ಶವಗಳನ್ನೂ ಬಿಡುತ್ತಿಲ್ಲ ಕಾಮುಕರು! ಮೃತದೇಹದ ಮೇಲೆ ಅತ್ಯಾಚಾರ ತಡೆಗೆ ಕಾನೂನು ರೂಪಿಸಲು ಕರ್ನಾಟಕ ಹೈಕೋರ್ಟ್ ಶಿಫಾರಸು

ಮೃತದೇಹಗಳ ಮೇಲಿನ ಅತ್ಯಾಚಾರ ಹಾಗೂ ವಿಕೃತಿಗೆ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಅತ್ಯಾಚಾರ (Rape) ತಡೆ ಕಾನೂನಿಗೆ ತಿದ್ದುಪಡಿ ಅಗತ್ಯ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ವಿಭಾಗೀಯ ಪೀಠ ಬುಧವಾರ ಅಭಿಪ್ರಾಯಪಟ್ಟಿದೆ.

ಶವಗಳನ್ನೂ ಬಿಡುತ್ತಿಲ್ಲ ಕಾಮುಕರು! ಮೃತದೇಹದ ಮೇಲೆ ಅತ್ಯಾಚಾರ ತಡೆಗೆ ಕಾನೂನು ರೂಪಿಸಲು ಕರ್ನಾಟಕ ಹೈಕೋರ್ಟ್ ಶಿಫಾರಸು
ಕರ್ನಾಟಕ ಹೈಕೋರ್ಟ್
Follow us
|

Updated on: May 31, 2023 | 4:07 PM

ಬೆಂಗಳೂರು: ಮೃತದೇಹಗಳ ಮೇಲಿನ ಅತ್ಯಾಚಾರ ಹಾಗೂ ವಿಕೃತಿಗೆ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಅತ್ಯಾಚಾರ (Rape) ತಡೆ ಕಾನೂನಿಗೆ ತಿದ್ದುಪಡಿ ಅಗತ್ಯ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ವಿಭಾಗೀಯ ಪೀಠ ಬುಧವಾರ ಅಭಿಪ್ರಾಯಪಟ್ಟಿದೆ. ಈ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸನ್ನೂ ಮಾಡಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377ರ (IPC Section 377) ವ್ಯಾಪ್ತಿಗೆ ಮೃತದೇಹದ ಮೇಲಿನ ಅತ್ಯಾಚಾರವೂ ಸೇರಬೇಕು. ಈ ನಿಟ್ಟಿನಲ್ಲಿ ಕಾನೂನಿಗೆ ತಿದ್ದುಪಡಿ ಮಾಡಬೇಕು ಎಂದು ನ್ಯಾಯಮೂರ್ತಿ ಬಿ ವೀರಪ್ಪ ಹಾಗೂ ವೆಂಕಟೇಶ ನಾಯಕ್ ಟಿ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಇಂಗ್ಲೆಂಡ್, ಕೆನಡಾ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾಗಳಲ್ಲಿ ಮೃತದೇಹಗಳ ಮೇಲಿನ ವಿಕೃತಿಗೆ ಶಿಕ್ಷೆಯಿದೆ. ಜೀವನದ ಹಕ್ಕಿನಲ್ಲಿ ಮೃತ ದೇಹದ ಘನತೆಯ ಹಕ್ಕೂ ಸೇರಿದೆ. ಹೀಗಾಗಿ 6 ತಿಂಗಳಲ್ಲಿ ಐಪಿಸಿ ಕಾಯ್ದೆ ತಿದ್ದುಪಡಿ ಮಾಡಬೇಕು ಎಂದು ಪೀಠವು ಶಿಫಾರಸು ಮಾಡಿದೆ.

ಏನಿದು ಮೃತದೇಹದ ಮೇಲಿನ ಅತ್ಯಾಚಾರ ಪ್ರಕರಣ?

ತುಮಕೂರಿನ ಯುವತಿಯೊಬ್ಬಳ ಕೊಲೆ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಪೀಠ, ಮೃತದೇಹದ ಮೇಲಿನ ಅತ್ಯಾಚಾರಕ್ಕೆ ಶಿಕ್ಷೆ ನೀಡಲು ಸದ್ಯಕ್ಕೆ ಕಾನೂನಿಲ್ಲದ ಕಾರಣ ಕೊಲೆ ಅಪರಾಧಕ್ಕೆ ಮಾತ್ರ ಜೀವಾವಧಿ ಶಿಕ್ಷೆ ವಿಧಿಸಿದೆ. ತುಮಕೂರಿನ ರಂಗರಾಜು ಅಲಿಯಾಸ್ ವಾಜಪೇಯಿ ಎಂಬಾತನಿಗೆ ಶಿಕ್ಷೆ ವಿಧಿಸಲಾಗಿದೆ.

ಇದನ್ನೂ ಓದಿ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ: ಶಿಕ್ಷಕನ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಆಸ್ಪತ್ರೆಗಳ ಶವಾಗಾರಗಳಲ್ಲಿ ಮೃತ ದೇಹದ ಮೇಲೆ ಅತ್ಯಾಚಾರದ ಘಟನೆಗಳು ನಡೆದಿವೆ. ಇಂಥ ಕೃತ್ಯಗಳ ತಡೆಗಾಗಿ ಶವಾಗಾರಗಳಲ್ಲಿ ಸಿಸಿಟಿವಿ ಅಳವಡಿಸಬೇಕು. 6 ತಿಂಗಳಲ್ಲಿ ಆಸ್ಪತ್ರೆಗಳ ಶವಾಗಾರಗಳಲ್ಲಿ ಸಿಸಿಟಿವಿ ಅಳವಡಿಸಬೇಕು ಎಂದೂ ನ್ಯಾಯಪೀಠ ಶಿಫಾರಸು ಮಾಡಿದೆ. ಜತೆಗೆ ಶವಾಗಾರಗಳಲ್ಲಿ ಶುಚಿತ್ವ ಕಾಪಾಡಲೂ ನಿರ್ದೇಶನ ನೀಡಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು