AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಆ್ಯಪ್ ಮೂಲಕ ಸಾಲ‌ ನೀಡಿ ಕಿರುಕುಳ‌; ಖಾತೆ ಜಪ್ತಿ ಪ್ರಶ್ನಿಸಿದ್ದ ಇಂಡಿಟ್ರೇಡ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಣ್ಣ ಮೊತ್ತದ ಸಾಲ ನೀಡಿ ಹೆಚ್ಚು ಬಡ್ಡಿ ವಸೂಲಿ ಮಾಡುತ್ತಿರುವ ಆರೋಪ ಇಂಡಿಟ್ರೇಡ್ ಫಿನ್​​ಕಾರ್ಪ್ ಮೇಲಿದೆ. ಜತೆಗೆ, ಸಾಲಗಾರರಿಗೆ ಕಿರುಕುಳ‌ ನೀಡುತ್ತಿದ್ದುದು, ಚೀನಾ ನಂಟಿನ ಆರೋಪವನ್ನೂ ಎದುರಿಸುತ್ತಿದೆ. ಈ ವಿಚಾರವಾಗಿ ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಕಂಪನಿಯ ಬ್ಯಾಂಕ್ ಖಾತೆಯನ್ನು ಜಪ್ತಿ ಮಾಡಿತ್ತು.

ಚೀನಾ ಆ್ಯಪ್ ಮೂಲಕ ಸಾಲ‌ ನೀಡಿ ಕಿರುಕುಳ‌; ಖಾತೆ ಜಪ್ತಿ ಪ್ರಶ್ನಿಸಿದ್ದ ಇಂಡಿಟ್ರೇಡ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
ಗಣಪತಿ ಶರ್ಮಾ
|

Updated on: Mar 01, 2023 | 10:26 PM

Share

ಬೆಂಗಳೂರು: ಚೀನಾ ಆ್ಯಪ್ (China App) ಮೂಲಕ ಸಾಲ‌ ನೀಡಿ ಕಿರುಕುಳ‌ ನೀಡಿದ ಆರೋಪ ಎದುರಿಸುತ್ತಿರುವ ಮೆ. ಇಂಡಿಟ್ರೇಡ್ ಫಿನ್​​ಕಾರ್ಪ್​ಗೆ (M/s Inditrade Fincorp Ltd) ಕರ್ನಾಟಕ ಹೈಕೋರ್ಟ್​​ನಲ್ಲಿ (Karnataka High Court) ಬುಧವಾರ ಭಾರೀ ಹಿನ್ನಡೆಯಾಗಿದೆ. ಜಾರಿ ನಿರ್ದೇಶನಾಲಯವು (ED) ಬ್ಯಾಂಕ್ ಖಾತೆ ಜಪ್ತಿ ಮಾಡಿರುವುದನ್ನು ಪ್ರಶ್ನಿಸಿ ಇಂಡಿಟ್ರೇಡ್ ಫಿನ್​​ಕಾರ್ಪ್ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ವಜಾಗೊಳಿಸಿದೆ. ಸಣ್ಣ ಮೊತ್ತದ ಸಾಲ ನೀಡಿ ಹೆಚ್ಚು ಬಡ್ಡಿ ವಸೂಲಿ ಮಾಡುತ್ತಿರುವ ಆರೋಪ ಇಂಡಿಟ್ರೇಡ್ ಫಿನ್​​ಕಾರ್ಪ್ ಮೇಲಿದೆ. ಜತೆಗೆ, ಸಾಲಗಾರರಿಗೆ ಕಿರುಕುಳ‌ ನೀಡುತ್ತಿದ್ದುದು, ಚೀನಾ ನಂಟಿನ ಆರೋಪವನ್ನೂ ಎದುರಿಸುತ್ತಿದೆ. ಈ ವಿಚಾರವಾಗಿ ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಕಂಪನಿಯ ಬ್ಯಾಂಕ್ ಖಾತೆಯನ್ನು ಜಪ್ತಿ ಮಾಡಿತ್ತು. ಇದನ್ನು ಪ್ರಶ್ನಿಸಿ ಕಂಪನಿ ಹೈಕೋರ್ಟ್ ಮೊರೆ ಹೋಗಿತ್ತು.

ದೇಶದಲ್ಲಿ ಅಸ್ಥಿರತೆ ಸೃಷ್ಟಿಸಲು ವಿದೇಶಿ ಕೈವಾಡದಿಂದ ಸಂಚು ಹೂಡಿರುವ ಆರೋಪವೂ ಕಂಪನಿ ಮೇಲಿದೆ. ರಾಷ್ಟ್ರದ ಆರ್ಥಿಕ ಭದ್ರತೆ,‌ ನಾಗರಿಕರ ಹಿತಾಸಕ್ತಿ ರಕ್ಷಿಸಬೇಕಿದೆ. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ತನಿಖೆ ಮುಂದುವರಿಯುವ ಅಗತ್ಯವಿದೆ ಎಂದ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ: Loan Apps: ಆ್ಯಪ್​ಗಳಿಂದ ಸಾಲ ಪಡೆಯುವ ಮುನ್ನ ಇರಲಿ ಎಚ್ಚರ, ಚೀನಿ ಆ್ಯಪ್​ಗಳಿಂದ ಆಗುವ ಮತ್ತೊಂದು ದೋಖಾ ಬಯಲು

ಈ ಹಿಂದೆ ದೇಶದ ಭದ್ರತೆಯ ದೃಷ್ಟಿಯಿದ ಟಿಕ್ ಟಾಕ್ ಸೇರಿದಂತೆ ಹಲವು ಚೀನೀ ಆ್ಯಪ್​ಗಳನ್ನು ನಿಷೇಧಿಸಿದ್ದ ಭಾರತ ಸರ್ಕಾರ ಇತ್ತೀಚೆಗಷ್ಟೇ ಚೀನಾ ಮೂಲದ 200ಕ್ಕೂ ಹೆಚ್ಚು ಲೋನ್ ಮತ್ತು ಬೆಟ್ಟಿಂಗ್ ಆ್ಯಪ್​ಗಳನ್ನು ನಿಷೇಧಿಸಲು ತುರ್ತು ಕ್ರಮ ಕೈಗೊಂಡಿತ್ತು. ಇದರಲ್ಲಿ 138 ಬೆಟ್ಟಿಂಗ್ ಆ್ಯಪ್​ಗಳು ಮತ್ತು 94 ಲೋನ್ ಆ್ಯಪ್​ಗಳು ಸೇರಿವೆ. ಈ ಆ್ಯಪ್​ಗಳನ್ನು ತಡೆಹಿಡಿಯಲು ಗೃಹ ಸಚಿವಾಲಯದಿಂದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯಕ್ಕೆ ಸೂಚನೆ ಹೋಗಿದ್ದು, ಕ್ರಮ ಜರುಗಿಸಲಾಗುತ್ತಿದೆ ಎಂದು ವರದಿಯೊಂದು ಫೆಬ್ರುವರಿ ಆರಂಭದಲ್ಲಿ ತಿಳಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!