AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿ ನಂಜನಗೂಡಿನಲ್ಲಿ ಪೂಜೆ: ವಿಜಯೇಂದ್ರ ನಡೆಯ ಬಗ್ಗೆ ಹೈಕೋರ್ಟ್​ ಸಿಟ್ಟು

ಮಾರ್ಗಸೂಚಿ ಉಲ್ಲಂಘಿಸಿ ಬೆಳಗಾವಿಯಲ್ಲಿ ಬಿಜೆಪಿ ಸಮಾವೇಶ ನಡೆಸಿದ ಪ್ರಕರಣದಲ್ಲಿ ಪೊಲೀಸ್ ಆಯುಕ್ತರು ನೀಡಿದ ಪ್ರಮಾಣಪತ್ರದ ಕುರಿತು ಸಹ ಹೈಕೋರ್ಟ್ ಗರಂ ಆಯಿತು. ಕೇವಲ 6 ಜನರಿಂದ ಮಾರ್ಗಸೂಚಿ ಉಲ್ಲಂಘನೆಯಾಗಿದೆಯೇ? ಎಂದು ಪ್ರಶ್ನಿಸಿದ ಕೋರ್ಟ್, ಪೊಲೀಸ್ ಆಯುಕ್ತರ ವರದಿ ಹಾಸ್ಯಾಸ್ಪದವಾಗಿದೆ ಎಂದು ಪ್ರತಿಕ್ರಿಯಿಸಿತು.

ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿ ನಂಜನಗೂಡಿನಲ್ಲಿ ಪೂಜೆ: ವಿಜಯೇಂದ್ರ ನಡೆಯ ಬಗ್ಗೆ ಹೈಕೋರ್ಟ್​ ಸಿಟ್ಟು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 18, 2021 | 3:43 PM

Share

ಬೆಂಗಳೂರು: ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿ ಸಿಎಂ ಯಡಿಯೂರಪ್ಪ ಅವರ ಮಗ ಬಿ.ವೈ.ವಿಜಯೇಂದ್ರ ನಂಜನಗೂಡಿನಲ್ಲಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಸಾರ್ವಜನಿಕರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ಇಲ್ಲವೆಂದ ಮೇಲೆ ಇತರರಿಗೂ ಇರಬಾರದು. ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಮುಜರಾಯಿ ಇಲಾಖೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಖಡಕ್ ಎಚ್ಚರಿಕೆ ನೀಡಿದೆ.

ವಿಜಯೇಂದ್ರ ಉದ್ದೇಶಪೂರ್ವಕವಾಗಿ ದೇವಾಲಯದ ಒಳಗೆ ಭೇಟಿ ನೀಡಿರಲಿಲ್ಲ. ಪೂಜೆ ವೇಳೆ ಅರ್ಚಕರು ಕರೆದರೆಂದು ಹೋಗಿದ್ದಾರೆ. ಬಿ.ವೈ.ವಿಜಯೇಂದ್ರ ಕೇವಲ ಐದರಿಂದ ಹತ್ತು ನಿಮಿಷವಷ್ಟೇ ಇದ್ದಿದ್ದರು ಎಂದು ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್​​ಗೆ ಎಜಿ ಪ್ರಭುಲಿಂಗ್ ನಾವದಗಿ ಸ್ಪಷ್ಟನೆ ನೀಡಲು ಪ್ರಯತ್ನಿಸಿದರು. ನಿಷೇಧವಿದ್ದರೂ ಜನರು ದೇವಾಲಯಕ್ಕೆ ಹೋಗಬಹುದೇ? ಹಾಗಿದ್ದರೆ ಜನಸಾಮಾನ್ಯರಿಗೂ ಆ ಅವಕಾಶ ನೀಡಬೇಕು. ನಿಯಮ ಉಲ್ಲಂಘಿಸಿ ದೇವಾಲಯದಲ್ಲಿ ಪೂಜೆ ಸಲ್ಲಿಸಲು ಅರ್ಚಕರಷ್ಟೇ ಹೊಣೆಯೇ, ಹೋದವರದ್ದಲ್ಲವೇ? ಎಂದು ಸಿಜೆ. ಎ.ಎಸ್.ಒಕಾ ನೇತೃತ್ವದ ಪೀಠ ಸರ್ಕಾರವನ್ನು ಪ್ರಶ್ನಿಸಿತು. ರಾಜಕಾರಣಿಗಳಿಗೆ ಇತರರಗಿಂತ ಹೆಚ್ಚು ಹೊಣೆಗಾರಿಕೆಯಿರುತ್ತದೆ. ಬಿ.ವೈ. ವಿಜಯೇಂದ್ರರಿಂದಲೂ ಕೋರ್ಟ್ ವಿವರಣೆ ಪಡೆಯಬಹುದು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಅಡ್ವೊಕೇಟ್ ಜನರಲ್ ಪ್ರತಿಕ್ರಿಯೆ ನೀಡಿದರು. ಇದೇ ವೇಳೆ ಪ್ರತಿಕ್ರಿಯಿಸಿದ ಕೋರ್ಟ್, ಈ ಪ್ರಕರಣ ಸಂಬಂಧಪಟ್ಟ ಎಲ್ಲರ ಕಣ್ತೆರೆಸಬೇಕು. ಅಧಿಕಾರಿಗಳು, ರಾಜಕಾರಣಿಗಳಿಗೆ ಅರಿವಾಗಬೇಕು ಎಂದು ನಿರ್ದೇಶನ ನೀಡಿತು.

ಕೊರೊನಾ ಹಾಗೂ ಲಾಕ್​ಡೌನ್ ನಡುವೆಯೂ ನಂಜನಗೂಡು ದೇಗುಲದಲ್ಲಿ ಬಿ.ವೈ. ವಿಜಯೇಂದ್ರ ಪೂಜೆ ಮಾಡಿಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರ ವಿರುದ್ಧ ಮೈಸೂರು ಜಿಲ್ಲಾಧಿಕಾರಿಗೆ ಈ ಮುನ್ನ ದೂರು ನೀಡಲಾಗಿತ್ತು. ಜಿಲ್ಲಾಧಿಕಾರಿಗಳಿಗೆ ಮೈಸೂರು ಜಿಲ್ಲಾ ಕಾಂಗ್ರೆಸ್​ ಘಟಕ ಈ ಬಗ್ಗೆ ದೂರು ನೀಡಿದೆ. ವಿಜಯೇಂದ್ರ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ದೂರಿನಲ್ಲಿ ತಿಳಿಸಲಾಗಿತ್ತು.

ಬಿಜೆಪಿ ಸಮಾವೇಶಕ್ಕೂ ಹೈಕೋರ್ಟ್ ಗರಂ ಮಾರ್ಗಸೂಚಿ ಉಲ್ಲಂಘಿಸಿ ಬೆಳಗಾವಿಯಲ್ಲಿ ಬಿಜೆಪಿ ಸಮಾವೇಶ ನಡೆಸಿದ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್​ನ ಸಿಜೆ ಎ.ಎಸ್.ಒಕಾ ನೇತೃತ್ವದ ಪೀಠ, ಸಾವಿರಾರು ಜನರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಮಾಸ್ಕ್ ಧರಿಸದವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಮಾರ್ಗಸೂಚಿ ಉಲ್ಲಂಘಿಸಿ ಬೆಳಗಾವಿಯಲ್ಲಿ ಬಿಜೆಪಿ ಸಮಾವೇಶ ನಡೆಸಿದ ಪ್ರಕರಣದಲ್ಲಿ ಪೊಲೀಸ್ ಆಯುಕ್ತರು ನೀಡಿದ ಪ್ರಮಾಣಪತ್ರದ ಕುರಿತು ಸಹ ಹೈಕೋರ್ಟ್ ಗರಂ ಆಯಿತು. ಕೇವಲ 6 ಜನರಿಂದ ಮಾರ್ಗಸೂಚಿ ಉಲ್ಲಂಘನೆಯಾಗಿದೆಯೇ? ಎಂದು ಪ್ರಶ್ನಿಸಿದ ಕೋರ್ಟ್, ಪೊಲೀಸ್ ಆಯುಕ್ತರ ವರದಿ ಹಾಸ್ಯಾಸ್ಪದವಾಗಿದೆ ಎಂದು ಪ್ರತಿಕ್ರಿಯಿಸಿತು.

ಇದೇ ವೇಳೆ ಈ ಘಟನೆಗೆ ಸಂಬಂಧಿಸಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಸರ್ಕಾರದ ಪರ ವಕೀಲರ ಸ್ಪಷ್ಟಪಡಿಸಲು ಯತ್ನಿಸಿದರೂ, ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಪೊಲೀಸರಿಗೆ ಹೈಕೋರ್ಟ್ ಸೂಚನೆ ನೀಡಿತು.

ಇದನ್ನೂ ಓದಿ: Lakshadweep Sedition Case: ಆಯೆಷಾ ಸುಲ್ತಾನಾಗೆ ಮಧ್ಯಂತರ ಜಾಮೀನು ನೀಡಿದ ಕೇರಳ ಹೈಕೋರ್ಟ್ 

ಸಿಎಂ ಯಡಿಯೂರಪ್ಪಗೆ ಅಖಿಲ ಭಾರತ ವೀರಶೈವ ಮಹಾಸಭಾದ ಬೆಂಬಲವಿದೆ: ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ

(Karnataka High Court slams BY Vijayendra on Nanjangud temple special pooja case and BGP on Belagavi function case)

Published On - 3:37 pm, Fri, 18 June 21

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?