Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದ ಶಿಯೋಮಿಗೆ ಭಾರೀ ಹಿನ್ನಡೆ; 5551 ಕೋಟಿ ರೂ. ಜಪ್ತಿ ಆದೇಶ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್​​

ಅಕ್ರಮವಾಗಿ ರಾಯಧನ ರೂಪದಲ್ಲಿ ವಿದೇಶಿ ಕಂಪನಿಗಳಿಗೆ ಹಣ ವರ್ಗಾವಣೆ ಮಾಡಿದ್ದ ಆರೋಪದಲ್ಲಿ ಚೀನಾ ಮೂಲದ ಶಿಯೋಮಿಯ ಭಾರತದ ಅಂಗ ಸಂಸ್ಥೆಯ 5,551 ಕೋಟಿ ರೂ.ಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿರುವುದನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ.

ಚೀನಾದ ಶಿಯೋಮಿಗೆ ಭಾರೀ ಹಿನ್ನಡೆ; 5551 ಕೋಟಿ ರೂ. ಜಪ್ತಿ ಆದೇಶ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್​​
ಶಿಯೋಮಿImage Credit source: Reuters
Follow us
Ganapathi Sharma
|

Updated on: Apr 22, 2023 | 11:33 AM

ಬೆಂಗಳೂರು: ಅಕ್ರಮವಾಗಿ ರಾಯಧನ ರೂಪದಲ್ಲಿ ವಿದೇಶಿ ಕಂಪನಿಗಳಿಗೆ ಹಣ ವರ್ಗಾವಣೆ ಮಾಡಿದ್ದ ಆರೋಪದಲ್ಲಿ ಚೀನಾ ಮೂಲದ ಶಿಯೋಮಿಯ ಭಾರತದ ಅಂಗ ಸಂಸ್ಥೆಯ 5,551 ಕೋಟಿ ರೂ.ಗಳನ್ನು ಜಾರಿ ನಿರ್ದೇಶನಾಲಯ (Enforcement Directorate) ಮುಟ್ಟುಗೋಲು ಹಾಕಿಕೊಂಡಿರುವುದನ್ನು ಕರ್ನಾಟಕ ಹೈಕೋರ್ಟ್ (Karnataka High Court) ಎತ್ತಿಹಿಡಿದಿದೆ. ಜಪ್ತಿ ಪ್ರಶ್ನಿಸಿ ಶಿಯೋಮಿ (Xiaomi India) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ತಿರಸ್ಕರಿಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘಿಸಿ ರಾಯಧನ ರೂಪದಲ್ಲಿ ವಿದೇಶಿ ಕಂಪನಿಗಳಿಗೆ ಹಣ ವರ್ಗಾವಣೆ ಮಾಡಿದ ಆರೋಪ ಶಿಯೋಮಿ ಮೇಲಿದೆ.

ದೇಶದ ಕಂಪನಿಗಳು ವಿದೇಶಗಳಿಗೆ ಹಣ ವರ್ಗಾವಣೆ ಮಾಡುವ ಸಂದರ್ಭದಲ್ಲಿ ಫೆಮಾ ಕಾಯ್ದೆಯ ಸೆಕ್ಷನ್ 37ಎ ಪ್ರಕಾರ ಹಣ ವಶಪಡಿಸಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಯಾವುದೇ ನಿರ್ಬಂಧ ಇಲ್ಲ ಎಂದು ನ್ಯಾಯಪೀಠ ತಿಳಿಸಿದೆ. ಜತೆಗೆ, ಸದ್ಯ ನೀಡಿರುವ ಆದೇಶವನ್ನು ಮೇಲ್ಮನವಿ ಪ್ರಾಧಿಕಾರದಲ್ಲಿ ಮತ್ತೊಮ್ಮೆ ಪ್ರಶ್ನಿಸಲು ಶಿಯೋಮಿಗೆ ಅವಕಾಶ ಕಲ್ಪಿಸಿದೆ.

5,551 ಕೋಟಿ ರೂಪಾಯಿ ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣದಲ್ಲಿ ಶೇ 84 ಮೊತ್ತವನ್ನು ಪೇಟೆಂಟ್ ತಂತ್ರಜ್ಞಾನದ ಬಳಕೆಗಾಗಿ ಅಮೆರಿಕದ ಮೊಬೈಲ್ ತಂತ್ರಜ್ಞಾನ ಸಂಸ್ಥೆ ಕ್ವಾಲ್ಕಾಮ್ ಇಂಕ್‌ ಟೆಕ್ ಸಂಸ್ಥೆಗೆ ಪಾವತಿ ಮಾಡಿದ್ದೇವೆ ಎಂದು ಶಿಯೋಮಿ ಇಂಡಿಯಾ ಕರ್ನಾಟಕ ಹೈಕೋರ್ಟ್​​​ಗೆ ತಿಳಿಸಿತ್ತು. ಹೀಗೆ ಮೂರು ವಿದೇಶಿ ಕಂಪನಿಗಳಿಗೆ ಪಾವತಿಸಿರುವ ತಂತ್ರಜ್ಞಾನದ ರಾಯಧನವು (ರಾಯಲ್ಟಿ) ಫೆಮಾ ಕಾನೂನಿಗೆ ವಿರುದ್ಧವಾಗಿಲ್ಲ ಎಂದೂ ಶಿಯೋಮಿ ಇಂಡಿಯಾ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿತ್ತು.

ಇದನ್ನೂ ಓದಿ: ಚೀನಾದ ಶಿಯೋಮಿ ಸಂಸ್ಥೆಯ 5500 ಕೋಟಿ ರೂ ಜಪ್ತಿ ವಿರುದ್ಧ ಸಂಸ್ಥೆ ಆಕ್ಷೇಪ, ರಿಟ್ ಅರ್ಜಿ ವಿಚಾರಣೆ

ಈ ಮಧ್ಯೆ, ಶಿಯೋಮಿ ಟೆಕ್ನಾಲಜಿ ಇಂಡಿಯಾದ ಸ್ಥಿರ ಠೇವಣಿಗಳಿಂದ 3,700 ಕೋಟಿ ರೂ. ವಶಕ್ಕೆ ಪಡೆಯುವ ಆದಾಯ ತೆರಿಗೆ ಇಲಾಖೆ ಆದೇಶವನ್ನು 2022ರ ಡಿಸೆಂಬರ್​​ನಲ್ಲಿ ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಆದರೆ, ಭಾರತದಿಂದ ಹೊರಗಡೆ ಇರುವ ಕಂಪನಿಗಳಲ್ಲಿ ಅಥವಾ ಸಂಸ್ಥೆಗಳಲ್ಲಿ ರಾಯಧನ ಹಾಗೂ ಇನ್ಯಾವುದೇ ರೂಪದಲ್ಲಿ ಸ್ಥಿರ ಠೇವಣಿ ಇಡುವಂತಿಲ್ಲ ಎಂದು ಮೊದಲ ಷರತ್ತನ್ನು ಕೋರ್ಟ್ ವಿಧಿಸಿತ್ತು. ಚೀನಾ ಮೂಲದ ಕಂಪನಿಯು ರಾಯಲ್ಟಿ ಹೆಸರಿನಲ್ಲಿ ಹೊರ ದೇಶಗಳಿಗೆ ಹಣ ಕಳುಹಿಸುತ್ತಿದೆ. ಆ ಮೂಲಕ ತೆರಿಗೆ ವಂಚಿಸುತ್ತಿದೆ ಎಂದು ಆಪಾದಿಸಿದ್ದ ಆದಾಯ ತೆರಿಗೆ ಇಲಾಖೆ ಶಿಯೋಮಿ ವಿರುದ್ಧ ಆದೇಶ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ