ಚೀನಾದ ಶಿಯೋಮಿಗೆ ಭಾರೀ ಹಿನ್ನಡೆ; 5551 ಕೋಟಿ ರೂ. ಜಪ್ತಿ ಆದೇಶ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್​​

ಅಕ್ರಮವಾಗಿ ರಾಯಧನ ರೂಪದಲ್ಲಿ ವಿದೇಶಿ ಕಂಪನಿಗಳಿಗೆ ಹಣ ವರ್ಗಾವಣೆ ಮಾಡಿದ್ದ ಆರೋಪದಲ್ಲಿ ಚೀನಾ ಮೂಲದ ಶಿಯೋಮಿಯ ಭಾರತದ ಅಂಗ ಸಂಸ್ಥೆಯ 5,551 ಕೋಟಿ ರೂ.ಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿರುವುದನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ.

ಚೀನಾದ ಶಿಯೋಮಿಗೆ ಭಾರೀ ಹಿನ್ನಡೆ; 5551 ಕೋಟಿ ರೂ. ಜಪ್ತಿ ಆದೇಶ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್​​
ಶಿಯೋಮಿImage Credit source: Reuters
Follow us
|

Updated on: Apr 22, 2023 | 11:33 AM

ಬೆಂಗಳೂರು: ಅಕ್ರಮವಾಗಿ ರಾಯಧನ ರೂಪದಲ್ಲಿ ವಿದೇಶಿ ಕಂಪನಿಗಳಿಗೆ ಹಣ ವರ್ಗಾವಣೆ ಮಾಡಿದ್ದ ಆರೋಪದಲ್ಲಿ ಚೀನಾ ಮೂಲದ ಶಿಯೋಮಿಯ ಭಾರತದ ಅಂಗ ಸಂಸ್ಥೆಯ 5,551 ಕೋಟಿ ರೂ.ಗಳನ್ನು ಜಾರಿ ನಿರ್ದೇಶನಾಲಯ (Enforcement Directorate) ಮುಟ್ಟುಗೋಲು ಹಾಕಿಕೊಂಡಿರುವುದನ್ನು ಕರ್ನಾಟಕ ಹೈಕೋರ್ಟ್ (Karnataka High Court) ಎತ್ತಿಹಿಡಿದಿದೆ. ಜಪ್ತಿ ಪ್ರಶ್ನಿಸಿ ಶಿಯೋಮಿ (Xiaomi India) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ತಿರಸ್ಕರಿಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘಿಸಿ ರಾಯಧನ ರೂಪದಲ್ಲಿ ವಿದೇಶಿ ಕಂಪನಿಗಳಿಗೆ ಹಣ ವರ್ಗಾವಣೆ ಮಾಡಿದ ಆರೋಪ ಶಿಯೋಮಿ ಮೇಲಿದೆ.

ದೇಶದ ಕಂಪನಿಗಳು ವಿದೇಶಗಳಿಗೆ ಹಣ ವರ್ಗಾವಣೆ ಮಾಡುವ ಸಂದರ್ಭದಲ್ಲಿ ಫೆಮಾ ಕಾಯ್ದೆಯ ಸೆಕ್ಷನ್ 37ಎ ಪ್ರಕಾರ ಹಣ ವಶಪಡಿಸಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಯಾವುದೇ ನಿರ್ಬಂಧ ಇಲ್ಲ ಎಂದು ನ್ಯಾಯಪೀಠ ತಿಳಿಸಿದೆ. ಜತೆಗೆ, ಸದ್ಯ ನೀಡಿರುವ ಆದೇಶವನ್ನು ಮೇಲ್ಮನವಿ ಪ್ರಾಧಿಕಾರದಲ್ಲಿ ಮತ್ತೊಮ್ಮೆ ಪ್ರಶ್ನಿಸಲು ಶಿಯೋಮಿಗೆ ಅವಕಾಶ ಕಲ್ಪಿಸಿದೆ.

5,551 ಕೋಟಿ ರೂಪಾಯಿ ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣದಲ್ಲಿ ಶೇ 84 ಮೊತ್ತವನ್ನು ಪೇಟೆಂಟ್ ತಂತ್ರಜ್ಞಾನದ ಬಳಕೆಗಾಗಿ ಅಮೆರಿಕದ ಮೊಬೈಲ್ ತಂತ್ರಜ್ಞಾನ ಸಂಸ್ಥೆ ಕ್ವಾಲ್ಕಾಮ್ ಇಂಕ್‌ ಟೆಕ್ ಸಂಸ್ಥೆಗೆ ಪಾವತಿ ಮಾಡಿದ್ದೇವೆ ಎಂದು ಶಿಯೋಮಿ ಇಂಡಿಯಾ ಕರ್ನಾಟಕ ಹೈಕೋರ್ಟ್​​​ಗೆ ತಿಳಿಸಿತ್ತು. ಹೀಗೆ ಮೂರು ವಿದೇಶಿ ಕಂಪನಿಗಳಿಗೆ ಪಾವತಿಸಿರುವ ತಂತ್ರಜ್ಞಾನದ ರಾಯಧನವು (ರಾಯಲ್ಟಿ) ಫೆಮಾ ಕಾನೂನಿಗೆ ವಿರುದ್ಧವಾಗಿಲ್ಲ ಎಂದೂ ಶಿಯೋಮಿ ಇಂಡಿಯಾ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿತ್ತು.

ಇದನ್ನೂ ಓದಿ: ಚೀನಾದ ಶಿಯೋಮಿ ಸಂಸ್ಥೆಯ 5500 ಕೋಟಿ ರೂ ಜಪ್ತಿ ವಿರುದ್ಧ ಸಂಸ್ಥೆ ಆಕ್ಷೇಪ, ರಿಟ್ ಅರ್ಜಿ ವಿಚಾರಣೆ

ಈ ಮಧ್ಯೆ, ಶಿಯೋಮಿ ಟೆಕ್ನಾಲಜಿ ಇಂಡಿಯಾದ ಸ್ಥಿರ ಠೇವಣಿಗಳಿಂದ 3,700 ಕೋಟಿ ರೂ. ವಶಕ್ಕೆ ಪಡೆಯುವ ಆದಾಯ ತೆರಿಗೆ ಇಲಾಖೆ ಆದೇಶವನ್ನು 2022ರ ಡಿಸೆಂಬರ್​​ನಲ್ಲಿ ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಆದರೆ, ಭಾರತದಿಂದ ಹೊರಗಡೆ ಇರುವ ಕಂಪನಿಗಳಲ್ಲಿ ಅಥವಾ ಸಂಸ್ಥೆಗಳಲ್ಲಿ ರಾಯಧನ ಹಾಗೂ ಇನ್ಯಾವುದೇ ರೂಪದಲ್ಲಿ ಸ್ಥಿರ ಠೇವಣಿ ಇಡುವಂತಿಲ್ಲ ಎಂದು ಮೊದಲ ಷರತ್ತನ್ನು ಕೋರ್ಟ್ ವಿಧಿಸಿತ್ತು. ಚೀನಾ ಮೂಲದ ಕಂಪನಿಯು ರಾಯಲ್ಟಿ ಹೆಸರಿನಲ್ಲಿ ಹೊರ ದೇಶಗಳಿಗೆ ಹಣ ಕಳುಹಿಸುತ್ತಿದೆ. ಆ ಮೂಲಕ ತೆರಿಗೆ ವಂಚಿಸುತ್ತಿದೆ ಎಂದು ಆಪಾದಿಸಿದ್ದ ಆದಾಯ ತೆರಿಗೆ ಇಲಾಖೆ ಶಿಯೋಮಿ ವಿರುದ್ಧ ಆದೇಶ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ