AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್ ಮಹತ್ವದ ಆದೇಶ: RTE ಅಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿರಾಸೆ

ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್‌ಟಿಇ) ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿತ್ತು. ಆದ್ರೆ, ಇದೀಗ ಇದಕ್ಕೆ ಕರ್ನಾಟಕ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಈವರೆಗೆ 8ನೇ ತರಗತಿವರೆಗೆ ಪಡೆಯುತ್ತಿದ್ದ ಉಚಿತ ಶಿಕ್ಷಣವನ್ನು10ನೇ ತರಗತಿಯವರೆಗೆ ವಿಸ್ತರಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗೆ ಕೋರ್ಟ್​ ಮಧ್ಯಂತರ ತಡೆ ನೀಡಿದೆ.

ಕೋರ್ಟ್ ಮಹತ್ವದ ಆದೇಶ:  RTE ಅಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿರಾಸೆ
ಕರ್ನಾಟಕ ಹೈಕೋರ್ಟ್​​ Image Credit source: Getty Images
Ramesha M
| Edited By: |

Updated on: Jun 11, 2026 | 3:37 PM

Share

ಬೆಂಗಳೂರು, (ಜೂನ್ 11): SC,ST ವಿದ್ಯಾರ್ಥಿಗಳಿಗೆ (Students)  RTE ಅಡಿ 8ನೇ ತರಗತಿವರೆಗೆ ಇದ್ದ ಉಚಿತ ಶಿಕ್ಷಣವನ್ನು (Free Education)  10ನೇ ತರಗತಿಯವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗೆ ಕೋರ್ಟ್​ ಮಧ್ಯಂತರ ತಡೆ ನೀಡಿದೆ. 2026ರ ಮೇ 21ರಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ(KAMS) ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ಪೀಠ, ಸರ್ಕಾರದ ಸುತ್ತೋಲೆಗೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಮುಖ್ಯಾಂಶಗಳು

  • SC And ST ವಿದ್ಯಾರ್ಥಿಗಳಿಗೆ RTE ಅಡಿ 9, 10 ನೇ ತರಗತಿಗೆ ಪ್ರವೇಶ ವಿಚಾರ
  • ರಾಜ್ಯ ಸರ್ಕಾರದ ಸುತ್ತೋಲೆಗೆ ಹೈಕೋರ್ಟ್ ಮಧ್ಯಂತರ ತಡೆ
  • ಮೇ 21, 2026 ರಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿತ್ತು
  • ಸರ್ಕಾರದ ಕ್ರಮ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ

SC,ST ವಿದ್ಯಾರ್ಥಿಗಳ 8ನೇ ತರಗತಿವರೆಗಿನ RTE ಪ್ರವೇಶವನ್ನು 9, 10ನೇ ತರಗತಿಗೆ ವಿಸ್ತರಿಸಲಾಗಿದ್ದು, ಈ ಸಂಬಂಧ ಮೇ 21, 2026ರಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿತ್ತು. ಆದ್ರೆ, ಇದನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (KAMS) ಹೈಕೋರ್ಟ್​​​​ಗೆ ಮೊರೆ ಹೋಗಿದ್ದು, ಆರ್‌ಟಿಇ ಅಡಿ 6ರಿಂದ 14 ವರ್ಷದೊಳಗಿನವರಿಗೆ ಉಚಿತ ಶಿಕ್ಷಣಕ್ಕೆ ಅವಕಾಶವಿದೆ. SC, ST ವರ್ಗಕ್ಕೆ ಮಾತ್ರ 9, 10ನೇ ತರಗತಿಗೆ ವಿಸ್ತರಣೆಗೆ ಅವಕಾಶವಿಲ್ಲ. ಆರ್‌ಟಿಇ ಕಾನೂನಿನ ಉಲ್ಲಂಘನೆ, ಸಮಾನತೆಯ ಹಕ್ಕಿನ ಉಲ್ಲಂಘನೆ. ಹೀಗಾಗಿ ಸರ್ಕಾರದ ಸುತ್ತೋಲೆಗೆ ತಡೆ ನೀಡಲು ಆದೇಶಿಸಬೇಕೆಂದು ಮನವಿ ಮಾಡಿತ್ತು.ಇದನ್ನ ವಿಚಾರಣೆ ನಡೆಸಿದ ಕೋರ್ಟ್, ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಮನವಿಯನ್ನು ಪುರಸ್ಕರಿಸಿದ್ದು, ಸುತ್ತೋಲೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ. ಇದರಿಂದ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಇದನ್ನೂ ಓದಿ: 6 ಸಾವಿರ ಕೊಟ್ರೆ ಒಂದು ವಿಷಯ ಪಾಸ್​​: ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮತ್ತೊಂದು ಕಳ್ಳಾಟ ಬಯಲು

ಆರ್‌ಟಿಐ ಅಡಿ ಖಾಸಗಿ ಶಾಲೆಗೆ ಸೇರಿರುವ ಮಕ್ಕಳಿಗೆ 8ನೇ ಕ್ಲಾಸ್‌ ವರೆಗೆ ಉಚಿತ ಶಿಕ್ಷಣಕ್ಕೆ ಅವಕಾಶ ಇತ್ತು. ಆರ್‌ಟಿಇ ಕಾಯ್ದೆ ಜಾರಿಯಾದ ವರ್ಷದಿಂದ ಈವರೆಗೆ ಖಾಸಗಿ ಶಾಲೆಗಳಲ್ಲಿ ಆರ್‌ಟಿಇ ಸೀಟುಗಳಿಗೆ ಪ್ರವೇಶ ಪಡೆದಿರುವ ಮಕ್ಕಳಿಗೆ 8ನೇ ತರಗತಿ ವರೆಗಿನ ಶಿಕ್ಷಣದ ಶುಲ್ಕವನ್ನು ಸರ್ಕಾರವೇ ಸಂಬಂಧಿಸಿದ ಶಾಲೆಗಳಿಗೆ ಮರು ಪಾವತಿಸುತ್ತಾ ಬಂದಿದೆ. ಆದ್ರೆ, ಎಸ್ಸಿ, ಎಸ್ಟಿ ಸಮುದಾಯದ ವಿದ್ಯಾರ್ಥಿಗಳಿಗೆ 8ನೇ ತರಗತಿ ಮುಗಿದ ನಂತರವೂ ಅದೇ ಖಾಸಗಿ ಶಾಲೆಗಳಲ್ಲಿ 9 ಮತ್ತು 10ನೇ ತರಗತಿಯವರೆಗೆ ಉಚಿತ ಶಿಕ್ಷಣ ವಿಸ್ತರಿಸಿ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ramesha M
Ramesha M