AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ವರ್ಷಗಳ ಜೈಲು ಶಿಕ್ಷೆ ಬದಲು ವೃದ್ದನನ್ನು ಅಂಗನವಾಡಿಯಲ್ಲಿ ಸೇವೆಗೆ ಬಿಟ್ಟ ಜಡ್ಜ್: ಹೈಕೋರ್ಟ್ ವಿಶೇಷ ತೀರ್ಪು, ಚರ್ಚೆಗೆ ಗ್ರಾಸವಾಯ್ತು

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ನಿವಾಸಿ ಐತಪ್ಪ ನಾಯ್ಕರದ್ದು ತೀರಾ ಬಡ ಕುಟುಂಬ. 2008ರಲ್ಲಿ ಜಾಗದ ವಿಚಾರದಲ್ಲಿ ಕಿರುಕುಳ ನೀಡಿದ ನೆರೆಮನೆಯ ವ್ಯಕ್ತಿಯೊಬ್ಬರಿಗೆ ಐತಪ್ಪ ನಾಯ್ಕ ಹಲ್ಲೆ ಮಾಡಿದ್ದರು. ಪ್ರಕರಣದಲ್ಲಿ ಬಂಟ್ವಾಳದ ಕೋರ್ಟ್, ಆರೋಪಿ ಐತಪ್ಪ ನಾಯ್ಕರಿಗೆ ಮೂರು ದಿನಗಳ ಜೈಲು ಶಿಕ್ಷೆ ವಿಧಿಸಿತ್ತು. ಆದರೆ...

ಎರಡು ವರ್ಷಗಳ ಜೈಲು ಶಿಕ್ಷೆ ಬದಲು ವೃದ್ದನನ್ನು ಅಂಗನವಾಡಿಯಲ್ಲಿ ಸೇವೆಗೆ ಬಿಟ್ಟ ಜಡ್ಜ್: ಹೈಕೋರ್ಟ್ ವಿಶೇಷ ತೀರ್ಪು, ಚರ್ಚೆಗೆ ಗ್ರಾಸವಾಯ್ತು
ಎರಡು ವರ್ಷಗಳ ಜೈಲು ಶಿಕ್ಷೆ ಬದಲು ವೃದ್ದನನ್ನು ಅಂಗನವಾಡಿಯಲ್ಲಿ ಸೇವೆಗೆ ಬಿಟ್ಟ ಜಡ್ಜ್: ಹೈಕೋರ್ಟ್ ವಿಶೇಷ ತೀರ್ಪು, ಚರ್ಚೆಗೆ ಗ್ರಾಸವಾಯ್ತು
TV9 Web
| Edited By: |

Updated on: Mar 06, 2023 | 10:52 AM

Share

ಸಾಮಾನ್ಯವಾಗಿ ತಪ್ಪು ಮಾಡಿದವರಿಗೆ ನ್ಯಾಯಾಲಯ ಗರಿಷ್ಠ ಪ್ರಮಾಣದ ಶಿಕ್ಷೆ ಕೊಡುತ್ತದೆ. ಇಲ್ಲೊಬ್ಬರು ವೃದ್ದರು 15 ವರ್ಷಗಳ ಹಿಂದೆ ನೆರೆಮನೆಯ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಹೈಕೋರ್ಟ್ (Karnataka High court) ಸ್ಪೆಷಲ್ ತೀರ್ಪೊಂದನ್ನು (judgement) ನೀಡಿದೆ. ಹೈಕೋರ್ಟ್ ನೀಡಿರುವ ಈ ತೀರ್ಪು ಸಾಕಷ್ಟು ಚರ್ಚೆಗೂ ಕಾರಣವಾಗಿದೆ. ಹಾಗಾದ್ರೆ ಏನಿದು ಶಿಕ್ಷೆ, ಯಾಕೀ ಚರ್ಚೆ ಅನ್ನೋ ಸ್ಟೋರಿ ನೋಡಿ. ಹೌದು… ಅಪರಾಧ ಪ್ರಕರಣಗಳಲ್ಲಿ ತಪ್ಪೆಸಗಿದವರಿಗೆ ಗರಿಷ್ಠ ಶಿಕ್ಷೆ ಕೊಡಬೇಕೆಂದೇ ಕಾನೂನು ಹೇಳುತ್ತದೆ. ಆದರೆ ಜೈಲು ಕೈದಿಗಳಲ್ಲಿಯೂ ಸನ್ನಡತೆಗೆ ಮನ್ನಣೆ ಕೊಡುವುದು ನ್ಯಾಯಾಲಯದ ವಾಡಿಕೆ. ಈ 81 ವರ್ಷ ಪ್ರಾಯದ ವೃದ್ಧನ ಪಾಲಿಗೆ (accused), ಹೈಕೋರ್ಟ್ ಔದಾರ್ಯ ತೋರಿದ್ದು, ವಯಸ್ಸು, ಸನ್ನಡತೆ, ಪ್ರಾಮಾಣಿಕತೆ ಪರಿಗಣಿಸಿ ಜೈಲು ಶಿಕ್ಷೆಯ ಬದಲು ಅಂಗನವಾಡಿಯಲ್ಲಿ ಸೇವೆ ಮಾಡಲು ಹಚ್ಚಿದೆ. ಅದರಂತೆ, ವೃದ್ಧ ವ್ಯಕ್ತಿಯೀಗ ಕರೋಪಾಡಿ ಗ್ರಾಮದ (Mangalore) ಮಿತ್ತನಡ್ಕದ ಅಂಗನವಾಡಿಯಲ್ಲಿ ಶುಚಿತ್ವದ ಕೆಲಸದಲ್ಲಿ ತೊಡಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ನಿವಾಸಿ ಐತಪ್ಪ ನಾಯ್ಕರದ್ದು ತೀರಾ ಬಡ ಕುಟುಂಬ. 2008ರಲ್ಲಿ ಜಾಗದ ವಿಚಾರದಲ್ಲಿ ಕಿರುಕುಳ ನೀಡಿದ ನೆರೆಮನೆಯ ವ್ಯಕ್ತಿಯೊಬ್ಬರಿಗೆ ಐತಪ್ಪ ನಾಯ್ಕ ಹಲ್ಲೆ ಮಾಡಿದ್ದರು. ಪ್ರಕರಣದಲ್ಲಿ ಬಂಟ್ವಾಳದ ಕೋರ್ಟ್, ಆರೋಪಿ ಐತಪ್ಪ ನಾಯ್ಕರಿಗೆ ಮೂರು ದಿನಗಳ ಜೈಲು ಶಿಕ್ಷೆ ಮತ್ತು ಹತ್ತು ಸಾವಿರ ದಂಡ ವಿಧಿಸಿತ್ತು. ಆದರೆ ದೂರುದಾರ ವ್ಯಕ್ತಿ ಆರೋಪಿಗೆ ಶಿಕ್ಷೆಯ ಪ್ರಮಾಣ ಹೆಚ್ಚಿಸಬೇಕೆಂದು ಮಂಗಳೂರಿನ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ 2014ರಲ್ಲಿ ಆರೋಪಿ ಐತಪ್ಪ ನಾಯ್ಕನಿಗೆ ಎರಡು ವರ್ಷಗಳ ಶಿಕ್ಷೆ ವಿಧಿಸಿ ತೀರ್ಪು ಕೊಟ್ಟಿತ್ತು.

ಮಂಗಳೂರಿನ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಐತಪ್ಪ ನಾಯ್ಕ ಪರ ವಕೀಲರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಮಕ್ಕಳಿಲ್ಲದ ವೃದ್ಧ ಮತ್ತು ಮನೆಯಲ್ಲಿ ಪತ್ನಿ ಒಬ್ಬಂಟಿಯಾಗಿರುವುದರಿಂದ, ವಯಸ್ಸನ್ನು ಸಹ ಪರಿಗಣಿಸಿ ಶಿಕ್ಷೆಗೆ ವಿನಾಯ್ತಿ ನೀಡಬೇಕೆಂದು ವಕೀಲರು ಕೋರಿದ್ದರು. ಆರೋಪಿ ಐತಪ್ಪ ನಾಯ್ಕ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಲ್ಲದೆ, ಪಶ್ಚಾತ್ತಾಪ ವ್ಯಕ್ತಪಡಿಸಿದ್ದರಿಂದ ನ್ಯಾಯಾಧೀಶರು ಕೆಳಗಿನ ಕೋರ್ಟಿನ ಶಿಕ್ಷೆಯನ್ನು ರದ್ದುಗೊಳಿಸಿದ್ದಾರೆ. ಅದರ ಬದಲಿಗೆ ಒಂದು ವರ್ಷ ಕಾಲ ಸ್ಥಳೀಯ ಅಂಗನವಾಡಿಯಲ್ಲಿ ವೇತನ ಇಲ್ಲದೆ ಸೇವೆ ಮಾಡುವಂತೆ ಆದೇಶ ಮಾಡಿದ್ದಾರೆ. ಅದರಂತೆ, ಕರೋಪಾಡಿ ಗ್ರಾಮದ ಮಿತ್ತನಡ್ಕ ಅಂಗನವಾಡಿಯಲ್ಲಿ ವೃದ್ಧ ಐತಪ್ಪ ನಾಯ್ಕ ಈಗ ಶುಚಿತ್ವದ ಕೆಲಸ ಆರಂಭಿಸಿದ್ದಾರೆ.

ಹಣ ಉಳ್ಳವರು ಶಿಕ್ಷೆಯಾದರೂ, ಏನಾದ್ರೂ ಕಿತಾಪತಿ ಮಾಡಿ ಶಿಕ್ಷೆಯಿಂದ ಪಾರಾಗುತ್ತಾರೆ. ಬಡಪಾಯಿ ಐತಪ್ಪ ನಾಯ್ಕನಿಗೆ ಬಂಟ್ವಾಳದ ವಕೀಲರೊಬ್ಬರು ಸಹಾಯ ಹಸ್ತ ನೀಡಿದ್ದು, ಹೈಕೋರ್ಟಿನಲ್ಲಿ ವಾದಿಸಿ ನ್ಯಾಯ ದೊರಕಿಸಿದ್ದಾರೆ. ಇಳಿ ವಯಸ್ಸಿನಲ್ಲಿ ಜೈಲು ಸೇರುವ ಬದಲು ಮನೆ ಬಳಿಯಲ್ಲೇ ಅಂಗನವಾಡಿ ಸೇವೆಗೆ ಜೋಡಿಸುವ ಕೆಲಸ ಮಾಡಿದ್ದಾರೆ. ಹೈಕೋರ್ಟ್ ನೀಡಿರುವ ಈ ರೀತಿಯ ಅಪರೂಪದ ತೀರ್ಪು ವೃದ್ಧ ದಂಪತಿಯ ಬಾಳಲ್ಲಿ ಬದುಕಿನ ಆಶಾಭಾವ ಮೂಡಿಸಿದೆ. ಜೊತೆಗೆ ಚರ್ಚೆಗೆ ಗ್ರಾಸವಾಗಿದೆ

ವರದಿ: ಅಶೋಕ್, ಟಿವಿ9, ಮಂಗಳೂರು

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ