AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯತ್ನಾಳ್ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ,ಪ್ರಕರಣ ರದ್ದು ಕೋರಿ ರಮೇಶ್ ಜಾರಕಿಹೊಳಿ ಅರ್ಜಿ

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ಧದ ಕೇಸ್​ಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಹೈಕೋರ್ಟ್ ಏಕಸದಸ್ಯ ಪೀಠ, ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಮತ್ತೊಂದೆಡೆ ಮತ್ತೋರ್ವ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ತಮ್ಮ ವಿರುದ್ಧ ಪ್ರಕರಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಯತ್ನಾಳ್ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ,ಪ್ರಕರಣ ರದ್ದು ಕೋರಿ ರಮೇಶ್ ಜಾರಕಿಹೊಳಿ ಅರ್ಜಿ
ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ
ರಮೇಶ್​ ಎಮ್​.
| Edited By: |

Updated on:Jan 12, 2024 | 6:20 PM

Share

ಬೆಂಗಳೂರು/ವಿಜಯಪುರ, (ಜನವರಿ 12): ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್  (Basangouda Patil Yatnal) ವಿರುದ್ಧದ ಕೇಸ್​ಗೆ ಕರ್ನಾಟಕ ಹೈಕೋರ್ಟ್ (Karnataka high Court) ತಡೆ ನೀಡಿದೆ. ವಿಧಾನಸಭಾ ಚುನಾವಣೆ (Karnataka Assembly Elections 2023) ವೇಳೆ‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಡಿಯಲ್ಲಿ  ಕೇಸ್ ದಾಖಲಾಗಿತ್ತು. ಆದ್ರೆ, ಇದೀಗ ಈ ಪ್ರಕರಣಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ, ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಕೋರ್ಟ್​ ಮೆಟ್ಟಿಲೇರಿದ ರಮೇಶ ಜಾರಕಿಹೊಳಿ

ಮತ್ತೊಂದೆಡೆ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಕೋರುವಂತೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಸಾಲ ಪಾವತಿಸದೆ ಸಹಕಾರಿ ಬ್ಯಾಂಕ್‌ಗೆ ವಂಚನೆ ಆರೋಪ ಪ್ರಕರಣವನ್ನು ರದ್ದು ಕೋರಿ ರಮೇಶ್ ಜಾರಕಿಹೊಳಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಕಂಪನಿಯ ಹುದ್ದೆಗಳಿಗೆ ರಾಜೀನಾಮೆ ನೀಡಿ ಹೊಸಬರ ನೇಮಕವಾಗಿದೆ. ಎನ್‌ಸಿಎಲ್‌ಟಿಯಲ್ಲಿ ವಿಚಾರಣೆ ಇರುವಾಗ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕ್ರಿಮಿನಲ್‌ ಪ್ರಕರಣ ರದ್ದು ಮಾಡುವಂತೆ ರಮೇಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಗಾಗಿ 232 ಕೋಟಿ 88 ಲಕ್ಷ ರೂ. ಸಾಲ ಪಡೆದು ಪಡೆದು ಬಳಿಕ ಮರುಪಾವತಿಸದ ಹಿನ್ನೆಲೆಯಲ್ಲಿ ಅಪೆಕ್ಸ್ ಬ್ಯಾಂಕ್ ದೂರು ನೀಡಿತ್ತು. ಈ ದೂರಿನ ಅನ್ವಯ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:04 pm, Fri, 12 January 24

Follow Us
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್