AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಬಿನೆಟ್ ಒಪ್ಪಿಗೆಯಿಲ್ಲದೇ ಸರ್ಕಾರ ಮಾರಾಟಕ್ಕೆ ಆದೇಶಿಸಬಹುದೇ?; ಜಿಂದಾಲ್​ಗೆ 3,667 ಎಕರೆ ಜಮೀನು ಪರಭಾರೆ ವಿಚಾರವಾಗಿ ಹೈಕೋರ್ಟ್ ಪ್ರಶ್ನೆ

ಸರ್ಕಾರಿ ಆದೇಶದ ಮೂಲಕ ಜಮೀನು ಪರಭಾರೆ ಮಾಡಬಹುದೇ? ಕ್ಯಾಬಿನೆಟ್ ಒಪ್ಪಿಗೆಯಿಲ್ಲದೇ ಸರ್ಕಾರ ಮಾರಾಟಕ್ಕೆ ಆದೇಶಿಸಬಹುದೇ? ಎಂದು ಪ್ರಶ್ನಿಸಿರುವ ಹೈಕೋರ್ಟ್, ಈ ಬಗ್ಗೆ ರಾಜ್ಯ ಸರ್ಕಾರದ ನಿಲುವು ತಿಳಿಸಲು ಸೂಚನೆ ನೀಡಿದೆ. ಜತೆಗೆ ವಿಚಾರಣೆಯನ್ನು ಜುಲೈ 16 ಕ್ಕೆ ಮುಂದೂಡಿದೆ.

ಕ್ಯಾಬಿನೆಟ್ ಒಪ್ಪಿಗೆಯಿಲ್ಲದೇ ಸರ್ಕಾರ ಮಾರಾಟಕ್ಕೆ ಆದೇಶಿಸಬಹುದೇ?; ಜಿಂದಾಲ್​ಗೆ 3,667 ಎಕರೆ ಜಮೀನು ಪರಭಾರೆ ವಿಚಾರವಾಗಿ ಹೈಕೋರ್ಟ್ ಪ್ರಶ್ನೆ
ಕರ್ನಾಟಕ ಹೈಕೋರ್ಟ್​
TV9 Web
| Edited By: |

Updated on:Jul 13, 2021 | 7:53 PM

Share

ಬೆಂಗಳೂರು: ಜಿಂದಾಲ್ ಸಂಸ್ಥೆಗೆ 3,667 ಎಕರೆ ಜಮೀನು ಪರಭಾರೆ ವಿಚಾರವಾಗಿ ಕ್ಯಾಬಿನೆಟ್ ಒಪ್ಪಿಗೆ ಸಿಗುವವರೆಗೂ ಜಮೀನು ಪರಭಾರೆ ಇಲ್ಲ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪತ್ರದಲ್ಲಿ ಸ್ಪಷ್ಟೀಕರಣ ನೀಡಿದ್ದು, ಸರ್ಕಾರದ ಈ ನಿಲುವಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಪರಭಾರೆ ಬಗ್ಗೆ ಸರ್ಕಾರದ ನಿಲುವು ಪಾರದರ್ಶಕವಾಗಿರಬೇಕು. ಆದರೆ ಸರ್ಕಾರದ ನಿರ್ಧಾರ ಅಸ್ಪಷ್ಟ ಮತ್ತು ಆಘಾತಕಾರಿಯಾಗಿದೆ. ಸರ್ಕಾರಿ ಆದೇಶದ ಮೂಲಕ ಜಮೀನು ಪರಭಾರೆ ಮಾಡಬಹುದೇ? ಕ್ಯಾಬಿನೆಟ್ ಒಪ್ಪಿಗೆಯಿಲ್ಲದೇ ಸರ್ಕಾರ ಮಾರಾಟಕ್ಕೆ ಆದೇಶಿಸಬಹುದೇ? ಎಂದು ಪ್ರಶ್ನಿಸಿರುವ ಹೈಕೋರ್ಟ್, ಈ ಬಗ್ಗೆ ರಾಜ್ಯ ಸರ್ಕಾರದ ನಿಲುವು ತಿಳಿಸಲು ಸೂಚನೆ ನೀಡಿದೆ. ಜತೆಗೆ ವಿಚಾರಣೆಯನ್ನು ಜುಲೈ 16 ಕ್ಕೆ ಮುಂದೂಡಿದೆ.

ಕಂದಾಯ ಕೋರ್ಟ್​ಗಳಲ್ಲಿ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ಕಂದಾಯ ನ್ಯಾಯಾಲಯ ಸೇರಿದಂತೆ ಅರೆ ನ್ಯಾಯಿಕ ಕೋರ್ಟ್ಗಳಲ್ಲಿ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಲಾಕ್​ಡೌನ್​ ನಂತರ ತಹಸೀಲ್ದಾರ್, ಸಹಾಯಕ ಆಯುಕ್ತ ಹಾಗೂ ಜಿಲ್ಲಾಧಿಕಾರಿ ಕೋರ್ಟ್ ಸೇರಿದಂತೆ ಅರೆ ನ್ಯಾಯಿಕ ಕೋರ್ಟ್​ಗಳಲ್ಲಿ ಪ್ರಕರಣಗಳ ವಿಚಾರಣೆಯಾಗದೇ ಬಾಕಿ ಉಳಿದಿವೆ. ಕಂದಾಯ ನ್ಯಾಯಾಲಯಗಳಲ್ಲಿ ಸದ್ಯಕ್ಕೆ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಲಾಗಿಲ್ಲ. ಇದರಿಂದ ಜನಸಾಮಾನ್ಯರ ಭೂಮಿ ವಿವಾದ, ಪಹಣಿ, ಖಾತಾ, ಮ್ಯುಟೇಷನ್ ವಿವಾದಗಳು ಇತ್ಯರ್ಥವಾಗದೇ ಉಳಿದಿದ್ದವು. ಹೀಗಾಗಿ ಇಂತಹ ಕೋರ್ಟ್ ಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಬೇಕೆಂದು ಹೈಕೋರ್ಟ್ ನಿರ್ದೇಶನ ನೀಡಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದರೆ ಜನಸಾಮಾನ್ಯರಿಗೆ ಖಾತೆ, ಮ್ಯುಟೇಷನ್ ವಿವಾದಗಳಲ್ಲಿ ಅನುಕೂಲವಾಗಲಿದೆ. ಅಲ್ಲದೇ ಕೇವಲ ಕೊರೊನಾ ಸಂದರ್ಭಗಳಲ್ಲಿ ಮಾತ್ರವಲ್ಲದೇ ಭವಿಷ್ಯದಲ್ಲೂ ತಂತ್ರಜ್ಞಾನ ಬಳಕೆಯಿಂದ ಜನರಿಗೆ ಸಹಾಯವಾಗಲಿದೆ. ಲಾಕ್​ಡೌನ್​ ನಂತರ ರಾಜ್ಯಾದ್ಯಂತ ತಹಶೀಲ್ದಾರ್, ಎಸಿ, ಡಿಸಿ ಕೋರ್ಟ್​ಗಳಲ್ಲಿ ವಿಚಾರಣೆ ಸ್ಥಗಿತವಾಗಿದೆ. ಈ ಬಗ್ಗೆ ಸಾಫ್ಟ್​ವೇರ್​ ಬಳಸಿಕೊಳ್ಳಲು ಸರ್ಕಾರ ಮುಂದಾಗಬೇಕು. ಇದಕ್ಕೆ ಬೇಕಾದ ಹಣಕಾಸಿನ ವ್ಯವಸ್ಥೆಗೆ ಕಂದಾಯ ಇಲಾಖೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ನೀಡಬೇಕು. ಪ್ರಸ್ತಾವನೆ ಬಗ್ಗೆ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಎಂ.ನಾಗರಾಜ್ ಎಂಬುವರ ಪಿಐಎಲ್ ವಿಚಾರಣೆ ವೇಳೆ ಹೈಕೋರ್ಟ್ ಈ ನಿರ್ದೇಶನ ನೀಡಿದೆ.

ಕೊರೊನಾ 3 ನೇ ಅಲೆ ಆರಂಭವಾಗುವ ಸಾಧ್ಯತೆಯಿದ್ದು, ಸಿದ್ಧತೆಯ ಭಾಗವಾಗಿ ವಿಡಿಯೋ ಕಾನ್ಫರೆನ್ಸ್ ಕಲ್ಪಿಸುವುದು ಅಗತ್ಯವೆಂದು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಅಭಿಪ್ರಾಯಪಟ್ಟಿದ್ದಾರೆ. ಸಿಲಿಕಾನ್ ಸಿಟಿ ಎಂದು ಕರೆಯಲಾಗುವ ಬೆಂಗಳೂರಿನಲ್ಲಿ ಕೋರ್ಟ್ಗಳೂ ತಂತ್ರಜ್ಞಾನದ ಲಾಭ ಪಡೆಯಬೇಕು. ಈಗಾಗಲೇ ಹೈಕೋರ್ಟ್​ನ ಎಲ್ಲಾ ಪೀಠಗಳಲ್ಲಿ ವಕೀಲರ ವಾದಮಂಡನೆಗೆ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೇ ಸಿವಿಲ್ ಕೋರ್ಟ್, ಮ್ಯಾಜಿಸ್ಟ್ರೇಟ್ ಕೋರ್ಟ್ ಸೇರಿದಂತೆ ವಿಚಾರಣಾ ನ್ಯಾಯಾಲಯಗಳಲ್ಲೂ ಭಾಗಶಃ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಶಾಶ್ವತವಾಗಿ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಲು ಮೂಲಸೌಕರ್ಯ ಕಲ್ಪಿಸುವಂತೆ ಈಗಾಗಲೇ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ

ಇದನ್ನೂ ಓದಿ: 

Fact Check: ಈ ಫೋಟೋ ಹಿಮಾಚಲ ಪ್ರದೇಶದ ಮನಾಲಿಯದ್ದೇ ಆದರೂ..ಕೊವಿಡ್​ 19 2ನೇ ಅಲೆ ಸಂದರ್ಭದಲ್ಲ..! 

ಕೊವಿಡ್ ನಿಯಮ ಉಲ್ಲಂಘನೆ ಮುಂದುವರಿದರೆ ಇಲ್ಲಿವರೆಗೆ ನಾವು ಕೈಗೊಂಡ ಕ್ರಮಗಳೆಲ್ಲ ವ್ಯರ್ಥ: ಆರೋಗ್ಯ ಸಚಿವಾಲಯ

(Karnataka High Court question govt to Can the government order the sale without Cabinet approval)

Published On - 7:42 pm, Tue, 13 July 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?