AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಘಟ್ಟ ಅರಣ್ಯ ಪ್ರದೇಶಗಳಲ್ಲಿ ರೈಲುಗಳ ವೇಗಕ್ಕೆ ಮಿತಿ; ಅರಣ್ಯ ಇಲಾಖೆಯ ಪ್ರತಿಕ್ರಿಯೆ ಕೋರಿದ ಹೈಕೋರ್ಟ್

ಹೊಸಪೇಟೆ-ವಾಸ್ಕೋ ಮತ್ತು ಲೋಂಡಾ-ಮಿರಜ್ ರೈಲು ಮಾರ್ಗಗಳ ಪಶ್ಚಿಮ ಘಟ್ಟಗಳ ದಟ್ಟ ಅರಣ್ಯಗಳ ಪ್ರದೇಶಗಳಲ್ಲಿ ರಾತ್ರಿ ಸಮಯದಲ್ಲಿ ರೈಲುಗಳ ವೇಗವನ್ನು ಮಿತಿಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್) ಪ್ರತಿಕ್ರಿಯೆ ನೀಡುವಂತೆ ಕರ್ನಾಟಕ ಅರಣ್ಯ ಇಲಾಖೆಗೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ.

ಪಶ್ಚಿಮ ಘಟ್ಟ ಅರಣ್ಯ ಪ್ರದೇಶಗಳಲ್ಲಿ ರೈಲುಗಳ ವೇಗಕ್ಕೆ ಮಿತಿ; ಅರಣ್ಯ ಇಲಾಖೆಯ ಪ್ರತಿಕ್ರಿಯೆ ಕೋರಿದ ಹೈಕೋರ್ಟ್
ಹೈಕೋರ್ಟ್
Ganapathi Sharma
|

Updated on: Mar 22, 2023 | 3:44 PM

Share

ಬೆಂಗಳೂರು: ಹೊಸಪೇಟೆ-ವಾಸ್ಕೋ ಮತ್ತು ಲೋಂಡಾ-ಮಿರಜ್ ರೈಲು ಮಾರ್ಗಗಳ (Hospet-Vasco and Londa-Miraj route) ಪಶ್ಚಿಮ ಘಟ್ಟಗಳ ದಟ್ಟ ಅರಣ್ಯಗಳ ಪ್ರದೇಶಗಳಲ್ಲಿ ರಾತ್ರಿ ಸಮಯದಲ್ಲಿ ರೈಲುಗಳ ವೇಗವನ್ನು ಮಿತಿಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್) ಪ್ರತಿಕ್ರಿಯೆ ನೀಡುವಂತೆ ಕರ್ನಾಟಕ ಅರಣ್ಯ ಇಲಾಖೆಗೆ (Karnataka forest department) ಹೈಕೋರ್ಟ್ (Karnataka High Court) ಮಂಗಳವಾರ ಸೂಚನೆ ನೀಡಿದೆ. ಗಿರಿಧರ್ ಕುಲಕರ್ಣಿ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಬೆಳಗಾವಿ, ಹಳಿಯಾಳ ಮತ್ತು ಧಾರವಾಡ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಕಾಳಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರು ಎರಡು ವಾರಗಳ ಒಳಗಾಗಿ ತಮ್ಮ ಉತ್ತರವನ್ನು ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.

ರೈಲು ವೇಗ ಕಡಿಮೆ ಮಾಡುವ ವಿಚಾರವಾಗಿ ಕೇಂದ್ರ ಸರ್ಕಾರ ಈಗಾಗಲೇ ತನ್ನ ವಿವರಣೆ ಸಲ್ಲಿಸಿದ್ದು, ರೈಲ್ವೆ ಅಧಿಕಾರಿಗಳು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ನಡುವೆ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದೆ.

ರಾತ್ರಿ ವೇಳೆ ಕಾಡಿನ ಮೂಲಕ ಹಾದುಹೋಗುವ ರೈಲುಗಳ ವೇಗವನ್ನು ಕಡಿಮೆ ಮಾಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದರೂ, ಈ ಮಾರ್ಗಗಳಲ್ಲಿ ರೈಲುಗಳು ಹೆಚ್ಚಿನ ವೇಗದಲ್ಲಿ ಸಂಚರಿಸುತ್ತಿವೆ. ಇದರಿಂದಾಗಿ ವನ್ಯಜೀವಿಗಳು ಅಪಘಾತಕ್ಕೀಡಾಗುವುದನ್ನು ತಪ್ಪಿಸಲು ವೇಗ ಕಡಿಮೆ ಮಾಡುವಂತೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಇದನ್ನೂ ಓದಿ: Karnataka High Court Recruitment 2023: ಕರ್ನಾಟಕ ಹೈಕೋರ್ಟ್​ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

2014ರಿಂದ ಎರಡು ಆನೆಗಳು, 49 ಗೌರ್‌ಗಳು, ಐದು ಸಾಂಬಾರ್ ಜಿಂಕೆಗಳು, ಒಂದು ಸೋಮಾರಿ ಕರಡಿ, ಒಂದು ಕಾಡು ನಾಯಿ, ಒಂದು ಕಾಡು ಹಂದಿ ಮತ್ತು ಒಂದು ಜಿಂಕೆ ಸೇರಿದಂತೆ 60 ಕಾಡು ಪ್ರಾಣಿಗಳು (ಸರೀಸೃಪಗಳು ಮತ್ತು ಉಭಯಚರಗಳನ್ನು ಹೊರತುಪಡಿಸಿ) ಈ ಎರಡು ರೈಲ್ವೆ ಮಾರ್ಗಗಳಲ್ಲಿ ಸಾವನ್ನಪ್ಪಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಹಲವಾರು ಬಾರಿ ವಿನಂತಿ ಮಾಡಿದ್ದರೂ ಕಾಡು ಪ್ರಾಣಿಗಳ ಅಪಘಾತಗಳನ್ನು ತಪ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ರೈಲ್ವೆ ಇಲಾಖೆ ವಿಫಲವಾಗಿದೆ. ಈ ಸಮಸ್ಯೆಗಳ ಕುರಿತು ಅಧಿಕಾರಿಗಳಿಗೆ ನೀಡಿದ ಮನವಿಗಳನ್ನು ನಿರ್ಲಕ್ಷಿಸಲಾಗಿದೆ ಎಂದೂ ಅರ್ಜಿದಾರರು ಉಲ್ಲೇಖಿಸಿದ್ದಾರೆ.

ಪ್ರಸ್ತುತ ಇರುವ ಎರಡು ಮಾರ್ಗಗಳನ್ನು ಕೈಬಿಟ್ಟು ಬೆಳಗಾವಿ-ಧಾರವಾಡ ನಡುವೆ ಪರ್ಯಾಯ ರೈಲು ಮಾರ್ಗ ನಿರ್ಮಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದೂ ಮನವಿಯಲ್ಲಿ ಕೋರಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು