AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಆ್ಯಪ್ ಮೂಲಕ ಸಾಲ‌ ನೀಡಿ ಕಿರುಕುಳ‌; ಖಾತೆ ಜಪ್ತಿ ಪ್ರಶ್ನಿಸಿದ್ದ ಇಂಡಿಟ್ರೇಡ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಣ್ಣ ಮೊತ್ತದ ಸಾಲ ನೀಡಿ ಹೆಚ್ಚು ಬಡ್ಡಿ ವಸೂಲಿ ಮಾಡುತ್ತಿರುವ ಆರೋಪ ಇಂಡಿಟ್ರೇಡ್ ಫಿನ್​​ಕಾರ್ಪ್ ಮೇಲಿದೆ. ಜತೆಗೆ, ಸಾಲಗಾರರಿಗೆ ಕಿರುಕುಳ‌ ನೀಡುತ್ತಿದ್ದುದು, ಚೀನಾ ನಂಟಿನ ಆರೋಪವನ್ನೂ ಎದುರಿಸುತ್ತಿದೆ. ಈ ವಿಚಾರವಾಗಿ ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಕಂಪನಿಯ ಬ್ಯಾಂಕ್ ಖಾತೆಯನ್ನು ಜಪ್ತಿ ಮಾಡಿತ್ತು.

ಚೀನಾ ಆ್ಯಪ್ ಮೂಲಕ ಸಾಲ‌ ನೀಡಿ ಕಿರುಕುಳ‌; ಖಾತೆ ಜಪ್ತಿ ಪ್ರಶ್ನಿಸಿದ್ದ ಇಂಡಿಟ್ರೇಡ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
ಗಣಪತಿ ಶರ್ಮಾ
|

Updated on: Mar 01, 2023 | 10:26 PM

Share

ಬೆಂಗಳೂರು: ಚೀನಾ ಆ್ಯಪ್ (China App) ಮೂಲಕ ಸಾಲ‌ ನೀಡಿ ಕಿರುಕುಳ‌ ನೀಡಿದ ಆರೋಪ ಎದುರಿಸುತ್ತಿರುವ ಮೆ. ಇಂಡಿಟ್ರೇಡ್ ಫಿನ್​​ಕಾರ್ಪ್​ಗೆ (M/s Inditrade Fincorp Ltd) ಕರ್ನಾಟಕ ಹೈಕೋರ್ಟ್​​ನಲ್ಲಿ (Karnataka High Court) ಬುಧವಾರ ಭಾರೀ ಹಿನ್ನಡೆಯಾಗಿದೆ. ಜಾರಿ ನಿರ್ದೇಶನಾಲಯವು (ED) ಬ್ಯಾಂಕ್ ಖಾತೆ ಜಪ್ತಿ ಮಾಡಿರುವುದನ್ನು ಪ್ರಶ್ನಿಸಿ ಇಂಡಿಟ್ರೇಡ್ ಫಿನ್​​ಕಾರ್ಪ್ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ವಜಾಗೊಳಿಸಿದೆ. ಸಣ್ಣ ಮೊತ್ತದ ಸಾಲ ನೀಡಿ ಹೆಚ್ಚು ಬಡ್ಡಿ ವಸೂಲಿ ಮಾಡುತ್ತಿರುವ ಆರೋಪ ಇಂಡಿಟ್ರೇಡ್ ಫಿನ್​​ಕಾರ್ಪ್ ಮೇಲಿದೆ. ಜತೆಗೆ, ಸಾಲಗಾರರಿಗೆ ಕಿರುಕುಳ‌ ನೀಡುತ್ತಿದ್ದುದು, ಚೀನಾ ನಂಟಿನ ಆರೋಪವನ್ನೂ ಎದುರಿಸುತ್ತಿದೆ. ಈ ವಿಚಾರವಾಗಿ ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಕಂಪನಿಯ ಬ್ಯಾಂಕ್ ಖಾತೆಯನ್ನು ಜಪ್ತಿ ಮಾಡಿತ್ತು. ಇದನ್ನು ಪ್ರಶ್ನಿಸಿ ಕಂಪನಿ ಹೈಕೋರ್ಟ್ ಮೊರೆ ಹೋಗಿತ್ತು.

ದೇಶದಲ್ಲಿ ಅಸ್ಥಿರತೆ ಸೃಷ್ಟಿಸಲು ವಿದೇಶಿ ಕೈವಾಡದಿಂದ ಸಂಚು ಹೂಡಿರುವ ಆರೋಪವೂ ಕಂಪನಿ ಮೇಲಿದೆ. ರಾಷ್ಟ್ರದ ಆರ್ಥಿಕ ಭದ್ರತೆ,‌ ನಾಗರಿಕರ ಹಿತಾಸಕ್ತಿ ರಕ್ಷಿಸಬೇಕಿದೆ. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ತನಿಖೆ ಮುಂದುವರಿಯುವ ಅಗತ್ಯವಿದೆ ಎಂದ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ: Loan Apps: ಆ್ಯಪ್​ಗಳಿಂದ ಸಾಲ ಪಡೆಯುವ ಮುನ್ನ ಇರಲಿ ಎಚ್ಚರ, ಚೀನಿ ಆ್ಯಪ್​ಗಳಿಂದ ಆಗುವ ಮತ್ತೊಂದು ದೋಖಾ ಬಯಲು

ಈ ಹಿಂದೆ ದೇಶದ ಭದ್ರತೆಯ ದೃಷ್ಟಿಯಿದ ಟಿಕ್ ಟಾಕ್ ಸೇರಿದಂತೆ ಹಲವು ಚೀನೀ ಆ್ಯಪ್​ಗಳನ್ನು ನಿಷೇಧಿಸಿದ್ದ ಭಾರತ ಸರ್ಕಾರ ಇತ್ತೀಚೆಗಷ್ಟೇ ಚೀನಾ ಮೂಲದ 200ಕ್ಕೂ ಹೆಚ್ಚು ಲೋನ್ ಮತ್ತು ಬೆಟ್ಟಿಂಗ್ ಆ್ಯಪ್​ಗಳನ್ನು ನಿಷೇಧಿಸಲು ತುರ್ತು ಕ್ರಮ ಕೈಗೊಂಡಿತ್ತು. ಇದರಲ್ಲಿ 138 ಬೆಟ್ಟಿಂಗ್ ಆ್ಯಪ್​ಗಳು ಮತ್ತು 94 ಲೋನ್ ಆ್ಯಪ್​ಗಳು ಸೇರಿವೆ. ಈ ಆ್ಯಪ್​ಗಳನ್ನು ತಡೆಹಿಡಿಯಲು ಗೃಹ ಸಚಿವಾಲಯದಿಂದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯಕ್ಕೆ ಸೂಚನೆ ಹೋಗಿದ್ದು, ಕ್ರಮ ಜರುಗಿಸಲಾಗುತ್ತಿದೆ ಎಂದು ವರದಿಯೊಂದು ಫೆಬ್ರುವರಿ ಆರಂಭದಲ್ಲಿ ತಿಳಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!