AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಕೆಲವು ಬಿಜೆಪಿ ಸಚಿವರಿಗೆ ಹೊಸ ಸಂಕಷ್ಟ; ಕ್ರಿಮಿನಲ್ ಕೇಸ್ ರದ್ದುಪಡಿಸಲು ಸಾಧ್ಯವಿಲ್ಲ ಎಂದ ಹೈಕೋರ್ಟ್

Karnataka News: ಕರ್ನಾಟಕ ಸರ್ಕಾರ ಕಳೆದ ವರ್ಷ ಆಗ ಕಾನೂನು ಸಚಿವರಾಗಿದ್ದ ಜೆ.ಸಿ. ಮಾಧುಸ್ವಾಮಿ, ಪ್ರವಾಸೋದ್ಯಮ ಸಚಿವರಾಗಿದ್ದ ಸಿ.ಟಿ. ರವಿ, ಕೃಷಿ ಸಚಿವರಾಗಿದ್ದ ಬಿ.ಸಿ. ಪಾಟೀಲ್ ಸೇರಿದಂತೆ ಹಲವು ರಾಜಕಾರಣಿಗಳ ಮೇಲಿನ ಕೇಸ್​ಗಳನ್ನು ರದ್ದುಪಡಿಸುವಂತೆ ಸೂಚಿಸಿತ್ತು.

ಕರ್ನಾಟಕದ ಕೆಲವು ಬಿಜೆಪಿ ಸಚಿವರಿಗೆ ಹೊಸ ಸಂಕಷ್ಟ; ಕ್ರಿಮಿನಲ್ ಕೇಸ್ ರದ್ದುಪಡಿಸಲು ಸಾಧ್ಯವಿಲ್ಲ ಎಂದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್​
TV9 Web
| Edited By: |

Updated on: Aug 11, 2021 | 7:25 PM

Share

ಬೆಂಗಳೂರು: ಕಳೆದ ವರ್ಷ ಚುನಾಯಿತ ಪ್ರತಿನಿಧಿಗಳ ಮೇಲಿನ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವಂತೆ ಸೂಚನೆ ನೀಡಿದ್ದ ಕರ್ನಾಟಕ ಸರ್ಕಾರದ ಆದೇಶವನ್ನು ರಾಜ್ಯ ಹೈಕೋರ್ಟ್ ತಿರಸ್ಕರಿಸಿದೆ. ಆಗಸ್ಟ್​ 31ರಂದು ಚುನಾಯಿತ ಪ್ರತಿನಿಧಿಗಳ ವಿರುದ್ಧದ ಪ್ರಕರಣ ಸೇರಿ ಒಟ್ಟು 61 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಆದರೆ, ಸುಪ್ರೀಂ ಕೋರ್ಟ್​ ಮಂಗಳವಾರ ನೀಡಿರುವ ತೀರ್ಪಿನ ಅನ್ವಯ ಆ ಆದೇಶ ಹಾಲಿ ಹಾಗೂ ಮಾಜಿ ಶಾಸಕ ಅಥವಾ ಸಂಸದರಿಗೆ ಅನ್ವಯವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್​ ಸ್ಪಷ್ಟಪಡಿಸಿದೆ.

ಮಂಗಳವಾರ ಈ ಬಗ್ಗೆ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಸಂಸದರು ಮತ್ತು ಶಾಸಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್​ಗಳನ್ನು ಆಯಾ ರಾಜ್ಯದ ಹೈಕೋರ್ಟ್​ನ ಅನುಮತಿ ಇಲ್ಲದೆ ಹಿಂಪಡೆಯಲು ಸಾಧ್ಯವಿಲ್ಲ. ಹಾಗೇ, ಜನಪ್ರತಿನಿಧಿಗಳ ಕೇಸ್​ಗಳ ವಿಚಾರಣೆ ಮಾಡುತ್ತಿರುವ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ಆ ಪ್ರಕರಣದ ವಿಚಾರಣೆ ಮುಗಿಯುವವರೆಗೂ ಬೇರೆಡೆ ವರ್ಗಾವಣೆ ಮಾಡುವಂತಿಲ್ಲ ಎಂಬ ಮಹತ್ವದ ಆದೇಶ ಹೊರಡಿಸಿತ್ತು.

ಕರ್ನಾಟಕ ಮಾತ್ರವಲ್ಲದ ಉತ್ತರ ಪ್ರದೇಶ ಸರ್ಕಾರ ಕೂಡ ಕೆಲವು ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಮೇಲಿನ ಕೇಸನ್ನು ಹಿಂಪಡೆಯಲು ಪ್ರಯತ್ನಿಸಿತ್ತು. ಆದರೆ, ಸುಪ್ರೀಂ ಕೋರ್ಟ್​ನ ಆದೇಶದಿಂದ ರಾಜ್ಯ ಸರ್ಕಾರಗಳಿಗೆ ಆ ಅವಕಾಶ ತಪ್ಪಿದಂತಾಗಿದೆ. ಕರ್ನಾಟಕ ಸರ್ಕಾರ ಕಳೆದ ವರ್ಷ ಆಗ ಕಾನೂನು ಸಚಿವರಾಗಿದ್ದ ಜೆ.ಸಿ. ಮಾಧುಸ್ವಾಮಿ, ಪ್ರವಾಸೋದ್ಯಮ ಸಚಿವರಾಗಿದ್ದ ಸಿ.ಟಿ. ರವಿ, ಕೃಷಿ ಸಚಿವರಾಗಿದ್ದ ಬಿ.ಸಿ. ಪಾಟೀಲ್ ಸೇರಿದಂತೆ ಹಲವು ರಾಜಕಾರಣಿಗಳ ಮೇಲಿನ ಕೇಸ್​ಗಳನ್ನು ಹಿಂಪಡೆಯುವಂತೆ ಸೂಚಿಸಿತ್ತು. ಹಾಗೇ, 2017ರಲ್ಲಿ ಶಾಸಕ ಆನಂದ್ ಸಿಂಗ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್ ಅನ್ನು ಕೂಡ ರದ್ದುಪಡಿಸಲು ಸೂಚಿಸಲಾಗಿತ್ತು. ಆದರೆ, ಇದೀಗ ಚುನಾಯಿತ ಪ್ರತಿನಿಧಿಗಳ ವಿರುದ್ಧದ ಪ್ರಕರಣಗಳನ್ನು ರದ್ದುಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ ಹೇಳಿಕೆ ನೀಡಿರುವುದರಿಂದ ಕರ್ನಾಟಕದ ಹಲವು ರಾಜಕಾರಣಿಗಳಿಗೆ ಮತ್ತೆ ತಲೆನೋವು ಶುರುವಾಗಿದೆ. ಈ ವಿಚಾರವಾಗಿ ಸೆಪ್ಟೆಂಬರ್ 3ಕ್ಕೆ ಕೋಟ್​ ವಿಚಾರಣೆಯನ್ನು ಮುಂದೂಡಿದೆ.

ಈ ಕುರಿತು ನಿನ್ನೆ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​.ವಿ. ರಮಣ, ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ವಿನೀತ್ ಸರನ್ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ ತೀರ್ಪು ಪ್ರಕಟಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ಬಾಕಿ ಉಳಿದಿರುವ ಸಂಸದರು ಹಾಗೂ ಶಾಸಕರ ವಿರುದ್ಧದ ಕೇಸ್​ಗಳ ಮಾಹಿತಿಯನ್ನು ನೀಡುವಂತೆ ಹೈಕೋರ್ಟ್​ಗಳ ರಿಜಿಸ್ಟ್ರಾರ್​ಗಳಿಗೆ ಸುಪ್ರೀಂ ಕೋರ್ಟ್​ ಆದೇಶಿಸಿತ್ತು.

ಕೇರಳ ಸರ್ಕಾರ ವರ್ಸಸ್ ಕೆ. ಅಜಿತ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ ನೀಡಿದ ತೀರ್ಪಿನ ಬಳಿಕ 2020ರ ಸೆಪ್ಟೆಂಬರ್ 16ರಿಂದ ಸಂಸದರು ಹಾಗೂ ಶಾಸಕರ ವಿರುದ್ಧದ ಕೇಸ್​ಗಳನ್ನು ಹಿಂಪಡೆಯುವ ಬಗ್ಗೆ ಪರಿಶೀಲನೆ ನಡೆಸುವಂತೆ ಹೈಕೋರ್ಟ್​ಗಳು ಮನವಿ ಮಾಡಿದ್ದವು. ಅದರಂತೆ ಈಗ ಆದೇಶ ಹೊರಡಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿತ್ತು.

ಇದನ್ನೂ ಓದಿ: ಹೈಕೋರ್ಟ್​ ಒಪ್ಪಿಗೆಯಿಲ್ಲದೆ ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಕೇಸ್ ಹಿಂಪಡೆಯುವಂತಿಲ್ಲ; ಸುಪ್ರೀಂ ಕೋರ್ಟ್​ ಆದೇಶ

Bengaluru Police: ಕ್ರಿಮಿನಲ್​ ಚಟುವಟಿಕೆ ನಡೆಸುತ್ತಿದ್ದವರ ಮನೆ ಮೇಲೆ ದಾಳಿ; ಒಟ್ಟು 74 ಆರೋಪಿಗಳು ವಶಕ್ಕೆ

(Karnataka High Court Says Government Order Withdrawing Criminal Cases on BJP MLAs and Ministers not Possible)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್