AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಸ್ಥಗಿತಕ್ಕಿಂತ ಪರಿಸ್ಥಿತಿ ಆಧರಿಸಿ ಆರಂಭಿಸೋದು ಉತ್ತಮ -ಸುರೇಶ್​ ಕುಮಾರ್​ ‘ವಿದ್ಯಾಗಮ’ಕ್ಕೆ ಹೈಕೋರ್ಟ್​ ಸಹಮತಿ

ಹಂತಹಂತವಾಗಿ ಶಾಲೆಗಳನ್ನು ಆರಂಭಿಸಲು ಕ್ರಮವಹಿಸಿ.ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆಗಳನ್ನು ಆರಂಭಿಸಿ ಶಾಲೆಗಳ ಸ್ಥಗಿತಕ್ಕಿಂತ ಪರಿಸ್ಥಿತಿ ಆಧರಿಸಿ ಆರಂಭಿಸೋದು ಉತ್ತಮ ಎಂದು ನ್ಯಾ.ಬಿ.ವಿ.ನಾಗರತ್ನ, ನ್ಯಾ.ನಟರಾಜ್​ರವರ ಪೀಠ ಅಭಿಪ್ರಾಯಪಟ್ಟಿದೆ.

ಶಾಲೆ ಸ್ಥಗಿತಕ್ಕಿಂತ ಪರಿಸ್ಥಿತಿ ಆಧರಿಸಿ ಆರಂಭಿಸೋದು ಉತ್ತಮ -ಸುರೇಶ್​ ಕುಮಾರ್​ ‘ವಿದ್ಯಾಗಮ’ಕ್ಕೆ ಹೈಕೋರ್ಟ್​ ಸಹಮತಿ
ಸುರೇಶ್​ ಕುಮಾರ್​ ‘ವಿದ್ಯಾಗಮ’ಕ್ಕೆ ಹೈಕೋರ್ಟ್​ ಸಮ್ಮತಿ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Dec 21, 2020 | 6:18 PM

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲೂ ವಿದ್ಯಾಗಮ ಜಾರಿ ಮಾಡಲಾಗುವುದು ಎಂದು ಹೈಕೋರ್ಟ್​ಗೆ ಸರ್ಕಾರದ ಪರ ವಕೀಲರು ತಿಳಿಸಿದ್ದಾರೆ. 2021ರ ಜ. 1ರಿಂದ ಎಲ್ಲಾ ಶಾಲೆಗಳಲ್ಲಿ ವಿದ್ಯಾಗಮ ಜಾರಿಯಾಗುವುದು. ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಲ್ಲೂ ಪುನರಾರಂಭವಾಗುವುದು ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ, 1ನೇ ತರಗತಿಯಿಂದ 10ನೇ ತರಗತಿವರೆಗೆ ವಿದ್ಯಾಗಮ ಜಾರಿಯಾಗುವ ರಾಜ್ಯ ಸರ್ಕಾರದ ಹೇಳಿಕೆಯನ್ನು ಹೈಕೋರ್ಟ್ ದಾಖಲಿಸಿಕೊಂಡಿದೆ. ಡಿಸೆಂಬರ್ 15ರಂದು ಸರ್ಕಾರದಿಂದ ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿತ್ತು. ಇದೀಗ, ಈ ನಿರ್ಧಾರಕ್ಕೆ ಬದ್ಧವಾಗಿರಲು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

‘ಹಂತಹಂತವಾಗಿ ಶಾಲೆಗಳನ್ನು ಆರಂಭಿಸಲು ಕ್ರಮವಹಿಸಿ’ ಹಂತಹಂತವಾಗಿ ಶಾಲೆಗಳನ್ನು ಆರಂಭಿಸಲು ಕ್ರಮವಹಿಸಿ. ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆಗಳನ್ನು ಆರಂಭಿಸಿ. ಶಾಲೆಗಳ ಸ್ಥಗಿತಕ್ಕಿಂತ ಪರಿಸ್ಥಿತಿ ಆಧರಿಸಿ ಆರಂಭಿಸೋದು ಉತ್ತಮ ಎಂದು ನ್ಯಾ.ಬಿ.ವಿ. ನಾಗರತ್ನ ಮತ್ತು ನ್ಯಾ. ನಟರಾಜ್​ ಅವರ ಪೀಠ ಅಭಿಪ್ರಾಯಪಟ್ಟಿದೆ.

ಜೊತೆಗೆ, CSR ಫಂಡ್ ಅಡಿಯಲ್ಲಿ ಲ್ಯಾಪ್‌ಟಾಪ್, ಕಂಪ್ಯೂಟರ್, ಟ್ಯಾಬ್ಲೆಟ್ ಒದಗಿಸುವ ವಿಚಾರವಾಗಿ ಖಾಸಗಿ ಕಂಪನಿಗಳಿಗೂ ಸರ್ಕಾರ ಮನವಿ ಮಾಡಿಕೊಳ್ಳಬಹುದು. ಶಾಲೆಯಿಂದ ಹೊರಗುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೂ ಗಮನಹರಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಇದೀಗ, ಹೈಕೋರ್ಟ್ ತನ್ನ ಅಭಿಪ್ರಾಯ ತಿಳಿಸುವ ಮೂಲಕ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಅವರ ಶಾಲೆಗಳನ್ನು ಪುನರಾರಂಭಗೊಳಿಸುವ ನಿರ್ಧಾರಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಂತಾಗಿದೆ. ಶಾಲೆಗಳಲ್ಲಿ ವಿದ್ಯಾಗಮ ಯೋಜನೆಯ ಮುಖಾಂತರ ವಿದ್ಯಾರ್ಥಿಗಳಿಗೆ ಲಾಕ್​ಡೌನ್​ ವೇಳೆಯಲ್ಲಿ ಶಿಕ್ಷಣ ಒದಗಿಸುವ ಮಹತ್ತರ ನಿರ್ಧಾರ ಕೈಗೊಂಡಿದ್ದರು.

ಇದಲ್ಲದೆ ಬಾಲ ಕಾರ್ಮಿಕ, ಬಾಲ್ಯ ವಿವಾಹ ತಡೆಯಲು ಕ್ರಮಕ್ಕೆ ಸೂಚನೆ ನೀಡಿದ ಹೈಕೋರ್ಟ್ ವಿಚಾರಣೆಯನ್ನು ಜನವರಿ 18ಕ್ಕೆ ಮುಂದೂಡಿದೆ. ಸಂಜೀವ್ ನಾರಾಯಣ್ ಎಂಬುವವರು ಈ ಕುರಿತು PIL ಸಲ್ಲಿಸಿದ್ದರು.

Published On - 5:18 pm, Mon, 21 December 20

ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ