AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಡಿಯಲು ಸಮರ್ಥ ಪತಿ ಪತ್ನಿಯಿಂದ‌ ಜೀವನಾಂಶ ಕೇಳುವಂತಿಲ್ಲ, ಸೋಮಾರಿ ಪತಿಗೆ ಹೈಕೋರ್ಟ್ ತಪರಾಕಿ

ಪತ್ನಿ ಅನುಮತಿ ಕೇಳದೇ ತನ್ನ ಸಹೋದರಿಯ ಮಗಳ ಹುಟ್ಟುಹಬ್ಬಕ್ಕೆ ಹೋಗಿದ್ದಾಳೆಂದು ಜಗಳ ಮಾಡಿ ಪತಿರಾಯ ವಿಚ್ಚೇದನ ಅರ್ಜಿ ಸಲ್ಲಿಸಿದ್ದಾನೆ. ಅಲ್ಲದೇ ಪತ್ನಿಯಿಂದಲೇ ಜೀವನಾಂಶ ಕೇಳಿ ಕೋರ್ಟ್​ನಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ.

ದುಡಿಯಲು ಸಮರ್ಥ ಪತಿ ಪತ್ನಿಯಿಂದ‌ ಜೀವನಾಂಶ ಕೇಳುವಂತಿಲ್ಲ, ಸೋಮಾರಿ ಪತಿಗೆ ಹೈಕೋರ್ಟ್ ತಪರಾಕಿ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:Jan 24, 2023 | 3:48 PM

Share

ಬೆಂಗಳೂರು: ದೈಹಿಕನಾಗಿ ಸಮರ್ಥನಿರುವ ಪತಿ(Husband) ಪತ್ನಿಯಿಂದ ಜೀವನಾಂಶ( sustenance) ಕೇಳುವಂತಿಲ್ಲವೆಂದು ಕರ್ನಾಟಕ ಹೈಕೋರ್ಟ್ (Karnataka High Court) ಮಹತ್ವದ ಆದೇಶ ನೀಡಿದೆ. ಹೀಗೆ ಪತ್ನಿಯಿಂದ ಜೀವನಾಂಶ ಕೇಳುವುದು ಸೋಮಾರಿತನಕ್ಕೆ ಕಾರಣವಾಗಬಹುದೆಂದು ಹೈಕೋರ್ಟ್ ಏಕಸದಸ್ಯ ಪೀಠ ಅಭಿಪ್ರಾಯಪಟ್ಟಿದೆ. 2017 ರಲ್ಲಿ ಪತ್ನಿಯೊಬ್ಬಳು(Wife) ತನ್ನ ಗಂಡನ ಅನುಮತಿ ಪಡೆಯದೇ ಆಕೆಯ ಸಹೋದರಿ ಮಗುವಿನ ಹುಟ್ಟುಹಬ್ಬಕ್ಕೆ ಹೋಗಿದ್ದಕ್ಕೆ ಉಂಟಾದ ಕಲಹ ವಿಚ್ಚೇದನ ತನಕ ಹೋಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿಯಿಂದಲೇ ಜೀವನಾಂಶ ಕೇಳಿದ್ದ ಪತಿಗೆ ಹೈಕೋರ್ಟ್ ತಪರಾಕಿ ನೀಡಿದೆ.

ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯನ್ನೇ ಮದ್ವೆಯಾದ ಆರೋಪಿ, ಕೇಸ್ ರದ್ದುಗೊಳಸಿದ ಹೈಕೋರ್ಟ್

2017 ರಲ್ಲಿ ವಿವಾಹವಾದ ದಂಪತಿ ನಡುವೆ ಹೊಂದಾಣಿಕೆಯ ಕೊರತೆಯಿಂದಾಗಿ ಪತ್ನಿ ಪತಿಯ ಮನೆ ತೊರೆದು ತವರು ಮನೆ ಸೇರಿದ್ದಳು. ಪತಿಯ ಅನುಮತಿ ಪಡೆಯದೇ ಆತನ ಸೋದರಿ ಮಗುವಿನ ಹುಟ್ಟುಹಬ್ಬಕ್ಕೆ ಹೋಗಿದ್ದೇ ದಾಂಪತ್ಯದಲ್ಲಿ ಕಲಹಕ್ಕೆ ಕಾರಣವಾಗಿತ್ತು. ತವರು ಮನೆಗೋ ಹೋದ ಪತ್ನಿಯಿಂದ ವಿಚ್ಚೇದನ ಕೋರಿ ಪತಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ವಿಚ್ಚೇದನದ ಅರ್ಜಿ ವಿಚಾರಣೆ ವೇಳೆ ಪತ್ನಿ ತನಗೆ ಪತಿಯಿಂದ 25 ಸಾವಿರ ಜೀವನಾಂಶ ಹಾಗೂ ಕೇಸ್ ವೆಚ್ಚ ಕೊಡಿಸುವಂತೆ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಳು. ಇದಕ್ಕೆ ತಕರಾರು ತೆಗೆದ ಪತಿ ಕೋವಿಡ್ ನಿಂದಾಗಿ ಕಳೆದ 2 ವರ್ಷಗಳಿಂದ ತಾನು ನಿರುದ್ಯೋಗಿಯಾಗಿದ್ದೇನೆ/ ತನಗೇ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಪತ್ನಿಯ ತವರುಮನೆ ಕಡೆಯವರು ಆರ್ಥಿಕವಾಗಿ ಸಬಲರಾಗಿದ್ದಾರೆ. ಹೀಗಾಗಿ ಪತ್ನಿಯಿಂದಲೇ ತನಗೆ 2 ಲಕ್ಷ ಜೀವನಾಂಶ ಕೊಡಿಸುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ.

ಕೌಟುಂಬಿಕ ನ್ಯಾಯಲಯ ಪತಿಯ ಅರ್ಜಿಯನ್ನು ತಿರಸ್ಕರಿಸಿ, ಪತ್ನಿಗೆ ಮಾಸಿಕ 10 ಸಾವಿರ ಜೀವನಾಂಶ ನೀಡುವಂತೆ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಪತಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಪತಿಯ ಅರ್ಜಿಯನ್ನು ತಿರಸ್ಕರಿಸಿದೆ. ಹಿಂದೂ ವಿವಾಹ ಕಾಯ್ದೆ ಸೆಕ್ಷನ್ 24 ರಡಿ ಆದಾಯವಿಲ್ಲದ ಪತಿಯಾಗಲೀ ಅಥವಾ ಪತ್ನಿಯಾಗಲೀ ತನ್ನ ಸಂಗಾತಿಯಿಂದ ಜೀವನಾಂಶ ಕೋರಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಆದರೆ ಪತ್ನಿ ಜೀವನಾಂಶ ನಿರಾಕರಿಸುವ ಉದ್ದೇಶದಿಂದ ಪತಿ ಈ ಉಪಾಯ ಮಾಡಿದ್ದಾನೆ. ದೈಹಿಕವಾಗಿ ಸಮರ್ಥನಾಗಿರುವ ಪತಿ ಉದ್ಯೋಗವಿಲ್ಲವೆಂದು ಪತ್ನಿಯಿಂದ ಜೀವನಾಂಶ ಕೇಳಿದರೆ ಅದು ಸೋಮಾರಿತನಕ್ಕೆ ಉತ್ತೇಜನ ನೀಡಿದಂತೆ ಎಂದು ಹೈಕೋರ್ಟ್ ತಿಳಿಸಿದೆ.

ನಿರುದ್ಯೋಗದ ನೆಪವೊಡ್ಡಿ ಪತ್ನಿ ನೀಡುವ ಜೀವನಾಂಶದಿಂದ ಆರಾಮವಾಗಿ ಕಾಲ ಕಳೆಯಲು ಪತಿ ಬಯಸಿದಂತಿದೆ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅಭಿಪ್ರಾಯಪಟ್ಟಿದ್ದಾರೆ. ದೈಹಿಕವಾಗಿ, ಮಾನಸಿಕವಾಗಿ ಅಸಮರ್ಥನೆಂದು ಸಾಬೀತುಪಡಿಸದ ಹೊರತು ಪತ್ನಿಯಿಂದ ಪತಿ ಜೀವನಾಂಶ ಪಡೆಯಲಾಗದೆಂದೂ ಹೈಕೋರ್ಟ್ ಸ್ಪಷ್ಟಪಡಿಸಿದೆ. ನೈತಿಕ ದಾರಿಯಲ್ಲಿ ಹಣ ಸಂಪಾದಿಸಿ, ಪತ್ನಿ ಮಕ್ಕಳನ್ನು ಸಾಕುವುದು ಪತಿಯ ಕರ್ತವ್ಯ. ಬಳಸದೇ ತುಕ್ಕು ಹಿಡಿಯುವುದಕ್ಕಿಂತ, ಸವೆಸುವುದು ಉತ್ತಮ ಎಂಬ ಮಾತನ್ನು ಪತಿಗೆ ನೆನಪಿಸಿದ ಹೈಕೋರ್ಟ್ ಜೀವನಾಂಶ ಕೋರಿದ್ದ ಆತನ ಅರ್ಜಿಯನ್ನು ವಜಾಗೊಳಿಸಿದೆ.

ವರದಿ: ರಮೇಶ್ ಮಹದೇವ್ TV9 ಬೆಂಗಳೂರು

Published On - 3:11 pm, Tue, 24 January 23

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ