AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿ.ಕೆ.ಶಿವಕುಮಾರ್‌ಗೆ ಹೈಕೋರ್ಟ್ ಬಿಗ್ ರಿಲೀಫ್, ತನಿಖೆಗೆ ಮಧ್ಯಂತರ ತಡೆ

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿ.ಕೆ.ಶಿವಕುಮಾರ್‌ಗೆ ಹೈಕೋರ್ಟ್ ಬಿಗ್ ರಿಲೀಫ್, ತನಿಖೆಗೆ ಮಧ್ಯಂತರ ತಡೆ
ಡಿಕೆ ಶಿವಕುಮಾರ್
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Feb 10, 2023 | 5:26 PM

Share

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ (DK Shivakumar)​ ಕರ್ನಾಟಕ ಹೈಕೋರ್ಟ್ (Karnataka High Court)​ ಬಿಗ್ ರಿಲೀಫ್ ನೀಡಿದೆ. ಫೆಬ್ರವರಿ 24ರವರೆಗೆ ತನಿಖೆಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್ ಇಂದು(ಫೆಬ್ರವರಿ 10) ಆದೇಶ ಹೊರಡಿಸಿದೆ. ಇದರಿಂದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯಲ್ಲಿ ಬ್ಯುಸಿಯಾಗಿರುವ ಡಿಕೆ ಶಿವಕುಮಾರ್​ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಇದನ್ನೂ ಓದಿ: DK Shivakumar: ನನ್ನ ಮಗಳ ಫೀಸ್ ಬಗ್ಗೆ ಮಾಹಿತಿ ಬೇಕಂತೆ; ಸಿಬಿಐಗೆ ಬುದ್ಧಿ ಹೇಳುತ್ತೇನೆ ಎಂದ ಡಿಕೆ ಶಿವಕುಮಾರ್

ತನಿಖಾಧಿಕಾರಿ ತನಿಖೆಯ ಪ್ರಗತಿ ವರದಿ ಹಾಜರುಪಡಿಸಲಿ. ಫೆಬ್ರವರಿ 24ರ ಒಳಗೆ ತನಿಖೆ ವರದಿ ಸಲ್ಲಿಸಲಿ. ಅಲ್ಲಿಯವರೆಗೆ ತನಿಖೆ ಮುಂದುವರಿಸದಂತೆ ಹೈಕೋರ್ಟ್ ಸೂಚನೆ ನೀಡಿದೆ. ಇದರಿಂದಾಗಿ ಡಿಕೆ ಶಿವಕುಮಾರ್ ಗೆ ಸ್ವಲ್ಪ ದಿನಗಳ ಸಮಾಯವಕಾಶ ದೊರೆತಿದ್ದು, ಸದ್ಯ ನಿರಾಳರಾಗಿದ್ದಾರೆ.

ಈ ಪ್ರಕರಣದಲ್ಲಿ ಸಿಬಿಐ ತನಿಖೆಗೆ ತಡೆ ಕೋರಿ ಡಿಕೆ ಶಿವಕುಮಾರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸಿಬಿಐ ಅಧಿಕಾರಿಗಳು ಪದೇ ಪದೇ ನೋಟಿಸ್ ನೀಡುತ್ತಿದ್ದಾರೆ. ಹೆಂಡತಿ, ಮಗಳಿಗೆ ನೋಟಿಸ್ ನೀಡುವ ಮೂಲಕ ಮಾನಸಿಕ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದರು.

ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

ತಮ್ಮ ವಿರುದ್ಧದ ಕೇಸ್‌ನ ತನಿಖೆಗೆ ಮಧ್ಯಂತರ ತಡೆಯಾಜ್ಞೆ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ನನ್ನ ವಿರುದ್ಧ 40 ಕೇಸ್‌ ವಿಚಾರಣೆ ನಡೆಯುತ್ತಿದೆ. ಇದರಲ್ಲಿ ಯಾವುದು ಎಂದು ವಕೀಲರ ಜೊತೆಗೆ ಮಾತನಾಡುತ್ತೇನೆ. ಕೇಸ್‌ನ ತನಿಖೆಗೆ ಹೈಕೋರ್ಟ್‌ ತಡೆ ನೀಡಿದ್ದು ಬಹಳ ಸಂತೋಷವಾಗಿದೆ. ಕೋರ್ಟ್‌ ಮೇಲೆ, ನ್ಯಾಯದ ಮೇಲೆ ನನಗೆ ನಂಬಿಕೆ ಇದೆ ಎಂದರು.

ನ್ಯಾಷನಲ್‌ ಹೆರಾಲ್ಡ್‌ ಕೇಸ್‌ಗೆ ಸಂಬಂಧಪಟ್ಟಂತೆ ನೋಟಿಸ್‌ ಬಂದಿದೆ. ನಾನು ತುಂಬಾ ಬ್ಯುಸಿಯಾಗಿದ್ದೆ. ವಕೀಲರ ಜೊತೆ ಮಾತನಾಡುತ್ತೇನೆ. ಹೈಕೋರ್ಟ್‌ನಿಂದ ಯಾವ ಆದೇಶ ಬಂದಿದೆ ಎಂದು ಮಾಹಿತಿ ಇಲ್ಲ. ವಕೀಲರಿಂದ ಮಾಹಿತಿ ಪಡೆದು ಈ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದರು.

Published On - 5:14 pm, Fri, 10 February 23

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ