ಡಿಕೆ ಶಿವಕುಮಾರ್​​​ಗೆ ಹೈಕೋರ್ಟ್ ಬಿಗ್ ರಿಲೀಫ್: ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್​ ರದ್ದು

ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನದ ಪೋಸ್ಟರ್​​ನ್ನು ಬಿಜೆಪಿ (bjp) ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧದ ಎಫ್​​ಐಆರ್​​ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಗುರುವಾರ ಆದೇಶ ಹೊರಡಿಸಿದೆ. ಆ ಮೂಲಕ ಡಿಸಿಎಂಗೆ ಬಿಗ್ ರಿಲೀಫ್ ಸಿಕ್ಕಿದೆ. ಕಾಂಗ್ರೆಸ್​​ ತಿರುಚಿದ ಪೋಸ್ಟರ್​​ಗಳು ಫೋರ್ಜರಿ ಮತ್ತು ಎರಡು ಗುಂಪುಗಳ‌ ನಡುವೆ ದ್ವೇಷ ಮೂಡಿಸುವ ಆರೋಪ ಕೇಳಿಬಂದಿದ್ದರಿಂದ ದೂರು ದಾಖಲಾಗಿತ್ತು. ಇದೀಗ ಈ ಪ್ರಕರಣದ ಸಂಬಂಧ ಹೈಕೋರ್ಟ್​ ಮಹತ್ವ ಆದೇಶ ಹೊರಡಿಸಿದ್ದು,ಡಿಕೆಶಿ ನಿರಾಳರಾಗಿದ್ದಾರೆ.

ಡಿಕೆ ಶಿವಕುಮಾರ್​​​ಗೆ ಹೈಕೋರ್ಟ್ ಬಿಗ್ ರಿಲೀಫ್: ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್​ ರದ್ದು
Dk Shivakumar
Edited By:

Updated on: Jun 19, 2026 | 6:26 PM

ಬೆಂಗಳೂರು, (ಜೂನ್ 19): ಬಿಜೆಪಿಯ ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನದ ಪೋಸ್ಟರ್ ತಿರುಚಿ ಕಾಂಗ್ರೆಸ್​​​​ನಿಂದ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ  (DK Shivakumar) ಬಿಗ್ ರಿಲೀಫ್ ಸಿಕ್ಕಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅವಹೇಳನಕಾರಿ ಪೋಸ್ಟ್ ಪ್ರಕರಣವನ್ನು ರದ್ದುಪಡಿಸಿ ಕರ್ನಾಟಕ ಹೈಕೋರ್ಟ್ (karnataka high court)​ ಮಹತ್ವದ ಆದೇಶ ಹೊರಡಿಸಿದೆ. ಫೋರ್ಜರಿ, ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪ ಮಾಡಿ ವಕೀಲ ಯೋಗೇಂದ್ರ ಹೊಡಘಟ್ಟ ಎಂಬುವರು ದಾಖಲಿಸಿದ್ದ ಪ್ರಕರಣವನ್ನು ರದ್ದು ಕೋರಿ ಡಿಕೆ ಶಿವಕುಮಾರ್, ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದೆ.

ಮುಖ್ಯಾಂಶಗಳು

  • ಬಿಜೆಪಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್​​ನಲ್ಲಿ ಸಿಎಂಗೆ ರಿಲೀಫ್
  • ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಕೇಸ್ ರದ್ದುಪಡಿಸಿ ಹೈಕೋರ್ಟ್ ಆದೇಶ
  • ಬಿಜೆಪಿಯ ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನ
  • ಅಭಿಯಾನದ ಪೋಸ್ಟರ್ ತಿರುಚಿ ಎಕ್ಸ್​ನಲ್ಲಿ ಕಾಂಗ್ರೆಸ್​ನಿಂದ ಪೋಸ್ಟ್
  • ವಕೀಲ ಯೋಗೇಂದ್ರ ಹೊಡಘಟ್ಟ ಖಾಸಗಿ ದೂರು ದಾಖಲಿಸಿದ್ದರು

ಸಿಎಂ ಡಿ.ಕೆ.ಶಿವಕುಮಾರ್ ಪರ ವಕೀಲ ಹೆಚ್.ವಿ.ಪ್ರವೀಣ್ ಗೌಡ ವಾದ ಮಾಡಿದ್ದು, ಡಿ.ಕೆ.ಶಿವಕುಮಾರ್ ಸ್ವತಃ ಈ ಪೋಸ್ಟ್ ಮಾಡಿಲ್ಲವೆಂದು ಎಂದು ವಾದ ಮಂಡಿಸಿದರು.

ಇದನ್ನೂ ಓದಿ: ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್​: ಡಿಕೆಶಿಗೆ ಕೋರ್ಟ್ ಬಿಗ್ ರಿಲೀಫ್

ಪ್ರಕರಣದ ಹಿನ್ನೆಲೆ

ಹುಬ್ಬಳ್ಳಿಯಲ್ಲಿ 1992ರಲ್ಲಿ ನಡೆದ ರಾಮ ಜನ್ಮಭೂಮಿ ಕುರಿತ ಹೋರಾಟದಲ್ಲಿ ಭಾಗಿಯಾಗಿದ್ದ ಕರಸೇವಕ ಶ್ರೀಕಾಂತ ಪೂಜಾರಿಯನ್ನು 31 ವರ್ಷಗಳ ಬಳಿಕ ಅಂದರೆ ರಾಮ ಮಂದಿರ ಉದ್ಘಾಟನೆಗೆ ಸಮಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂಧಿಸಿ ಜೈಲಿಗಟ್ಟಿತ್ತು. ಕಾಂಗ್ರೆಸ್​ ಸರ್ಕಾರ ಉದ್ದೇಶ ಪೂರ್ವಕವಾಗಿ ಬಂಧಿಸಿದ್ದಾರೆ. ಹೀಗಾಗಿ ಇದನ್ನು ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂದು ವಿಭಿನ್ನ ಅಭಿಯಾನ ಮಾಡಿದ್ದರು. ಇದಕ್ಕೆ  ಡಿಕೆ ಶಿವಕುಮಾರ್​​ ಸೇರಿದಂತೆ ಕಾಂಗ್ರೆಸ್​​ ನಾಯಕರು ತಿರುಚಿ ಪೋಸ್ಟರ್​​ಗಳನ್ನು ಹಾಕಿದ್ದರು. ಬಳಿಕ ವಕೀಲ ಯೋಗೇಂದ್ರ ಹೊಡಘಟ್ಟ ಖಾಸಗಿ ದೂರು ದಾಖಲಿಸಿದ್ದರು.

ಕಾಂಗ್ರೆಸ್​​ ತಿರುಚಿದ ಪೋಸ್ಟರ್​​ಗಳು ಫೋರ್ಜರಿ ಮತ್ತು ಎರಡು ಗುಂಪುಗಳ‌ ನಡುವೆ ದ್ವೇಷ ಮೂಡಿಸಿದ ಆರೋಪಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಖಾಸಗಿ ದೂರು ಸಲ್ಲಿಸಿದ್ದರು. ದೂರು ಆಧರಿಸಿ ಹೈಗ್ರೌಂಡ ಪೊಲೀಸರು ಡಿಸಿಎಂ ಡಿಕೆ ಶಿವಕುಮಾರ್​​ ಮತ್ತು ಬಿಆರ್​ ನಾಯ್ಡು ವಿರುದ್ಧ ಎಫ್​ಐಆರ್​​ ದಾಖಲಾಗಿತ್ತು. ಅರ್ಜಿ ಪರಿಶೀಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಬಳಿಕ ಇದಕ್ಕೆ ಹೈಕೋರ್ಟ್ ಇದಕ್ಕೆ ತಡೆಯಾಜ್ಞೆ ನೀಡಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:12 pm, Fri, 19 June 26

Follow Us