AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನೆಗಳಿಂದ ಜನಸಾಮಾನ್ಯರಿಗೆ ತೊಂದರೆ; ಸ್ವಯಂಪ್ರೇರಿತ PIL ದಾಖಲಿಸಿಕೊಂಡ ಹೈಕೋರ್ಟ್

ಪ್ರತಿಭಟನೆ, ಱಲಿಗಳಿಂದ ಸಂಚಾರ ದಟ್ಟಣೆ ಆಗುತ್ತಿರುವ ಹಿನ್ನೆಲೆಯಲ್ಲಿ ಜನರಿಗಾಗುತ್ತಿರುವ ತೊಂದರೆಗಳ ಬಗ್ಗೆ ನ್ಯಾಯಮೂರ್ತಿ ಅರವಿಂದ್ ಕುಮಾರ್ ಪತ್ರ ಬರೆದಿದ್ದರು. ಇದೀಗ, ನ್ಯಾಯಮೂರ್ತಿ ಅರವಿಂದ್ ಕುಮಾರ್ ಪತ್ರ ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ದಾಖಲು ಮಾಡಲಾಗಿದೆ.

ಪ್ರತಿಭಟನೆಗಳಿಂದ ಜನಸಾಮಾನ್ಯರಿಗೆ ತೊಂದರೆ; ಸ್ವಯಂಪ್ರೇರಿತ PIL ದಾಖಲಿಸಿಕೊಂಡ ಹೈಕೋರ್ಟ್
ಕರ್ನಾಟಕ ಹೈಕೋರ್ಟ್​
TV9 Web
| Edited By: |

Updated on:Apr 06, 2022 | 7:25 PM

Share

ಬೆಂಗಳೂರು: ಪ್ರತಿಭಟನೆಗಳಿಂದ ಜನಸಾಮಾನ್ಯರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ನ್ಯಾಯಮೂರ್ತಿ ಅರವಿಂದ್ ಕುಮಾರ್ ಬರೆದ ಪತ್ರವನ್ನು ಆಧರಿಸಿ, ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿರುವ ಹೈಕೋರ್ಟ್, ಎಲ್ಲಾ ರಾಜಕೀಯ ಪಕ್ಷಗಳಿಗೂ ನೋಟಿಸ್ ಜಾರಿಗೊಳಿಸಿದೆ. ಜತೆಗೆ, ಬೆಂಗಳೂರು ಪೊಲೀಸ್ ಆಯುಕ್ತರಿಗೂ ನೋಟಿಸ್ ನೀಡಿದೆ.

ಬೆಂಗಳೂರು ಅತ್ಯಂತ ವಾಸಯೋಗ್ಯ ನಗರ ಎಂಬ ವರದಿ ಪಡೆದುಕೊಂಡಿದೆ. ಆದರೆ ಇಂತಹ ನಗರದಲ್ಲಿ ಈ ಸ್ಥಿತಿ ಬರುವುದು ಸರಿಯಲ್ಲ. ಎಲ್ಲಾ ನಾಗರಿಕರಿಗೂ ಘನತೆಯಿಂದ ಜೀವಿಸುವ ಹಕ್ಕಿದೆ. ಪ್ರಜೆಗಳಿಗೆ ತೊಂದರೆ ಉಂಟುಮಾಡುವ ಅಧಿಕಾರ ಯಾರಿಗೂ ಇಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಒಕಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

ಪ್ರತಿಭಟನೆ, ರ‍್ಯಾಲಿಗಳಿಂದ ಸಂಚಾರ ದಟ್ಟಣೆ ಆಗುತ್ತಿರುವ ಹಿನ್ನೆಲೆಯಲ್ಲಿ ಜನರಿಗಾಗುತ್ತಿರುವ ತೊಂದರೆಗಳ ಬಗ್ಗೆ ನ್ಯಾಯಮೂರ್ತಿ ಅರವಿಂದ್ ಕುಮಾರ್ ಪತ್ರ ಬರೆದಿದ್ದರು. ಇದೀಗ, ನ್ಯಾಯಮೂರ್ತಿ ಅರವಿಂದ್ ಕುಮಾರ್ ಪತ್ರ ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ದಾಖಲು ಮಾಡಲಾಗಿದೆ.

ನಗರದಲ್ಲಿ ನಡೆದಿತ್ತು ಸಾಲುಸಾಲು ಪ್ರತಿಭಟನೆಗಳು ಬೆಂಗಳೂರು ನಗರದಲ್ಲಿ ಈಚೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದರು. ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಜನಾಂಗದ ಪ್ರತಿಭಟನೆಯೂ ಮುಂದುವರಿದಿದೆ. ರೈತ ಸಂಘಟನೆಗಳು ಮತ್ತು ಸಾರಿಗೆ ಸಿಬ್ಬಂದಿ ನಡೆಸಿದ್ದ ಹೋರಾಟಗಳೂ ಇನ್ನೂ ಜನಮಾನಸದಿಂದ ಮಾಸಿಲ್ಲ.

ಬೆಂಗಳೂರು ನಗರಕ್ಕೆ ಬಂದಿದ್ದ ಸುಮಾರು 25 ಸಾವಿರ ಅಂಗನವಾಡಿ ಕಾರ್ಯಕರ್ತೆಯರು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಶೇಷಾದ್ರಿ ರಸ್ತೆ ಮಾರ್ಗವಾಗಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ನಗರದ ಬಹುತೇಕ ಪ್ರತಿಭಟನೆಗಳು ಇದೇ ಮಾರ್ಗದಲ್ಲಿ ನಡೆಯುತ್ತವೆ ಎನ್ನುವುದು ಗಮನಾರ್ಹ ಸಂಗತಿ. ಪ್ರತಿಭಟನೆಗಳಿಂದ ಜನರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ವಿಚಾರಣೆ ನಡೆಸಲು ಹೈಕೋರ್ಟ್ ಮುಂದಾಗಿದೆ.

ಇದನ್ನೂ ಓದಿ: ಅವಹೇಳನಕಾರಿ ಟ್ವೀಟ್ ಪ್ರಕರಣ​: ಕಂಗನಾ ರಣಾವತ್​ಗೆ ಕರ್ನಾಟಕ ಹೈಕೋರ್ಟ್​ನಲ್ಲಿ ಹಿನ್ನಡೆ!

ಕೋರ್ಟ್ ಕೊಠಡಿಯಲ್ಲಿ ವಕೀಲರು ಮಾಸ್ಕ್ ತೆಗೆದಿದ್ದಕ್ಕೆ ಅಹವಾಲು ಆಲಿಸಲ್ಲ ಎಂದ ಬಾಂಬೆ ಹೈಕೋರ್ಟ್

Published On - 9:03 pm, Fri, 5 March 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?