AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ: ಸರ್ಕಾರದ ಪರ ಹೈಕೋರ್ಟ್ ತೀರ್ಪು

ಬೆಂಗಳೂರು ನಗರದ ಸುಪ್ರಸಿದ್ಧ ಗಾಳಿ ಆಂಜನೇಯಸ್ವಾಮಿ ದೇವಾಲಯ ಮುಜರಾಯಿ ಇಲಾಖೆ (Muzrai Department) ಸುಪರ್ದಿಗೆ ಬಂದಿದೆ. ದೇವಾಲಯದ ಆಡಳಿತವನ್ನು ಸರ್ಕಾರ ತನ್ನ ಅಧೀನಕ್ಕೆ ಪಡೆದಿದ್ದು, ರಾಜ್ಯ ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಇದರಿಂದ ಸರ್ಕಾರದ ಕ್ರಮ ಪ್ರಶ್ನಿಸಿ ಕೋರ್ಟ್​ ಮೆಟ್ಟಿಲೇರಿದ್ದ ದೇವಸ್ಥಾನ ಆಡಳಿತ ಮಂಡಳಿಗೆ ನಿರಾಸೆಯಾಗಿದೆ.

ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ: ಸರ್ಕಾರದ ಪರ ಹೈಕೋರ್ಟ್ ತೀರ್ಪು
Gali Anjaneya Swamy Temple
Ramesha M
| Updated By: ರಮೇಶ್ ಬಿ. ಜವಳಗೇರಾ|

Updated on:Jul 16, 2025 | 3:53 PM

Share

ಬೆಂಗಳೂರು, (ಜುಲೈ 16): ಅವ್ಯವಹಾರ ವಿಡಿಯೋ ಸಾಕ್ಷಿ ಮೂಲಕ ಸಾಬೀತಾದ ಬೆನ್ನಲ್ಲಿಯೇ ಬೆಂಗಳೂರಿನ ಐತಿಹಾಸಿಕ ಗಾಳಿ ಆಂಜನೇಯ ದೇವಸ್ಥಾನವನ್ನು (Bengaluru Gali Anjaneya Swamy temple) ಮುಜರಾಯಿ ಇಲಾಖೆ( muzrai department) ಸುಪರ್ದಿಗೆ ಪಡೆದುಕೊಂಡಿದೆ. ಆದ್ರೆ, ಇದನ್ನು ಪ್ರಶ್ನಿಸಿ ದೇಗುಲದ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (Karnataka High Court), ರಾಜ್ಯ ಸರ್ಕಾರದ ಈ ಕ್ರಮಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಗಾಳಿ ಆಂಜನೇಯ ದೇವಾಲಯದಲ್ಲಿ ಹಣ ದುರುಪಯೋಗದ ಆರೋಪವಿದೆ. ಹೀಗಾಗಿ ಸರ್ಕಾರದ ಕ್ರಮ ಮೇಲ್ನೋಟಕ್ಕೆ ತಪ್ಪೆನ್ನಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.

ಗಾಳಿ ಆಂಜನೇಯಸ್ವಾಮಿ ದೇವಾಲಯದ ಆಡಳಿತವನ್ನು ಸರ್ಕಾರ ತನ್ನ ಅಧೀನಕ್ಕೆ ಪಡೆದಿದ್ದು, ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಇನ್ಮುಂದೆ ದೇವಾಲಯದ ಉಸ್ತುವಾರಿಯ ನಡೆಸಿಕೊಂಡು ಹೋಗಲಿದೆ. ದೇವಾಲಯದ ಆಡಳಿತ ಮಂಡಳಿಗೆ ಬೇರೆ ದಾರಿ ಕಾಣದೇ ಸರ್ಕಾರದ ನಿರ್ಧಾರದ ವಿರುದ್ಧ ಕೋರ್ಟ್ ಮೊರೆಹೋಗಿತ್ತು. ಆದ್ರೆ, ಇದೀಗ ಕೋರ್ಟ್ ಸಹ ಸರ್ಕಾರದ ಕ್ರಮ ಸರಿ ಇದೆ ಎಂದು ತಡೆ ನೀಡಲು ನಿರಾಕರಿಸಿದೆ. ಇದರಿಂದ ದೇವಸ್ಥಾನದ ಟ್ರಸ್ಟ್​​ ಗೆ ನಿರಾಸೆಯಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಗಾಳಿ ಆಂಜನೇಯಸ್ವಾಮಿ ದೇವಸ್ಥಾನ ಮುಜರಾಯಿ ಸುಪರ್ದಿಗೆ

ಕಳೆದ ವರ್ಷ ದೇವಸ್ಥಾನದ ಹುಂಡಿ ಹಣ ಎಣಿಸುವಾಗಲೇ ಆಡಳಿತ ಮಂಡಳಿಯ ಸದಸ್ಯರು ಹಣ ಎಗರಿಸಿದ್ದರು. ಹಣ ಎಗರಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಘಟನೆಯ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸೂಚನೆ ನೀಡಿತ್ತು. ವರದಿಯಲ್ಲಿ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ವರ್ಗಾವಣೆಗೆ ಶಿಫಾರಸ್ಸು ಮಾಡಲಾಗಿತ್ತು. ಇದನ್ನು ಒಪ್ಪಿದ ಸರ್ಕಾರ 1997ರ 42 ಮತ್ತು 43ರನ್ವಯ ಘೋಷಿತ ಸಂಸ್ಥೆ ಎಂದು ಘೋಷಣೆ ಮಾಡಿತ್ತು.

ಸರ್ಕಾರದ ಆದೇಶದಲ್ಲಿ ಏನಿದೆ?

“ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಬ್ಯಾಟರಾಯನಪುರದಲ್ಲಿರುವ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಅವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸುತ್ತಿರುವುದು ಮತ್ತು ಹಣ ದುರುಪಯೋಗಪಡಿಸಿಕೊಂಡಿರುವುದು, ಟ್ರಸ್ಟ್​ ನಿರ್ವಹಣೆಯಲ್ಲಿ ಪಾರದರ್ಶಕತೆ ಇಲ್ಲದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ, ಪ್ರಸ್ತಾಪಿತ ದೇವಾಲಯವನ್ನು ‘ಕರ್ನಾಟಕ ಹಿಂದೂ ಧಾರ್ಮಿಕ ಸಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997ರ ಕಲಂ ಸೆಕ್ಷನ್ 42 ಮತ್ತು 43ರನ್ವಯ “ಘೋಷಿತ ಸಂಸ್ಥೆ” ಎಂದು ಘೋಷಿಸಲಾಗಿದೆ” ಎಂದು ಆದೇಶ ಹೊರಡಿಸಲಾಗಿದೆ.

ಈಗಾಗಲೇ ಧಾರ್ಮಿಕ ದತ್ತಿ ಇಲಾಖೆ ದೇವಾಲಯದ ನಿರ್ವಹಣೆಗೆ ಕಾರ್ಯಪಾಲಕ ಅಧಿಕಾರಿಯನ್ನು ನೇಮಕ ಮಾಡಿದೆ. ಇಓ ನಾರಾಯಣಸ್ವಾಮಿ ಅಧಿಕಾರ ವಹಿಸಿಕೊಂಡು ದೇವಾಲಯದ ಅಧಿಕಾರ ಪಡೆದುಕೊಂಡಿದ್ದಾರೆ. ಸರ್ಕಾರದ ಈ ನಿರ್ಧಾರವನ್ನು ದೇವಾಲಯದ ಆಡಳಿತ ಮಂಡಳಿ ಖಂಡಿಸಿದೆ. ನಮ್ಮ ಪೂರ್ವಿಕರಿಂದ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯತ್ವ ದೊರತಿದ್ದು, ಇಷ್ಟು ವರ್ಷ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರಮಿಸಿದ ನಮಗೆ ಅನ್ಯಾಯವಾಗಿದೆ ಎಂದು ಗ್ರಾಮಸ್ಥರು ಮತ್ತು ಟ್ರಸ್ಟಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:19 pm, Wed, 16 July 25