AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಗ್ನ ಪತ್ರಿಕೆಯಲ್ಲಿ ಮೋದಿಗೆ ಮತ ಕೇಳಿದ್ದ ಪ್ರಕರಣ: ಫ್ಲೈಯಿಂಗ್ ಸ್ಕ್ವಾಡ್ ದಾಖಲಿಸಿದ್ದ ಕೇಸ್ ರದ್ದು

ವಿವಾಹ ಆಹ್ವಾನ ಪತ್ರಿಕೆಯಲ್ಲಿ ಪ್ರಧಾನಿ ಮೋದಿಗೆ ಮತ ಯಾಚಿಸಿದ್ದಕ್ಕೆ ಚುನಾವಣಾಧಿಕಾರಿಗಳು ದಾಖಲಿಸಿದ್ದ ಪ್ರಕರಣ ರದ್ದಗೊಂಡಿದೆ. ಕಳೆದ ಲೋಕಸಭಾ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಮೋದಿಗೆ ಮತ ಹಾಕಿದರೆ ನನಗೆ ಗಿಫ್ಟ್ ನೀಡಿದಂತೆ ಎಂದು ಲಗ್ನ ಪತ್ರಿಕೆಯಲ್ಲಿ ಕೇಳಿಕೊಳ್ಳಲಾಗಿತ್ತು. ಇದೀಗ ಈ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಲಗ್ನ ಪತ್ರಿಕೆಯಲ್ಲಿ ಮೋದಿಗೆ ಮತ ಕೇಳಿದ್ದ ಪ್ರಕರಣ:  ಫ್ಲೈಯಿಂಗ್ ಸ್ಕ್ವಾಡ್ ದಾಖಲಿಸಿದ್ದ ಕೇಸ್ ರದ್ದು
ಕರ್ನಾಟಕ ಹೈಕೋರ್ಟ್​
Ramesha M
| Edited By: |

Updated on: Dec 17, 2024 | 2:58 PM

Share

ಬೆಂಗಳೂರು, (ಡಿಸೆಂಬರ್ 17): ಕಳೆದ ಲೋಕಸಭಾ ಚುನಾವಣೆ ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಶಿವಪ್ರಸಾದ್ ತಮ್ಮ ವಿವಾಹ ಪತ್ರಿಕೆಯಲ್ಲಿ ಮೋದಿ ಮತ ನೀಡುವಂತೆ ಮನವಿ ಮಾಡಿದ್ದರು. ಈ ಸಂಬಂಧ ಫ್ಲೈಯಿಂಗ್ ಸ್ಕ್ವಾಡ್ ಕೇಸ್ ದಾಖಲಿಸಿದ್ದರು. ಈ ಪ್ರಕರಣ ರದ್ದುಕೋರಿ ಶಿವಪ್ರಸಾದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​ ಏಕಸದಸ್ಯ ಪೀಠ, ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಚುನಾವಣೆ ನೀತಿ ಸಂಹಿತೆಗಿಂತ ಮೊದಲೇ ಲಗ್ನ ಪತ್ರಿಕೆ ಮುದ್ರಣವಾಗಿರುವ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.

2024 ಮಾರ್ಚ್ 1 ರಂದು ಮದುವೆ ಆಹ್ವಾನ ಪತ್ರಿಕೆ ಮುದ್ರಣವಾಗಿದೆ. ಆದ್ರೆ, ಚುನಾವಣಾ ನೀತಿಸಂಹಿತೆ ಮಾರ್ಚ್​ 16 ರಂದು ಜಾರಿಯಾಗಿದೆ. ಹೀಗಾಗಿ ಕೇಸ್ ರದ್ದು ಮಾಡುವಂತೆ ವಕೀಲ ಎಂ.ವಿನೋದ್ ಕುಮಾರ್ ಕೋರ್ಟ್​ಗೆ ಮನವಿ ಮಾಡಿದ್ದರು. ಇದನ್ನು ಪರಿಗಣಿಸಿದ ಹೈಕೋರ್ಟ್ ಏಕಸದಸ್ಯ ಪೀಠ, ಶಿವಪ್ರಸಾದ್ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿಗೆ ಮತ ಕೇಳಿದ್ದಕ್ಕೆ ಕೇಸ್​ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂತಾಯ ನಿವಾಸಿ ಶಿವಪ್ರಸಾದ್ ತಮ್ಮ ವಿವಾಹದ ಆಹ್ವಾನ ಪತ್ರಿಕೆಯಲ್ಲಿ ‘ಮೋದಿಗೆ ಮತ ಹಾಕಿದರೆ ನನಗೆ ಗಿಫ್ಟ್ ನೀಡಿದಂತೆ’ ಎಂದು ಮುದ್ರಿಸಿದ್ದರು. ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ವರನ ವಿರುದ್ಧ ಏಪ್ರಿಲ್ 17ರಂದು ಚುನಾವಣಾ ನೋಡಲ್​ ಅಧಿಕಾರಿಗಳಿಗೆ ದೂರು ಬಂದಿತ್ತು. ನಂತರ ಚುನಾವಣಾಧಿಕಾರಿಗಳು ನ್ಯಾಯಾಲಯಕ್ಕೆ ಈ ಬಗ್ಗೆ ವರದಿ ಸಲ್ಲಿಸಿ ಮದುಮಗನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್