ್ನು ಪ್ರೋತ್ಸಾಹಿಸುತ್ತಿರುವ ಈ ಕಂಪನಿಗಳು, ಅತಿಯಾಗಿ ರಿಯಾಯ್ತಿಗಳನ್ನು ಘೋಷಿಸುವ ಮೂಲಕ ಸ್ಪರ್ಧೆಯನ್ನು ಹೊಸಕಿಹಾಕಲು ಯತ್ನಿಸುತ್ತಿವೆ ಎಂಬ ದೂರು ಸಹ ಸಿಸಿಐಗೆ ಸಲ್ಲಿಕೆಯಾಗಿತ್ತು.

ವ್ಯಾಪಾರಿಗಳ ಸಂಘದ ಪರವಾಗಿ ಅಮೆಜಾನ್ ಮತ್ತು ಫ್ಲಿಪ್​ಕಾರ್ಟ್​ ವಿರುದ್ಧ ಅರ್ಜಿ ಸಲ್ಲಿಸಿರುವ ಸರ್ವದಾ ಲೀಗಲ್ ಸಂಸ್ಥೆಯ ವಕ್ತಾರರು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಸ್ವಾಗತಿಸಿದ್ದಾರೆ. ವಿದೇಶಿ ಸುದ್ದಿಸಂಸ್ಥೆಗಳು ಈ ತೀರ್ಪನ್ನು ಅಮೆಜಾನ್ ಮತ್ತು ಫ್ಲಿಪ್​ಕಾರ್ಟ್​ಗೆ ಆದ ಹಿನ್ನಡೆ ಎಂದೇ ವ್ಯಾಖ್ಯಾನಿಸಿವೆ.

(Karnataka High Court quashes Amazon Flipkart plea against antitrust probe by CCI)

ಇದನ್ನೂ ಓದಿ: ಟ್ವಿಟರ್ ಇಂಡಿಯಾ ಎಂಡಿ ಮನೀಶ್​ ಮಹೇಶ್ವರಿಗೆ ಕರ್ನಾಟಕ ಹೈಕೋರ್ಟ್‌ನಿಂದ ರಿಲೀಫ್

ಇದನ್ನೂ ಓದಿ: ಸಾವಿನಂಚಿನಲ್ಲಿರುವ ಗಂಡನಿಂದ ಗರ್ಭಿಣಿಯಾಗಬೇಕೆಂದ ಹೆಂಡತಿ; ವೀರ್ಯ ಸಂಗ್ರಹಿಸಲು ಹೈಕೋರ್ಟ್​ ಅನುಮತಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ