AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jobs: ಹುಟ್ಟಿನಲ್ಲಿ ಮಕ್ಕಳಿಗೆ ಆಯ್ಕೆ ಇರದು; 2ನೇ ಪತ್ನಿಯ ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನಿರ್ಬಂಧ ಸುತ್ತೋಲೆ ರದ್ದುಗೊಳಿದ ಕೋರ್ಟ್

ಹಿಂದೂ ವಿವಾಹ ಕಾಯ್ದೆಯಲ್ಲಿ ಈ ತಾರತಮ್ಯ ಮಾಡದೇ 1 ನೇ ಮತ್ತು 2 ನೇ ಪತ್ನಿಯ ಮಕ್ಕಳಿಗೆ ಸಮಾನ ಅವಕಾಶ ಕಲ್ಪಿಸಲಾಗಿದೆ. ಸಂಸತ್ತು ಮಕ್ಕಳಿಗೆ ಸಮಾನ ಸ್ಥಾನಮಾನ ನೀಡಿದೆ. ಹೀಗಾಗಿ ಕೆಪಿಟಿಸಿಎಲ್ ನ ನಿರ್ಬಂಧ ಕಾನೂನುಬಾಹಿರವೆಂದು ಪರಿಗಣಿಸಿ ಕರ್ನಾಟಕ ಹೈಕೋರ್ಟ್​ನ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.

Jobs: ಹುಟ್ಟಿನಲ್ಲಿ ಮಕ್ಕಳಿಗೆ ಆಯ್ಕೆ ಇರದು; 2ನೇ ಪತ್ನಿಯ ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನಿರ್ಬಂಧ ಸುತ್ತೋಲೆ ರದ್ದುಗೊಳಿದ ಕೋರ್ಟ್
ಕರ್ನಾಟಕ ಹೈಕೋರ್ಟ್​
TV9 Web
| Edited By: |

Updated on: Jul 15, 2021 | 11:06 PM

Share

ಬೆಂಗಳೂರು: 2ನೇ ಪತ್ನಿಯ ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡುವುದನ್ನು ನಿರ್ಬಂಧಿಸಿದ್ದ ಕೆಪಿಟಿಸಿಎಲ್ ನ ಸುತ್ತೋಲೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿದೆ. ತಂದೆ ತಾಯಿ ಇಲ್ಲದೇ ಮಕ್ಕಳು ಜನಿಸುವುದಿಲ್ಲ. ತಂದೆ ತಾಯಿ ಮಧ್ಯೆ ಅನೈತಿಕ ಸಂಬಂಧವಿರಬಹುದು. ಆದರೆ ಅನೈತಿಕ ಮಕ್ಕಳಿರುವುದಿಲ್ಲ. ಹುಟ್ಟಿನಲ್ಲಿ ಮಕ್ಕಳಿಗೆ ಆಯ್ಕೆ ಇರುವುದಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಹಿಂದೂ ವಿವಾಹ ಕಾಯ್ದೆಯಲ್ಲಿ ಈ ತಾರತಮ್ಯ ಮಾಡದೇ 1 ನೇ ಮತ್ತು 2 ನೇ ಪತ್ನಿಯ ಮಕ್ಕಳಿಗೆ ಸಮಾನ ಅವಕಾಶ ಕಲ್ಪಿಸಲಾಗಿದೆ. ಸಂಸತ್ತು ಮಕ್ಕಳಿಗೆ ಸಮಾನ ಸ್ಥಾನಮಾನ ನೀಡಿದೆ. ಹೀಗಾಗಿ ಕೆಪಿಟಿಸಿಎಲ್ ನ ನಿರ್ಬಂಧ ಕಾನೂನುಬಾಹಿರವೆಂದು ಪರಿಗಣಿಸಿ ಕರ್ನಾಟಕ ಹೈಕೋರ್ಟ್​ನ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. ಕನಕಪುರದ ಕೆ.ಸಂತೋಷ್ ಎಂಬುವವರು ಕೆಪಿಟಿಸಿಎಲ್​ನ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ನೀಡಿದೆ. ಜತೆಗೆ 2 ತಿಂಗಳಲ್ಲಿ ಅನುಕಂಪದ ನೌಕರಿಗೆ ಪರಿಗಣಿಸಲು ನ್ಯಾ.ಬಿ.ವಿ.ನಾಗರತ್ನ, ಹಂಚಟೆ ಸಂಜೀವ್ ಕುಮಾರ್ ಅವರುಗಳಿದ್ದ ಹೈಕೋರ್ಟ್​ನ ವಿಭಾಗೀಯ ಪೀಠ ಸೂಚನೆ ನೀಡಿದೆ.

ಬೆಂಗಳೂರು ಮೆಟ್ರೋ ಯೋಜನೆಗಾಗಿ ಮರ ಕಡಿಯಲು ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್ ಮೆಟ್ರೋ ರೈಲು ಯೋಜನೆಗಾಗಿ ಮರಗಳನ್ನು ಕಡಿಯಲು ಕರ್ನಾಟಕ ಹೈಕೋರ್ಟ್​ ಗುರುವಾರ ಷರತ್ತುಬದ್ಧ ಅನುಮತಿ ನೀಡಿದೆ. ನಾಗವಾರ-ಗೊಟ್ಟಿಗೆರೆ ಮಾರ್ಗದಲ್ಲಿ ಮೆಟ್ರೋ ಯೋಜನೆಗಾಗಿ ಮರಗಳನ್ನು ಕಡಿಯಬೇಕಾಗಿದೆ. ಈ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​, ಪರಿಹಾರ ರೂಪದಲ್ಲಿ 4000 ಮರಗಳನ್ನು ಬೆಳೆಸಬೇಕು ಮತ್ತು ಸ್ಥಳಾಂತರಗೊಂಡ ಮರಗಳನ್ನು ಸರಿಯಾಗಿ ಪೋಷಿಸಬೇಕು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತು.

ಮರ ಅಧಿಕಾರಿ ಮತ್ತು ಡಿಸಿಎಫ್ ವರ್ತನೆ ಸರಿಯಿಲ್ಲ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್​, ಮರ ಬೆಳೆಸಲು ಸೂಕ್ತ ಪರ್ಯಾಯ ಜಾಗವನ್ನು ಪರಿಶೀಲಿಸಬೇಕಿತ್ತು ಎಂದು ಹೇಳಿತು. ಕಡಿಯುವ ಮರಗಳಿಗೆ ಬದಲಿಯಾಗಿ ಬೆಳೆಸುವ ಮರಗಳು ಮತ್ತು ಮಣ್ಣಿನ ಪರೀಕ್ಷೆಯ ವಿವರವನ್ನು ಎರಡು ವಾರಗಳ ಒಳಗೆ ನೀಡಬೇಕು ಎಂದು ಹೇಳಿತು.

ಇದನ್ನೂ ಓದಿ:

ಕರ್ನಾಟಕದ ಜೈಲುಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಕೈದಿಗಳು: ಹೈಕೋರ್ಟ್​ಗೆ ಕಾನೂನು ಪ್ರಾಧಿಕಾರ ವರದಿ

Sedition Law: ಬ್ರಿಟಿಷರ ಕಾಲದ ದೇಶದ್ರೋಹ ಕಾಯ್ದೆ ಇನ್ನೂ ಅಗತ್ಯವಿದೆಯೇ?; ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ಪ್ರಶ್ನೆ

(Karnataka High Court says Children have no choice at birth and repealing the Employment Restraint Circuit on the basis of sympathy for the children of the 2nd wife)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ