AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಗೋಪಾಲ್ ಜೋಶಿಗೆ ಬಿಗ್​ ರಿಲೀಫ್

ಗೋಪಾಲ್ ಜೋಶಿ ಅವರನ್ನು ಲೋಕಸಭಾ ಟಿಕೆಟ್‌ಗಾಗಿ ಹಣ ಪಡೆದ ಆರೋಪದ ಮೇಲೆ ಬಂಧಿಸಲಾಗಿತ್ತು. ಆದರೆ, ಹೈಕೋರ್ಟ್‌ನ ಏಕಸದಸ್ಯ ಪೀಠವು ಎಫ್‌ಐಆರ್ ಮತ್ತು ನಂತರದ ಕ್ರಮಗಳಿಗೆ ತಡೆಯಾಜ್ಞೆ ನೀಡಿದೆ. ಹಣಕಾಸಿನ ವಿವಾದಕ್ಕೆ ಕ್ರಿಮಿನಲ್ ಪ್ರಕರಣ ದಾಖಲಿಸಿರುವುದರಿಂದ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ.

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಗೋಪಾಲ್ ಜೋಶಿಗೆ ಬಿಗ್​ ರಿಲೀಫ್
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಗೋಪಾಲ್ ಜೋಶಿಗೆ ಬಿಗ್​ ರಿಲೀಫ್
Ramesha M
| Edited By: |

Updated on: Oct 28, 2024 | 5:58 PM

Share

ಬೆಂಗಳೂರು, ಅಕ್ಟೋಬರ್​ 28: ಲೋಕಸಭಾ ಟಿಕೆಟ್ ಕೊಡಿಸಲು ಹಣ ಪಡೆದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಗೋಪಾಲ್ ಜೋಶಿಗೆ (Gopal Joshi) ಎಫ್ಐಆರ್ ಹಾಗೂ ನಂತರದ ಕ್ರಮಗಳಿಗೆ ಹೈಕೋರ್ಟ್ ಏಕಸದಸ್ಯ ಪೀಠದಿಂದ ತಡೆಯಾಜ್ಞೆ ನೀಡಿದೆ. ಹಣದ ವಿವಾದವೆಂಬ ಕಾರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ.

ಗೋಪಾಲ ಜೋಶಿ ಪರ ಹಿರಿಯ ವಕೀಲ ಡಿ.ಆರ್.ರವಿಶಂಕರ್ ವಾದ ಮಂಡಿಸಿದ್ದು, ಹಣವನ್ನು ಹಿಂದಿರುಗಿಸಲು ಅರ್ಜಿದಾರರು ಒಪ್ಪಿದ್ದರು. ಹಣಕಾಸಿನ ವ್ಯವಹಾರಕ್ಕೆ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಗೋಪಾಲ ಜೋಶಿಗೆ ಹೈಕೋರ್ಟ್​​ನಿಂದ ಮಧ್ಯಂತರ ರಿಲೀಫ್ ನೀಡಲಾಗಿದೆ.

ಇದನ್ನೂ ಓದಿ: ವಂಚನೆ ಪ್ರಕರಣದಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸುನೀತಾ ಚೌಹಾಣ್ ಸ್ಪಷ್ಟನೆ

ಗೋಪಾಲ್ ಜೋಶಿ ವಿರುದ್ದ ಸುನೀತಾ ಚವ್ಹಾಣ್​ ಎನ್ನುವವರು ದೂರು ನೀಡಿದ್ದರು. ಹೀಗಾಗಿ ಅವರನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಲೋಕಸಭಾ ಟಿಕೆಟ್ ಕೊಡಿಸುತ್ತೇನೆ ಎಂದು ಗೋಪಾಲ್​ ಜೋಶಿ 2 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದು, 25 ಲಕ್ಷ ರೂ. ಪಡೆದಿದ್ದರು. ಆದರೆ ಯಾವಾಗ ಟಿಕೆಟ್ ಸಿಗದಿದ್ದಾಗ ನಾವು ಕೊಟ್ಟ ಹಣ ವಾಪಸ್ ಕೇಳಿದ್ದು, ನೀಡಿರಲಿಲ್ಲ. ಹೀಗಾಗಿ ನಾವು ಅನಿವಾರ್ಯವಾಗಿ ದೂರು ನೀಡಿದ್ದೇವು ಎಂದು ಸುನೀತಾ ಚವ್ಹಾಣ್​ ಹೇಳಿದ್ದರು.

ಅಷ್ಟೇ ಅಲ್ಲದೆ ಈ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಅವರು ಪಾತ್ರ ಏನೂ ಇಲ್ಲ. ಇದರಲ್ಲಿ ಹೈಕಮಾಂಡ್ ಹೆಸರನ್ನ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಕೂಡ ಅವರು ಹೇಳಿದ್ದರು.

ಎಸಿಪಿ ಚಂದನ್ ನೇತೃತ್ವದಲ್ಲಿ ಬೆಂಗಳೂರಿನಿಂದ ಆಗಮಿಸಿದ ತಂಡ ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿನ ಗೋಪಾಲ ಜೋಶಿ ಮನೆಗೆ ಸುನೀತಾ ಚವ್ಹಾಣ್​ರನ್ನು ಕರೆತಂದಿದ್ದರು. ಅಶೋಕನಗರ ಪೊಲೀಸರ ತಂಡ ಮನೆಯಲ್ಲಿ ಪಂಚನಾಮೆ ಮಾಡಿದ್ದರು.

ಇದನ್ನೂ ಓದಿ: ಹಳೇ ಹುಬ್ಬಳ್ಳಿ ಕೇಸ್​ ಹಿಂಪಡೆದಿದ್ದಕ್ಕೆ ಜೋಶಿ ವಾಗ್ದಾಳಿ: ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾದ ಬಿಜೆಪಿ

ಬಳಿಕ ಅವರನ್ನು ಸುನೀತಾ ಚವ್ಹಾಣ್​ರನ್ನು ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಮಾಡಿದ್ದರು. ಈ ವೇಳೆ ನಾನು ಯಾವದೇ ಮಾಹಿತಿ ನೀಡಲ್ಲ. ಪ್ರಕರಣ ತನಿಖೆ ಹಂತದಲ್ಲಿದೆ ಮಾತಾಡಲ್ಲ ಎಂದು ಯಾವದೇ ಪ್ರತಿಕ್ರಿಯೆ ನೀಡದೆ ತೆರಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ramesha M
Ramesha M
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ