AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಆ್ಯಪ್ ಮೂಲಕ ಸಾಲ‌ ನೀಡಿ ಕಿರುಕುಳ‌; ಖಾತೆ ಜಪ್ತಿ ಪ್ರಶ್ನಿಸಿದ್ದ ಇಂಡಿಟ್ರೇಡ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಣ್ಣ ಮೊತ್ತದ ಸಾಲ ನೀಡಿ ಹೆಚ್ಚು ಬಡ್ಡಿ ವಸೂಲಿ ಮಾಡುತ್ತಿರುವ ಆರೋಪ ಇಂಡಿಟ್ರೇಡ್ ಫಿನ್​​ಕಾರ್ಪ್ ಮೇಲಿದೆ. ಜತೆಗೆ, ಸಾಲಗಾರರಿಗೆ ಕಿರುಕುಳ‌ ನೀಡುತ್ತಿದ್ದುದು, ಚೀನಾ ನಂಟಿನ ಆರೋಪವನ್ನೂ ಎದುರಿಸುತ್ತಿದೆ. ಈ ವಿಚಾರವಾಗಿ ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಕಂಪನಿಯ ಬ್ಯಾಂಕ್ ಖಾತೆಯನ್ನು ಜಪ್ತಿ ಮಾಡಿತ್ತು.

ಚೀನಾ ಆ್ಯಪ್ ಮೂಲಕ ಸಾಲ‌ ನೀಡಿ ಕಿರುಕುಳ‌; ಖಾತೆ ಜಪ್ತಿ ಪ್ರಶ್ನಿಸಿದ್ದ ಇಂಡಿಟ್ರೇಡ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Ganapathi Sharma
|

Updated on: Mar 01, 2023 | 10:26 PM

Share

ಬೆಂಗಳೂರು: ಚೀನಾ ಆ್ಯಪ್ (China App) ಮೂಲಕ ಸಾಲ‌ ನೀಡಿ ಕಿರುಕುಳ‌ ನೀಡಿದ ಆರೋಪ ಎದುರಿಸುತ್ತಿರುವ ಮೆ. ಇಂಡಿಟ್ರೇಡ್ ಫಿನ್​​ಕಾರ್ಪ್​ಗೆ (M/s Inditrade Fincorp Ltd) ಕರ್ನಾಟಕ ಹೈಕೋರ್ಟ್​​ನಲ್ಲಿ (Karnataka High Court) ಬುಧವಾರ ಭಾರೀ ಹಿನ್ನಡೆಯಾಗಿದೆ. ಜಾರಿ ನಿರ್ದೇಶನಾಲಯವು (ED) ಬ್ಯಾಂಕ್ ಖಾತೆ ಜಪ್ತಿ ಮಾಡಿರುವುದನ್ನು ಪ್ರಶ್ನಿಸಿ ಇಂಡಿಟ್ರೇಡ್ ಫಿನ್​​ಕಾರ್ಪ್ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ವಜಾಗೊಳಿಸಿದೆ. ಸಣ್ಣ ಮೊತ್ತದ ಸಾಲ ನೀಡಿ ಹೆಚ್ಚು ಬಡ್ಡಿ ವಸೂಲಿ ಮಾಡುತ್ತಿರುವ ಆರೋಪ ಇಂಡಿಟ್ರೇಡ್ ಫಿನ್​​ಕಾರ್ಪ್ ಮೇಲಿದೆ. ಜತೆಗೆ, ಸಾಲಗಾರರಿಗೆ ಕಿರುಕುಳ‌ ನೀಡುತ್ತಿದ್ದುದು, ಚೀನಾ ನಂಟಿನ ಆರೋಪವನ್ನೂ ಎದುರಿಸುತ್ತಿದೆ. ಈ ವಿಚಾರವಾಗಿ ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಕಂಪನಿಯ ಬ್ಯಾಂಕ್ ಖಾತೆಯನ್ನು ಜಪ್ತಿ ಮಾಡಿತ್ತು. ಇದನ್ನು ಪ್ರಶ್ನಿಸಿ ಕಂಪನಿ ಹೈಕೋರ್ಟ್ ಮೊರೆ ಹೋಗಿತ್ತು.

ದೇಶದಲ್ಲಿ ಅಸ್ಥಿರತೆ ಸೃಷ್ಟಿಸಲು ವಿದೇಶಿ ಕೈವಾಡದಿಂದ ಸಂಚು ಹೂಡಿರುವ ಆರೋಪವೂ ಕಂಪನಿ ಮೇಲಿದೆ. ರಾಷ್ಟ್ರದ ಆರ್ಥಿಕ ಭದ್ರತೆ,‌ ನಾಗರಿಕರ ಹಿತಾಸಕ್ತಿ ರಕ್ಷಿಸಬೇಕಿದೆ. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ತನಿಖೆ ಮುಂದುವರಿಯುವ ಅಗತ್ಯವಿದೆ ಎಂದ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ: Loan Apps: ಆ್ಯಪ್​ಗಳಿಂದ ಸಾಲ ಪಡೆಯುವ ಮುನ್ನ ಇರಲಿ ಎಚ್ಚರ, ಚೀನಿ ಆ್ಯಪ್​ಗಳಿಂದ ಆಗುವ ಮತ್ತೊಂದು ದೋಖಾ ಬಯಲು

ಈ ಹಿಂದೆ ದೇಶದ ಭದ್ರತೆಯ ದೃಷ್ಟಿಯಿದ ಟಿಕ್ ಟಾಕ್ ಸೇರಿದಂತೆ ಹಲವು ಚೀನೀ ಆ್ಯಪ್​ಗಳನ್ನು ನಿಷೇಧಿಸಿದ್ದ ಭಾರತ ಸರ್ಕಾರ ಇತ್ತೀಚೆಗಷ್ಟೇ ಚೀನಾ ಮೂಲದ 200ಕ್ಕೂ ಹೆಚ್ಚು ಲೋನ್ ಮತ್ತು ಬೆಟ್ಟಿಂಗ್ ಆ್ಯಪ್​ಗಳನ್ನು ನಿಷೇಧಿಸಲು ತುರ್ತು ಕ್ರಮ ಕೈಗೊಂಡಿತ್ತು. ಇದರಲ್ಲಿ 138 ಬೆಟ್ಟಿಂಗ್ ಆ್ಯಪ್​ಗಳು ಮತ್ತು 94 ಲೋನ್ ಆ್ಯಪ್​ಗಳು ಸೇರಿವೆ. ಈ ಆ್ಯಪ್​ಗಳನ್ನು ತಡೆಹಿಡಿಯಲು ಗೃಹ ಸಚಿವಾಲಯದಿಂದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯಕ್ಕೆ ಸೂಚನೆ ಹೋಗಿದ್ದು, ಕ್ರಮ ಜರುಗಿಸಲಾಗುತ್ತಿದೆ ಎಂದು ವರದಿಯೊಂದು ಫೆಬ್ರುವರಿ ಆರಂಭದಲ್ಲಿ ತಿಳಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ